ನವದೆಹಲಿ: ಕಾಂಗ್ರೆಸ್ ಮುಖಂಡ ಹಾಗೂ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಅವರು Zee news ವಿರುದ್ಧ ಸುಳ್ಳು ಆರೋಪ ಮಾಡಿ, ಅಪಮಾನ ಮಾಡಿದ ಬೆನ್ನೆಲ್ಲೇ ಸಿಧು ವಿರುದ್ಧ ಜೀ ನ್ಯೂಸ್ 1000 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ದಾಖಲಿಸಿದೆ. 


COMMERCIAL BREAK
SCROLL TO CONTINUE READING

'ಮಾಧ್ಯಮದ ಧ್ವನಿ ಅಡುಗಿಸಲು ಕಾಂಗ್ರೆಸ್ ಯತ್ನ': ಸುಧೀರ್ ಚೌಧರಿ


ಈ ವಿಚಾರವಾಗಿ ನವಜೋತ್ ಸಿಂಗ್ ಸಿಧು ಅವರು ಈ ನೋಟಿಸ್ ತಲುಪಿದ 24 ಗಂಟೆಗಳಲ್ಲಿ ಬಹಿರಂಗ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ನ್ಯಾಯಕ್ಕಾಗಿ ಸಿಧು ವಿರುದ್ಧ ಎಲ್ಲಾ ರೀತಿಯ ಕಾನೂನು ಹೋರಾಟಗಳನ್ನು ಮಾಡುವುದಾಗಿ ಜೀ ನ್ಯೂಸ್ ನೀಡಿರುವ ನೋಟಿಸ್'ನಲ್ಲಿ ಹೇಳಿದೆ. 


ಸಿಧು ರ್ಯಾಲಿ ವೊಂದರಲ್ಲಿನ ಪಾಕಿಸ್ತಾನ ಜಿಂದಾಬಾದ್ ಘೋಷಣೆಯನ್ನು ಪಾಕ್ ಮಾಧ್ಯಮಗಳು ಕವರ್ ಮಾಡಿದ್ದೇಗೆ ಗೊತ್ತಾ..


ಈ ಘಟನೆಗೆ ಸಂಬಂಧಿಸಿದಂತೆ ಪಂಜಾಬ್ ಸರ್ಕಾರದ ಸಚಿವ ನವಜೋತ್ ಸಿಂಗ್ ಸಿಧು ಮತ್ತು ಇತರ ಕಾಂಗ್ರೆಸ್ ಮುಖಂಡರ ವಿರುದ್ಧ ಚುನಾವಣಾ ಆಯೋಗಕ್ಕೆ ಜೀ ನ್ಯೂಸ್ ದೂರು ಸಲ್ಲಿಸಿತ್ತು. ಇದರಲ್ಲಿ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ ಮತ್ತು ಪಕ್ಷದ ಮುಖಂಡ ಕರಣ್ ಸಿಂಗ್ ಯಾದವ್ ಅವರ ಹೆಸರನ್ನೂ ಉಲ್ಲೇಖಿಸಲಾಗಿತ್ತು. ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಪಾಕಿಸ್ತಾನದ ಪರವಾಗಿ ಘೋಷಣೆಗಳನ್ನು ಕೂಗಲು ಅವಕಾಶ ನೀಡಿದ ಕಾಂಗ್ರೆಸ್ ಮುಖಂಡರ ವಿರುದ್ಧ ದೂರು ಸಲ್ಲಿಸಲಾಗಿತ್ತು.


ಕಾಂಗ್ರೆಸ್ ನ ವೀಡಿಯೋ ತಿರುಚುವಿಕೆ ಆರೋಪವನ್ನು ನಿರಾಕರಿಸಿದ ಜೀ ನ್ಯೂಸ್


ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಳವಾದ ತನಿಖೆ ನಡೆಸಿ, ಕಾಂಗ್ರೆಸ್ ಮುಖಂಡರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದೆ. ಜೊತೆಗೆ, ಘಟನೆಗೆ ಸಂಬಂಧಿಸಿದ ಲೈವ್ ವೀಡಿಯೋಗಳು ಮತ್ತು ಪೂರಕ ವೀಡಿಯೋಗಳನ್ನೂ ಚುನಾವಣಾ ಆಯೋಗಕ್ಕೆ ಸಿಡಿ ರೂಪದಲ್ಲಿ ಜೀ ನ್ಯೂಸ್ ಸಲ್ಲಿಸಿದೆ.