ಬೆಂಗಳೂರು: ಬಿಜೆಪಿ ನಾಯಕ ಬಾಬುರಾಮ್ ಚಿಂಚನಸೂರ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಗರಂ ಆಗಿದ್ದಾರೆ.


COMMERCIAL BREAK
SCROLL TO CONTINUE READING

ಬೆಂಗಳೂರಿನ ತಮ್ಮ ಕಾವೇರಿ ನಿವಾಸದಲ್ಲಿ ಮಾತನಾಡಿದ ಬಿಎಸ್‍ವೈ, ‘ಮೊನ್ನೆ ತಾನೆ ಗಂಡ-ಹೆಂಡತಿ ನನ್ನ ಕಾಲು ಹಿಡಿದುಕೊಂಡಿದ್ದರು. ನಾವು ಎಲ್ಲೂ ಹೋಗಲ್ಲ ಎಂದಿದ್ದರು. ಇಂದು ಕಾಂಗ್ರೆಸ್‍ಗೆ ಸೇರುತ್ತಿದ್ದಾರೆ. ಏನು ಮಾಡೋಕೆ ಬರಲ್ಲ’ವೆಂದು ಹೇಳಿದ್ದಾರೆ.


ಇದನ್ನೂ ಓದಿ: ಹಿಂದೂ ವಿರೋಧಿ ಬರಹ: ನಟ ಚೇತನ್ ಗೆ 14 ದಿನ‌ ನ್ಯಾಯಾಂಗ ಬಂಧನ


ನಾವು ಎಲ್ಲೂ ಹೋಗಲ್ಲವೆಂದು ಮೊನ್ನೆಯಷ್ಟೇ ಹೇಳಿದ್ದ ಚಿಂಚನಸೂರ ಈಗ ಪಕ್ಷ ಬಿಟ್ಟು ಹೋಗಿದ್ದಾರೆ. ಯಾಕೆ ಈಗ ಇದರ ಬಗ್ಗೆ ಚರ್ಚೆ? ಬೇರೆ ಬೇರೆ ಒತ್ತಡಕ್ಕೆ ಪಕ್ಷ ಬಿಟ್ಟು ಹೋಗಿರುವ ಸಾಧ್ಯತೆ ಇದೆ ಅಂತಾ ಹೇಳಿದರು. ಟಿಕೆಟ್ ಏನಾದರೂ ಕೇಳಿದ್ರಾ..? ಎಂಬ ಪ್ರಶ್ನೆಗೆ ಉತ್ತರಿಸಿದ ಬಿಎಸ್‍ವೈ ನಾವು ಎಲ್ಲದಕ್ಕೂ ಸಿದ್ಧರಾಗಿದ್ದೀವಿ ಎಂದು ಹೇಳಿದರು.


ಕಾಂಗ್ರೆಸ್‍ನ 4ನೇ ಗ್ಯಾರಂಟಿ ಘೋಷಣೆ ವಿಚಾರವಾಗಿ ಮಾತನಾಡಿದ ಬಿಎಸ್‍ವೈ, ‘ಆ ಯೋಜನೆಗೆ ಎಲ್ಲಿ ಬೆಲೆ ಇದೆ..? ಹಿಂದೆಲ್ಲ ಬೇರೆ ರಾಜ್ಯದಲ್ಲಿ ಯೋಜನೆ ಘೋಷಣೆ ಮಾಡಿದ್ದು ಕಾರ್ಯರೂಪಕ್ಕೆ ಬಂದಿದ್ಯಾ..? ಅಭಿವೃದ್ಧಿ ಕಾರ್ಯಕ್ಕೆ ಎಲ್ಲಿ ಹಣ ಉಳಿಯುತ್ತೆ? ಅವರು ಘೋಷಣೆ ಮಾಡಿದ್ದು ನೋಡಿದ್ರೆ ಸರ್ಕಾರಿ ಸಂಬಳ ಕೊಡೋಕೆ ಅಷ್ಟೇ ಸಾಲುತ್ತೆ. ಅಧಿಕಾರಕ್ಕೆ ಬರಲ್ಲ ಅಂದಾಗ ಜನರಲ್ಲಿ ಗೊಂದಲ ಉಂಟು ಮಾಡಲು ಈ ರೀತಿಯ ಸುಳ್ಳು ಭರವಸೆ  ಕೊಡ್ತಾರೆ. ಕಾಂಗ್ರೆಸ್‍ನವರಿಗೆ ಬಿಜೆಪಿ ಮೇಲೆ ತುಂಬ ಭಯ ಇದೆ’ ಎಂದು ಹೇಳಿದರು.


ಇದನ್ನೂ ಓದಿ: "ಕೋವಿಡ್ ಸಮಯದಲ್ಲಿ ಮಾಡಿದ ಅಕ್ರಮಗಳ ಬಗ್ಗೆ ಸಿನಿಮಾ ಮಾಡಲಿ "


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.