ಕೊನೆಗೂ ರಾಹುಲ್ ಗಾಂಧಿಗೆ ಕೂಡಿಬಂತಾ ಕಂಕಣ ಭಾಗ್ಯ? ಮದುವೆ ಬಗ್ಗೆ ಕಾಶ್ಮೀರಿ ವಿದ್ಯಾರ್ಥಿನಿಯರ ಬಳಿ ಕಾಂಗ್ರೆಸ್ ನಾಯಕ ಹೇಳಿದ್ದೇನು ಗೊತ್ತಾ? ವಿಡಿಯೋ ನೋಡಿ!

Rahul Gandhi Marriage: ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಶ್ಮೀರಿ ವಿದ್ಯಾರ್ಥಿನಿಯರ ಗುಂಪಿನೊಂದಿಗೆ ಹಲವು ವಿಷಯಗಳ ಕುರಿತು ಮಾತನಾಡಿದರು. ಈ ಸಮಯದಲ್ಲಿ ಅವರು ಮತ್ತೊಮ್ಮೆ ತಮ್ಮ ಮದುವೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ..   

Written by - Savita M B | Last Updated : Aug 27, 2024, 06:40 PM IST
  • ರಾಹುಲ್ ಗಾಂಧಿಯವರ ಮದುವೆ ಯಾವಾಗ?
  • ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕೊನೆಗೂ ರಾಹುಲ್ ಗಾಂಧಿಗೆ ಕೂಡಿಬಂತಾ ಕಂಕಣ ಭಾಗ್ಯ? ಮದುವೆ ಬಗ್ಗೆ ಕಾಶ್ಮೀರಿ ವಿದ್ಯಾರ್ಥಿನಿಯರ ಬಳಿ ಕಾಂಗ್ರೆಸ್ ನಾಯಕ ಹೇಳಿದ್ದೇನು ಗೊತ್ತಾ? ವಿಡಿಯೋ ನೋಡಿ! title=

Rahul Gandhi: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಆಗಸ್ಟ್ 21 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಹೋಗಿ ಅಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿದರು. ಜೊತೆಗೆ ಕಾಶ್ಮೀರದ ಕೆಲವು ಯುವ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಇದೀಗ ರಾಹುಲ್ ಗಾಂಧಿಯವರು ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಿಡಿಯೋದಲ್ಲಿ ರಾಹುಲ್ ಕಾಶ್ಮೀರದ ವಿದ್ಯಾರ್ಥಿನಿಯರೊಂದಿಗೆ ಸುಮಾರು 10 ನಿಮಿಷಗಳ ಕಾಲ ಮಾತನಾಡಿದ್ದಾರೆ. ಈ ವೇಳೆ ವಿದ್ಯಾರ್ಥಿನಿಯೊಬ್ಬಳು ರಾಹುಲ್ ಜೀ, ನೀವು ಯಾವಾಗ ಮದುವೆಯಾಗುತ್ತೀರಿ? ಎಂದು ಪ್ರಶ್ನೆಗ ಕೇಳಿದ್ದಾಳೆ.. 

ಈ ಪ್ರಶ್ನಗೆ ಉತ್ತರಿಸಿದ ರಾಹುಲ್‌ ಗಾಂಧಿಯವರು "ಸದ್ಯಕ್ಕೆ ಯಾವುದೇ ಯೋಚನೆ ಇಲ್ಲ... ನಾನು ಈಗ ಕಳೆದ 20-30 ವರ್ಷಗಳಿಂದ ಈ ಒತ್ತಡದಿಂದ ಹೊರಬಂದಿದ್ದೇನೆ" ಎಂದು ಹೇಳಿದ್ದಾರೆ.. 

