ಹುಬ್ಬಳ್ಳಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬೆಂಬಲ ತೋರುತ್ತಿರುವುದರಿಂದ ಕಂಗೆಟ್ಟಿರುವ ಬಿಜೆಪಿ ಮಲ್ಲಿಕಾರ್ಜುನ ಖರ್ಗೆ, ಅವರ ಪತ್ನಿ ಸೇರಿದಂತೆ ಇಡೀ ಕುಟುಂಬವನ್ನೇ ಹತ್ಯೆ ಮಾಡುವ ಸಂಚು ರೂಪಿಸಿದೆ. ಪ್ರಕರಣ ಸಂಬಂಧ ಕುರಿತು ಹತ್ಯೆ ಆಡಿಯೋ ಹೊರ ಬಿದ್ದಿತ್ತು. 


COMMERCIAL BREAK
SCROLL TO CONTINUE READING

ಹುಬ್ಬಳ್ಳಿಯಲ್ಲಿ ಈ ಬಗ್ಗೆ  ಮಾತಾನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕುಟುಂಬಸ್ಥರ ಹತ್ಯೆ ಆಡಿಯೋ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. 


ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕುಟುಂಬಸ್ಥರ ಹತ್ಯೆಯ ಕುರಿತ ಆಡಿಯೋ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಆಡಿಯೋ ತಿರುಚಲಾಗಿದೆಯೇ ಎಂದು ನೋಡಬೇಕು.ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಮಾಡಲಾಗುವುದು ಎಂದರು. 


ಇದನ್ನೂ ಓದಿ: Karnataka Election 2023: "ಮಲ್ಲಿಕಾರ್ಜುನ ಖರ್ಗೆ ಹತ್ಯೆಗೆ ಸಂಚು, ಮೌನಕ್ಕೆ ಶರಣಾಗಿದ್ದೇಕೆ ಪಿಎಂ, ಸಿಎಂ?"


ಸುಳ್ಳು  ಸುದ್ದಿ
ಬಿ.ಎಲ್ ಸಂತೋಷ ಲಿಂಗಾಯತ ಮತಗಳ ಅಗತ್ಯವಿಲ್ಲ ಎಂದಿರುವುದು ಸುಳ್ಳು ಸುದ್ದಿ ಎಂದ ಮುಖ್ಯ ಮಂತ್ರಿಗಳು ಈಗಾಗಲೇ ಈ ಬಗ್ಗೆ ದೂರು ಸಹ ದಾಖಲು ಮಾಡಲಾಗಿದೆ ಎಂದರು. 


ಇದನ್ನೂ ಓದಿ: Karnataka Election 2023: ಮೋದಿ ರೋಡ್ ‘ಶೋ’ಕಿಗಾಗಿ ಮರಗಳ ಕಡಿದಿದ್ದು ಯಾವ ಸಾಧನೆಗೆ?- ಕಾಂಗ್ರೆಸ್


ನಟರ ಪ್ರಚಾರ ಕುರಿತು ಮಾತಾನಾಡಿರುವ ಬೊಮ್ಮಯಿ, ಶಿವರಾಜ್ ಕುಮಾರ್ ಮೇಲೆ ಬಿಜೆಪಿ ಟ್ರೋಲ್ ಮಾಡಿರುವ ಬಗ್ಗೆ ಮಾತನಾಡಿ ಪ್ರಜಾಪ್ರಭುತ್ವದಲ್ಲಿ ಯಾವ ನಟರು ಕೂಡ ಯಾವ ಪಕ್ಷ ಪರವಾಗಿ ಪ್ರಚಾರ ಮಾಡಬಹುದು. ಪ್ರತಾಪ್ ಸಿಂಹ ಮತ್ತು ಶಿವರಾಜ್ ಕುಮಾರ್ ಟೀಕೆ ಅವರಿಗೆ ಬಿಟ್ಟ ವಿಚಾರ. ಕಾಂಗ್ರೆಸ್ ಪ್ರಚಾರದ ಬಗ್ಗೆ ನನಗೇನು ಅಭ್ಯಂತರ ಇಲ್ಲ ಎಂದರು.


ಮೋದಿ ಅಲೆ ಮೊದಲಿಗಿಂತ ಹೆಚ್ಚುಸೋನಿಯಾ ಗಾಂಧಿ ಪ್ರಚಾರಕ್ಕೆ ಬರುತ್ತಿರುವ ಬಗ್ಗೆ ಮಾತನಾಡಿ ಅದು ಅವರ ಪಕ್ಷದ ಪ್ರಚಾರ. ನಮ್ಮ ಪಕ್ಷದ ಪರವಾಗಿ   ಪ್ರಧಾನಿ  ಮೋದಿ ಹಾವೇರಿಗೆ ಬರುತ್ತಿದ್ದು,  ಮೊದಲಿಗಿಂತಲೂ ಈಗ ಮೋದಿ ಅಲೆ ಜಾಸ್ತಿಯಾಗಲಿದೆ ಎಂದಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.