ಬೆಂಗಳೂರು: ಕಾಂಗ್ರೆಸ್ ಇಡೀ ದೇಶದಲ್ಲಿಯೇ ಸೋತಿದೆ. ಇದು ಪ್ರಧಾನಿ ಮೋದಿಯವರ ಸೋಲಲ್ಲ ಎಂದು ಹಂಗಾಮಿ ಸಿಎಂ ಬಸವರಾಜ್ ಬೊಮ್ಮಾಯಿ‌ ಹೇಳಿದ್ದಾರೆ. ಭಾನುವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಧಾನಿ ಮೋದಿಯವರು ಕೇವಲ ಪ್ರಚಾರಕ್ಕೆ ರಾಜ್ಯಕ್ಕೆ ಬಂದಿದ್ದರು. ಹೀಗಾಗಿ ಇದು ಅವರ ಸೋಲಲ್ಲ’ವೆಂದು ಹೇಳಿದರು.  


COMMERCIAL BREAK
SCROLL TO CONTINUE READING

ಬಿಜೆಪಿ ಕಚೇರಿಯಲ್ಲಿ ಎಲ್ಲಾ ಪ್ರಮುಖರು ಸೇರಿ ಬಹಳ ದೀರ್ಘವಾಗಿ ಫಲಿತಾಂಶದ ಬಗ್ಗೆ ಚರ್ಚೆ ಮಾಡಿದ್ದೇವೆ. ಫಲಿತಾಂಶದ ಬಗ್ಗೆ ಬೇರೆ ಬೇರೆ ಕಡೆಯಿಂದ ಇನ್ನಷ್ಟು ಮಾಹಿತಿ ತರಿಸಿಕೊಂಡು ಚರ್ಚೆ ಮಾಡುತ್ತೇವೆ. ಒಟ್ಟಾರೆ ಫಲಿತಾಂಶ ಹಾಗೂ ವಿಧಾನಸಭೆ ಕ್ಷೇತ್ರವಾರು ಪರಾಮರ್ಶೆ ಮಾಡಬೇಕಿದೆ ಎಂದರು.


ಇದನ್ನೂ ಓದಿ: ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ: ಸಿದ್ದರಾಮಯ್ಯ


ನಮ್ಮ ಬಿಜೆಪಿ ಅಧ್ಯಕ್ಷರು ಇನ್ನು 3-4 ದಿನಗಳೊಳಗೆ ಚುನಾಯಿತ ಪ್ರತಿನಿಧಿಗಳ ಸಭೆ ಕರೆಯುತ್ತಿದ್ದಾರೆ. ಮರುದಿನ ಎಲ್ಲಾ ಅಭ್ಯರ್ಥಿಗಳ ಸಭೆ ಕರೆದು ಚರ್ಚೆ ಮಾಡಲಿದ್ದು, ಅಲ್ಲಿ ಕೂಲಂಕುಷವಾಗಿ ಚರ್ಚೆ ಮಾಡಿ ಯಾವ ರೀತಿ ಒಗ್ಗಟ್ಟಾಗಿ ಪಕ್ಷ ಬಲವರ್ಧನೆ ಮಾಡಬೇಕೆಂದು ಚರ್ಚೆ ಮಾಡುತ್ತೇವೆ. ನಮಗೆ ಪಕ್ಷ ಸಂಘಟನೆಗೆ ವಿಶ್ರಮ ಇರುವುದಿಲ್ಲ. ಲೋಕಸಭೆ ಚುನಾವಣೆಗೆ ಒಟ್ಟಾಗಿ ಕೆಲಸ ಮಾಡುತ್ತೇವೆಂದು ಹೇಳಿದರು.


ಬಿಜೆಪಿಯ ಸೋಲು ಪ್ರಧಾನಿ ಮೋದಿಯವರ ಸೋಲು ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದ ಅವರು, ಕಾಂಗ್ರೆಸ್‍ನ ನಾಯಕತ್ವ ಇಡೀ ದೇಶದಲ್ಲಿ ಸೋತಿದೆ. ಮೋದಿಯವರು ರಾಷ್ಟ್ರೀಯ ನಾಯಕರು. ಇಲ್ಲಿ ಮೋದಿಯವರು ಪ್ರಚಾರಕ್ಕಷ್ಟೇ ಬಂದಿದ್ದರು. ಇದು ಅವರ ಸೋಲು ಅನ್ನುವುದು ಸರಿಯಲ್ಲ ಅಂತಾ ಹೇಳಿದರು.


ಇದನ್ನೂ ಓದಿ: ಇದು ಕಾಂಗ್ರೆಸ್ ಗೆಲುವಲ್ಲ, ಕರ್ನಾಟಕ ಮತ್ತು ಕನ್ನಡಿಗರ ಗೆಲುವು: ಸಿದ್ದರಾಮಯ್ಯ


ಕಾಂಗ್ರೆಸ್‍ನಲ್ಲಿ ಸಿಎಂಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಫೈಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ನಾನು ಆ ಇಬ್ಬರಿಗೂ ಶುಭಾಶಯ ಕೋರುತ್ತೇನೆ ಅಂತಾ ನಗುತ್ತಲೇ ‘ಆಲ್ ದಿ ಬೆಸ್ಟ್’ ಎಂದು ಹೇಳಿದರು. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯ ಭರವಸೆಗಳ ಜಾರಿ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮೊದಲು ಕಾಂಗ್ರೆಸ್‍ನವರು ಸರ್ಕಾರ ಮಾಡಲಿ. ಆ ನಂತರ ಕ್ಯಾಬಿನೆಟ್ ಕರೆದು ಏನು ಮಾಡುತ್ತಾರೆಂದು ಕಾದು ನೋಡೋಣ ಅಂತಾ ಹೇಳಿದರು.   


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.