ಶಿಗ್ಗಾವಿಯಲ್ಲಿ ಇಂದು ಸಿಎಂ ಪರ ಪ್ರಚಾರಕ್ಕೆ ಚಿತ್ರನಟ ಸುದೀಪ್

ಇಂದು ನಾಮಪತ್ರ ಸಲ್ಲಿಕೆ ಮಾಡುತ್ತಿರುವುದರಿಂದ ಅದಕ್ಕೂ ಮುನ್ನ ಸಿಎಂ ಬೊಮ್ಮಾಯಿ ಶಿಗ್ಗಾವಿ ಪಟ್ಟಣದಲ್ಲಿ ಬೃಹತ್ ರೋಡ್ ಶೋವನ್ನು ಹಮ್ಮಿಕೊಂಡಿದ್ದಾರೆ.ಇದಾದ ಬಳಿಕ ತಾಲೂಕಿನ ಕ್ರೀಡಾಂಗಣದಲ್ಲಿ ಬಹಿರಂಗ ಸಮಾವೇಶ ನಡೆಯಲಿದೆ ಎನ್ನಲಾಗಿದೆ.

Written by - Zee Kannada News Desk | Last Updated : Apr 19, 2023, 08:58 AM IST
  • ನಟ ಸುದೀಪ್ ಬೆಳಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ,
  • ಬಳಿಕ ಸಿಎಂ ಜೊತೆ ಶಿಗ್ಗಾವಿಯಲ್ಲಿ ಅವರು ಬೆಳಗ್ಗೆ 10.50ಕ್ಕೆ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.
  • ಪ್ರಚಾರದಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ,ಪಿ.ನಡ್ದಾ ಕೂಡ ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ಶಿಗ್ಗಾವಿಯಲ್ಲಿ ಇಂದು ಸಿಎಂ ಪರ ಪ್ರಚಾರಕ್ಕೆ ಚಿತ್ರನಟ ಸುದೀಪ್ title=

ಶಿಗ್ಗಾವಿ: ಶಿಗ್ಗಾವಿಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಪರವಾಗಿ ನಟ ಸುದೀಪ್ ಪ್ರಚಾರ ಮಾಡಲಿದ್ದಾರೆ ಎನ್ನಲಾಗಿದೆ.

ಇಂದು ನಾಮಪತ್ರ ಸಲ್ಲಿಕೆ ಮಾಡುತ್ತಿರುವುದರಿಂದ ಅದಕ್ಕೂ ಮುನ್ನ ಸಿಎಂ ಬೊಮ್ಮಾಯಿ ಶಿಗ್ಗಾವಿ ಪಟ್ಟಣದಲ್ಲಿ ಬೃಹತ್ ರೋಡ್ ಶೋವನ್ನು ಹಮ್ಮಿಕೊಂಡಿದ್ದಾರೆ.ಇದಾದ ಬಳಿಕ ತಾಲೂಕಿನ ಕ್ರೀಡಾಂಗಣದಲ್ಲಿ ಬಹಿರಂಗ ಸಮಾವೇಶ ನಡೆಯಲಿದೆ ಎನ್ನಲಾಗಿದೆ.

ಇದನ್ನೂ ಓದಿ- Income Tax Return ಫೈಲ್ ಮಾಡುವ ಭರದಲ್ಲಿ ಹ್ಯಾಕರ್‌ಗಳಿಗೆ ಬಲಿಯಾಗದಿರಿ!

ಈ ಹಿನ್ನೆಲೆಯಲ್ಲಿ ಸಿಎಂ ಪರವಾಗಿ ಪ್ರಚಾರ ಮಾಡಲು ನಟ ಸುದೀಪ್ ಬೆಳಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ, ಬಳಿಕ ಸಿಎಂ ಜೊತೆ ಶಿಗ್ಗಾವಿಯಲ್ಲಿ ಅವರು ಬೆಳಗ್ಗೆ 10.50ಕ್ಕೆ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.ಪ್ರಚಾರದಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ,ಪಿ.ನಡ್ದಾ ಕೂಡ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News