ವಿಜಯನಗರ: ಚುನಾವಣೆಯ ವೇಳೆ ರಾಜೀನಾಮೆ ಪರ್ವ ಮುಂದುವರೆದಿದ್ದು,ಈಗ ಇದಕ್ಕೆ ಪೂರಕ ಎನ್ನುವಂತೆ ಕೂಡ್ಲಿಗಿಯ ಕೋಡಿಹಳ್ಳಿ ಭೀಮಣ್ಣ,ಹಗರಿಬೊಮ್ಮನ ಹಳ್ಳಿಯ ನೇಮಿರಾಜ್ ನಾಯ್ಕ್ ಅವರು ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಕೂಡ್ಲಿಗಿ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಕೋಡಿಹಳ್ಳಿ ಭೀಮಣ್ಣ ಈಗ ಏಕಾಏಕಿ ಟಿಕೆಟ್ ಕೈ ತಪ್ಪಿದ್ದಕ್ಕೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇನ್ನೊಂದೆಡೆಗೆ ಹಗರಿಬೊಮ್ಮನ ಹಳ್ಳಿಯ ಮಾಜಿ ಶಾಸಕ ನೇಮಿರಾಜ್ ನಾಯ್ಕ್ ಗೆ ಬಿಜೆಪಿ ಟಿಕೆಟ್ ತಪ್ಪಿದ್ದರಿಂದಾಗಿ ಈಗಾಗಲೇ ಬಿ ಫಾರಂ ಇಲ್ಲದೇಯೇ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.


ಇದನ್ನೂ ಓದಿ: ಪಕ್ಷದಲ್ಲಿ ಕಡೆಗಣಿಸುತ್ತಿರುವುದಕ್ಕೆ ಮಾರ್ಮಿಕ ಒಗಟಿನ ಪೋಸ್ಟ್ ಮಾಡಿದ ತೇಜಸ್ವಿನಿ ಅನಂತ್ ಕುಮಾರ್! 


ಮೂಲಗಳ ಪ್ರಕಾರ ಅವರು ಜನಾರ್ದನ ರೆಡ್ಡಿ ಪಕ್ಷದತ್ತ ಮುಖ ಮಾಡೋ ಲಕ್ಷಣಗಳು ಅಧಿಕವಾಗಿ ಎನ್ನಲಾಗಿದೆ.ಟೆಕೆಟ್ ಸಿಗದ ಹಿನ್ನೆಲೆಯಲ್ಲಿ ಅತೃಪ್ತಗೊಂಡಿರುವ ಬಂಡಾಯ ಅಭ್ಯರ್ಥಿಗಳು ವಿಜಯನಗರ ಜಿಲ್ಲೆಯ ಕೂಡ್ಲಿಗಿ, ಹಗರಿಬೊಮ್ಮನ ಹಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸೋದು ತಮ್ಮ ಗುರಿ ಎಂದು ಹೇಳಿದ್ದಾರೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.