ನವದೆಹಲಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು, ಇದು ವೈಎಸ್ಆರ್ ಕಾಂಗ್ರೆಸ್ ಪಕ್ಷವು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್‌ಡಿಎ) ಸೇರಬಹುದು ಎಂಬ ಊಹಾಪೋಹಗಳಿಗೆ ಮತ್ತೊಮ್ಮೆ ಕಾರಣವಾಗಿದೆ.


ನಿಮ್ಮ ಮಕ್ಕಳು ಓದಿದ್ದು ಯಾವ ಮೀಡಿಯಂ?: ಚಂದ್ರಬಾಬು ನಾಯ್ಡು ಗೆ ಸಿಎಂ ಜಗನ್ ಪ್ರಶ್ನೆ


'ಮಾನವೀಯತೆ ನನ್ನ ಧರ್ಮ, ಕೊಟ್ಟ ಮಾತು ಉಳಿಸಿಕೊಳ್ಳುವುದೇ ನನ್ನ ಜಾತಿ': ಸಿಎಂ ಜಗನ್ ಮೋಹನ್ ರೆಡ್ಡಿ

COMMERCIAL BREAK
SCROLL TO CONTINUE READING

ಶಿವಸೇನೆ ಮತ್ತು ಶಿರೋಮಣಿ ಅಕಾಲಿ ದಳದ ನಿರ್ಗಮನದ ನಂತರ ಬಿಜೆಪಿ ಎನ್‌ಡಿಎಯಲ್ಲಿ ಹೆಚ್ಚಿನ ಪಾಲುದಾರರನ್ನು ಬಯಸುತ್ತದೆ ಎಂಬ ಊಹಾಪೋಹಗಳಿವೆ ಮತ್ತು ರಾಜ್ಯಸಭೆಯಲ್ಲಿ ಎನ್‌ಡಿಎಗೆ ಹೆಚ್ಚಿನ ಬಲದ ಅಗತ್ಯವಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ಆಸಕ್ತಿ ತೋರಿದೆ ಎನ್ನಲಾಗಿದೆ.


ಜಗನ್ ರೆಡ್ಡಿ ಅವರ ವೈಎಸ್ಆರ್ ಕಾಂಗ್ರೆಸ್ ಪಕ್ಷ (ವೈಎಸ್ಆರ್ಸಿಪಿ) ಎನ್ಡಿಎಗೆ ಸೇರುವ ಯಾವುದೇ ಯೋಜನೆಯನ್ನು ನಿರಾಕರಿಸಿದೆ. ಕೊರೊನಾವೈರಸ್ ಸಾಂಕ್ರಾಮಿಕದ ಮಧ್ಯೆ ರಾಜ್ಯವು ತನ್ನ ಕೆಟ್ಟ ಆರ್ಥಿಕ ಸವಾಲುಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಕೇಂದ್ರದ ಜೊತೆ ಉತ್ತಮ ಸ್ನೇಹವನ್ನು ಹೊಂದುವುದು ಅನುಕೂಲಕರವಾಗಿದೆ ಎಂದು ಹಿರಿಯ ನಾಯಕರು ಹೇಳಿದ್ದಾರೆ.