ಕೊರೊನಾ ಮಿತಿಮೀರಿ ಹರಡುತ್ತಿರುವ ಸಂದರ್ಭದಲ್ಲಿ ಶಾಲೆ ತೆರೆಯುವುದು ಸರಿಯಲ್ಲ-ಸಿದ್ದರಾಮಯ್ಯ

ಈ ಹಿಂದೆ ಸರ್ಕಾರ ವಿವಿಧ ತರಗತಿಗಳಿಗೆ ಪರೀಕ್ಷೆ ನಡೆಸುವ ಇರಾದೆ ವ್ಯಕ್ತಪಡಿಸಿದಾಗ ಸರ್ಕಾರದ ನಿಲುವಿಗೆ ನಾನು ಬೆಂಬಲಿಸಿದ್ದೆ. ಆದರೆ ಈಗಿನ ಪರಿಸ್ಥಿತಿಯೇ ಬೇರೆಯಿದೆ. ಕೊರೊನಾ ಮಿತಿಮೀರಿ ಹರಡುತ್ತಿರುವ ಇಂಥಾ ಸಂದರ್ಭದಲ್ಲಿ ಶಾಲೆಗಳನ್ನು ತೆರೆಯುವುದು ದೊಡ್ಡ ಅವಘಡಕ್ಕೆ ಎಡೆಮಾಡಿಕೊಡಲಿದೆ' ಎಂದು ಸಿದ್ಧರಾಮಯ್ಯ ಹೇಳಿದ್ದಾರೆ

Last Updated : Oct 9, 2020, 05:24 PM IST
ಕೊರೊನಾ ಮಿತಿಮೀರಿ ಹರಡುತ್ತಿರುವ ಸಂದರ್ಭದಲ್ಲಿ ಶಾಲೆ ತೆರೆಯುವುದು ಸರಿಯಲ್ಲ-ಸಿದ್ದರಾಮಯ್ಯ   title=

ಬೆಂಗಳೂರು: ಈ ಹಿಂದೆ ಸರ್ಕಾರ ವಿವಿಧ ತರಗತಿಗಳಿಗೆ ಪರೀಕ್ಷೆ ನಡೆಸುವ ಇರಾದೆ ವ್ಯಕ್ತಪಡಿಸಿದಾಗ ಸರ್ಕಾರದ ನಿಲುವಿಗೆ ನಾನು ಬೆಂಬಲಿಸಿದ್ದೆ. ಆದರೆ ಈಗಿನ ಪರಿಸ್ಥಿತಿಯೇ ಬೇರೆಯಿದೆ. ಕೊರೊನಾ ಮಿತಿಮೀರಿ ಹರಡುತ್ತಿರುವ ಇಂಥಾ ಸಂದರ್ಭದಲ್ಲಿ ಶಾಲೆಗಳನ್ನು ತೆರೆಯುವುದು ದೊಡ್ಡ ಅವಘಡಕ್ಕೆ ಎಡೆಮಾಡಿಕೊಡಲಿದೆ' ಎಂದು ಸಿದ್ಧರಾಮಯ್ಯ ಹೇಳಿದ್ದಾರೆ

ನಿತ್ಯ ರಾಜ್ಯದಲ್ಲಿ 10,000 ದ ಅಸುಪಾಸು ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗುತ್ತಿವೆ, ಈ ವರೆಗೆ 7,857 ಮಂದಿ ಈ ಮಾರಕ ರೋಗಕ್ಕೆ ಬಲಿಯಾಗಿದ್ದಾರೆ. ಆದರೂ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಪಾಡಿಕೊಳ್ಳುವಲ್ಲಿ ಪ್ರಜ್ಞಾವಂತರೇ ಎಡವುತ್ತಿದ್ದಾರೆ ಅಂದಮೇಲೆ ಚಿಕ್ಕ ಮಕ್ಕಳಿಂದ ಇದನ್ನು ನಿರೀಕ್ಷಿಸಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ ಕೊರೊನಾಕ್ಕಿಂತಲೂ ಅಪಾಯಕಾರಿ-ಸಿದ್ಧರಾಮಯ್ಯ

ಮಕ್ಕಳು ಶಾಲೆಗಳಿಂದ ಕೊರೊನಾಗೆ ತುತ್ತಾಗಿ ಮನೆಗೆ ಬಂದರೆ ಮಕ್ಕಳ ಜೀವಕ್ಕೂ ಆಪತ್ತು, ಜೊತೆಗೆ ಮನೆಯಲ್ಲಿರುವ ಹಿರಿಯರು, ರೋಗಿಗಳ ಜೀವಕ್ಕೂ ಆಪತ್ತು ಬರಲಿದೆ. ಈಗಾಗಲೇ ಅಮೆರಿಕಾ ಹಾಗೂ ಯುರೋಪಿನ ಕೆಲವು ದೇಶಗಳು ಶಾಲೆಗಳನ್ನು ತೆರೆದು ಕೈಸುಟ್ಟುಕೊಂಡಿವೆ, ಅವುಗಳ ಸಾಲಿಗೆ ನಾವು ಸೇರುವುದು ಬೇಡ ಎಂದು ಎಚ್ಚರಿಸಿದ್ದಾರೆ 

ಶಾಲೆಗಳು ತೆರೆಯದಿರುವ ಕಾರಣಕ್ಕೆ ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪದ್ಧತಿಗಳು ಹೆಚ್ಚುತ್ತಿರುವುದು ಸತ್ಯವಾದರೂ ಅದನ್ನು ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳ ಮೂಲಕ ನಿಯಂತ್ರಿಸಲು ಸಾಕಷ್ಟು ಅವಕಾಶಗಳಿವೆ. ಒಂದು ಸಮಸ್ಯೆಯ ಪರಿಹಾರಕ್ಕಾಗಿ ಇನ್ನೊಂದು ಹೊಸ ಸಮಸ್ಯೆಯನ್ನು ಹುಟ್ಟುಹಾಕುವುದು ಸರಿಯಲ್ಲ ತಿಳಿಸಿದರು
 
ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ತಪ್ಪು ನಿರ್ಧಾರವನ್ನು ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಳ್ಳಬಾರದು. ಮಕ್ಕಳಿಗೆ ಆನ್‌ಲೈನ್ ಶಿಕ್ಷಣಕ್ಕೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ, ಆ ಮೂಲಕವೇ ಶಿಕ್ಷಣ ನೀಡಬೇಕು ಹಾಗೂ ಪ್ರಸಕ್ತ ವರ್ಷ ಎಲ್ಲಾ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗೆ ಬಡ್ತಿ ನೀಡಬೇಕು ಎಂದು ಸಲಹೆ ನೀಡುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Trending News