ಇನ್ನು "ಜಮ್ಮು ಮತ್ತು ಕಾಶ್ಮೀರಕ್ಕೆ ಸಂಪೂರ್ಣ ರಾಜ್ಯತ್ವವನ್ನು ಮರುಸ್ಥಾಪಿಸಬೇಕೆಂಬ ಬೇಡಿಕೆಯನ್ನು ಮತ್ತೊಮ್ಮೆ ಪ್ರಸ್ತಾಪಿಸಿದ ರಾಹುಲ್‌ ಗಾಂಧಿಯವರು ಈ ಕೇಂದ್ರಾಡಳಿತ ಪ್ರದೇಶವನ್ನು ದೆಹಲಿಯಿಂದ ನಡೆಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಕೇಳಿದ ಪ್ರಶ್ನೆಗೆ, ಪ್ರಧಾನಿಯವರೊಂದಿಗೆ ನನ್ನ ಸಮಸ್ಯೆ ಎಂದರೆ ಅವರು ಯಾರ ಮಾತನ್ನೂ ಕೇಳುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು. ಮೊದಲಿನಿಂದಲೂ ಅವರು ಸರಿ ಎಂದು ಭಾವಿಸುವ ಸಮಸ್ಯೆ ಇದೆ, ಯಾರಾದರೂ ತಪ್ಪು ಎಂದು ತೋರಿಸಿದರೂ ಅವರು ಅದನ್ನು ಒಪ್ಪಿಕೊಳ್ಳುವುದಿಲ್ಲ. ಈ ರೀತಿಯ ವ್ಯಕ್ತಿಯು ಯಾವಾಗಲೂ ಕೆಲವು ಸಮಸ್ಯೆಗಳನ್ನು ಅಥವಾ ಅದಕ್ಕೆ ಪ್ರತಿಯಾಗಿ ಇನ್ನೊಂದನ್ನು ಸೃಷ್ಟಿಸುತ್ತಾರೆ.."

ಇದನ್ನೂ ಓದಿ-ಭಾರತದ ಈ ಗ್ರಾಮದಲ್ಲಿ ಯಾವ ಮಹಿಳೆಯೂ ಬಟ್ಟೆ ಧರಿಸುವುದಿಲ್ಲ! ಇದರ ಹಿಂದಿನ ಕಾರಣ ತಿಳಿದರೆ ಶಾಕ್ ಆಗುತ್ತೀರಿ!

"ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಬಗ್ಗೆಯೂ ಮಾತನಾಡಿರುವ ಕಾಂಗ್ರೆಸ್ ನಾಯಕ, ಭಾರತೀಯ ಇತಿಹಾಸದಲ್ಲಿ ರಾಜ್ಯವೊಂದರ ಸಂಪೂರ್ಣ ರಾಜ್ಯತ್ವವನ್ನು ಕಸಿದುಕೊಂಡಿರುವುದು ಇದೇ ಮೊದಲು.. ಆದರೆ, ಈಗ ನಮಗೆ ರಾಜ್ಯತ್ವವನ್ನು ಮರಳಿ ಪಡೆಯುವುದು ತತ್ವವಾಗಿದೆ ಮತ್ತು ಇದು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಜನರಿಗೆ ಪ್ರಾತಿನಿಧ್ಯವನ್ನು ಒಳಗೊಂಡಿದೆ. ಈ ರಾಜ್ಯವನ್ನು ದೆಹಲಿಯಿಂದ ನಡೆಸುವುದರಲ್ಲಿ ಅರ್ಥವಿಲ್ಲ ಎಂದು ರಾಹುಲ್ ಅವರು ವಿದ್ಯಾರ್ಥಿನಿಯರಿಗೆ ತಿಳಿಸಿದರು.  

ಕಳೆದ ಒಂದು ವರ್ಷದಲ್ಲಿ ಮೂರನೇ ಬಾರಿಗೆ ರಾಹುಲ್ ಗಾಂಧಿ ಮದುವೆ ಚರ್ಚೆ: 
ಬರೀ ಒಂದೇ ವರ್ಷದಲ್ಲಿ ಮೂರು ಬಾರಿ ರಾಹುಲ್ ಗಾಂಧಿಯವರ ಮದುವೆ ಬಗ್ಗೆ ಚರ್ಚೆ ನಡೆದಿದೆ. ಮೂರು ತಿಂಗಳ ಹಿಂದೆ ಉತ್ತರಪ್ರದೇಶದ ರಾಯ್ ಬರೇಲಿಯಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಮದುವೆಯ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಅಲ್ಲದೇ ಕಳೆದ ವರ್ಷ ಜೂನ್ ನಲ್ಲಿ ಲಾಲು ಯಾದವ್ ಕೂಡ ರಾಹುಲ್ ಅವರಿಗೆ ಬೇಗ ಮದುವೆಯಾಗುವಂತೆ ಹೇಳಿದ್ದರು.

ಇದನ್ನೂ ಓದಿ-ಬಾದಾಮಿಯಂತೆ ಸಿಪ್ಪೆಗಳು ಸಹ ಪೌಷ್ಟಿಕವಾಗಿದೆ, ಅವುಗಳನ್ನು ನಿಮ್ಮ ದೈನಂದಿನ ಜೀವನದಲ್ಲಿ ಸೇರಿಸಿ..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News