ಬೀದರ್ : ಲಿಂಗಾಯತ ಸಮುದಾಯ ಸೇರಿ ಎಲ್ಲಾ ಸಮುದಾಯಕ್ಕೆ ನ್ಯಾಯ ಕೊಡುವಂತ ಕೆಲಸ ನಮ್ಮ ಸರ್ಕಾರ ಮಾಡಿದೆ. ಲಿಂಗಾಯತ ಸೇರಿದಂತೆ ಎಲ್ಲಾ ಸಮುದಾಯಗಳಿಗೂ ಮಾನ್ಯತೆ ನೀಡಿದ್ದು,‌ ಬಿಜೆಪಿ ಸರ್ಕಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.


COMMERCIAL BREAK
SCROLL TO CONTINUE READING

ಇಂದು ಬೀದರ ಜಿಲ್ಲೆಯ ಭಾಲ್ಕಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಲಿಂಗಾಯತ ಸಮಾಜವನ್ನ ಒಡೆಯುವಂತ ಕೆಲಸ ಕಾಂಗ್ರೆಸ್ ಮಾಡಿದೆ. ಕಾಂಗ್ರೆಸ್ 50 ವರ್ಷದಿಂದ ಲಿಂಗಾಯತರನ್ನು ಸಿಎಂ ಮಾಡಿಲ್ಲ. ಕಾಂಗ್ರೆಸ್‌ನಲ್ಲಿ ಎಸ್ ನಿಜಲಿಂಗಪ್ಪ ಹೊರತುಪಡಿಸಿ ಲಿಂಗಾಯತ ಸಿಎಂ ಆಗಿಲ್ಲ. ವಿರೇಂದ್ರ ಪಾಟೀಲರನ್ನ ಎಷ್ಟು ಹೀನಾಯವಾಗಿ ನಡೆಸಿಕೊಂಡಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದರು.


ಇದನ್ನೂ ಓದಿ: ಚಾಮರಾಜನಗರ: 51 ಲಕ್ಷ ಮೌಲ್ಯದ ವಿಸ್ಕಿ- 12 ಲಕ್ಷ ಮೌಲ್ಯದ ಬಿಯರ್ ಜಪ್ತಿ


ಕಾಂಗ್ರೆಸ್ ಕೇವಲ ಮೊಸಳೆ ಕಣ್ಣೀರು ಹಾಕುತ್ತದೆ. ಸಮಾಜವನ್ನ ಒಡೆಯುವಂತ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದ್ದು, ಯಾವ ಪಕ್ಷ ಯಾರಿಗೆ ನಾಯಕತ್ವ ಕೊಟ್ಟಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಸಮಾಜವನ್ನು ಒಡೆಯುವಂತ ಕೆಲಸ ಕಾಂಗ್ರೆಸ್ ಪಕ್ಷ ಮಾಡಿದೆ ಎಂದರು. ಅಲ್ಲದೆ, ನಾವು ಸಮಾಜಕ್ಕೆ ಯಾವುದೇ ರೀತಿಯ ಡ್ಯಾಮೇಜ್ ಮಾಡಿಲ್ಲ. ನಮ್ಮಲ್ಲಿ ಯಾವುದೇ ಡ್ಯಾಮೇಜ್ ಆಗಿಲ್ಲಾ, ಕಂಟ್ರೋಲ್‌ ಮಾಡೋದೆನಿದೆ ಎಂದು ಹೇಳಿದರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.