ಉತ್ತರ ಪ್ರದೇಶದ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆಯೇ ಪ್ರಿಯಾಂಕಾ ಗಾಂಧಿ?

ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಊಹಾಪೋಹಗಳು ಮತ್ತು ವದಂತಿಗಳು ಹರಿದಾಡುತ್ತಿವೆ, ಮತ್ತು ಈ ವಿಷಯದ ಗೊಂದಲವನ್ನು ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಪರಿಹರಿಸಿದ್ದಾರೆ.

Written by - Zee Kannada News Desk | Last Updated : Sep 19, 2021, 07:57 PM IST
  • ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಊಹಾಪೋಹಗಳು ಮತ್ತು ವದಂತಿಗಳು ಹರಿದಾಡುತ್ತಿವೆ, ಮತ್ತು ಈ ವಿಷಯದ ಗೊಂದಲವನ್ನು ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಪರಿಹರಿಸಿದ್ದಾರೆ.
ಉತ್ತರ ಪ್ರದೇಶದ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆಯೇ ಪ್ರಿಯಾಂಕಾ ಗಾಂಧಿ? title=

ನವದೆಹಲಿ: ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಊಹಾಪೋಹಗಳು ಮತ್ತು ವದಂತಿಗಳು ಹರಿದಾಡುತ್ತಿವೆ, ಮತ್ತು ಈ ವಿಷಯದ ಗೊಂದಲವನ್ನು ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಪರಿಹರಿಸಿದ್ದಾರೆ.

ಮುಂಬರುವ ಉತ್ತರ ಪ್ರದೇಶ ಚುನಾವಣೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi) ಸಿಎಂ ಅಭ್ಯರ್ಥಿಯಾಗುತ್ತಾರೋ ಇಲ್ಲವೋ ಎಂದು ಮಾತನಾಡುತ್ತಾ, ಸಲ್ಮಾನ್ ಖುರ್ಷಿದ್ ಅವರು ಸಿಎಂ ಅಭ್ಯರ್ಥಿಯಾಗುವ ನಿರ್ಧಾರವನ್ನು ಸಂಪೂರ್ಣವಾಗಿ ಅವರಿಗೆ ಬಿಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: "ಉತ್ತರ ಪ್ರದೇಶದಲ್ಲಿ ನಾವು ಮೈತ್ರಿಮಾಡಿಕೊಳ್ಳಲು ಮುಕ್ತ ಮನಸ್ಸು ಹೊಂದಿದ್ದೇವೆ"

ಈಗ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸಲ್ಮಾನ್ ಖುರ್ಷಿದ್,'ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಮತ್ತು ಅವರು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಸ್ವತಃ ನಿರ್ಧರಿಸುತ್ತಾರೆ" ಎಂದು ಹೇಳಿದರು.ಪಂಜಾಬ್ ಕಾಂಗ್ರೆಸ್ ಬಿಕ್ಕಟ್ಟಿನ ನಡುವೆ ನವಜೋತ್ ಸಿಂಗ್ ಸಿಧು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿಯಾದರು.

ಮಾಧ್ಯಮದೊಂದಿಗೆ ಮಾತನಾಡುವಾಗ, ಖುರ್ಷಿದ್ ಪಕ್ಷವು ತನ್ನ ಪ್ರಸ್ತುತ ಅಧ್ಯಕ್ಷರ ಬಗ್ಗೆ ತೃಪ್ತಿ ಹೊಂದಿದೆ ಎಂದು ಹೇಳಿದರು.ಪ್ರಸ್ತುತ ಪಕ್ಷದ ಅಧ್ಯಕ್ಷರಿಗೆ ಪಕ್ಷವು ತೃಪ್ತಿ ನೀಡಿದೆ ಎಂದು ಖುರ್ಷಿದ್ ಹೇಳಿದ್ದರೂ, ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ವಿಭಾಗವು ಶನಿವಾರ ರಾಹುಲ್ ಗಾಂಧಿಯನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡುವ ನಿರ್ಣಯವನ್ನು ಅಂಗೀಕರಿಸಿತು,ಇದನ್ನು ದೆಹಲಿ ಪ್ರದೇಶ ಮಹಿಳಾ ಕಾಂಗ್ರೆಸ್ ಕೂಡ ಅನುಸರಿಸಿತು.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಳು ಮುಂದಿನ ವರ್ಷ ಏಪ್ರಿಲ್‌ನಲ್ಲಿ ಸ್ಪರ್ಧಿಸಲ್ಪಡುತ್ತವೆ.ಇತ್ತೀಚೆಗೆ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಪಕ್ಷದ ಸ್ಕ್ರೀನಿಂಗ್ ಸಮಿತಿಯ ಅಧ್ಯಕ್ಷರಾಗಿ ಜಿತೇಂದ್ರ ಸಿಂಗ್ ಅವರನ್ನು ನೇಮಿಸಿದರು.

ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ತನ್ನ ಪುತ್ರಿ ಮಿರಾಯಾಗೆ ಬರ್ತ್ ಡೇ ಶುಭ ಕೋರಿದ್ದು ಹೀಗೆ..!

2017 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 312 ವಿಧಾನಸಭಾ ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ.403 ಸದಸ್ಯರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಪಕ್ಷವು ಶೇಕಡಾ 39.67 ಮತಗಳನ್ನು ಪಡೆದುಕೊಂಡಿದೆ.ಸಮಾಜವಾದಿ ಪಕ್ಷ (ಎಸ್ಪಿ) 47 ಸ್ಥಾನಗಳನ್ನು, ಬಿಎಸ್ಪಿ 19 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಕೇವಲ ಏಳು ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News