ಬಿಜೆಪಿ ಬಂಡಾಯವೇ ಕೈ ಬಂಡವಾಳ‌..! ಚಾಮರಾಜನಗರದಲ್ಲೇ ಸೋಮಣ್ಣಗೆ ಚಕ್ರವ್ಯೂಹ

ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರಬಲ ಸ್ಪರ್ಧೆ ಒಡ್ಡಲು ಬಿಜೆಪಿ ವಿ. ಸೋಮಣ್ಣ ಅವರಿಗೆ ಟಿಕೆಟ್ ಕೊಟ್ಟಿದೆ. ಆದರೆ, ವರುಣಗೆ ಸೋಮಣ್ಣ ಹೋಗಲಾರದೇ ಚಾಮರಾಜನಗರದಲ್ಲೇ ಕಟ್ಟಿಹಾಕಲು ಕಾಂಗ್ರೆಸ್ ಮುಂದಾಗಿದ್ದು ಇದಕ್ಕೇ ಬಿಜೆಪಿ ಬಂಡಾಯವೇ ಬಂಡವಾಳವಾಗಿದೆ. ಸೋಮಣ್ಣಗೆ ಚಾಮರಾಜನಗರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಭಿನ್ನಮತ ಸ್ಪೋಟವಾಗಿದೆ. 

Written by - Zee Kannada News Desk | Edited by - Krishna N K | Last Updated : Apr 13, 2023, 10:16 AM IST
  • ಸಿದ್ದರಾಮಯ್ಯ ವಿರುದ್ಧ ಪ್ರಬಲ ಸ್ಪರ್ಧೆ ಒಡ್ಡಲು ಬಿಜೆಪಿ ವಿ. ಸೋಮಣ್ಣ ಅವರಿಗೆ ಟಿಕೆಟ್ ಕೊಟ್ಟಿದೆ.
  • ವರುಣಗೆ ಸೋಮಣ್ಣ ಹೋಗಲಾರದೇ ಚಾಮರಾಜನಗರದಲ್ಲೇ ಕಟ್ಟಿಹಾಕಲು ಕಾಂಗ್ರೆಸ್ ಮುಂದಾಗಿದೆ.
  • ಸೋಮಣ್ಣಗೆ ಚಾಮರಾಜನಗರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಭಿನ್ನಮತ ಸ್ಪೋಟವಾಗಿದೆ.
ಬಿಜೆಪಿ ಬಂಡಾಯವೇ ಕೈ ಬಂಡವಾಳ‌..! ಚಾಮರಾಜನಗರದಲ್ಲೇ ಸೋಮಣ್ಣಗೆ ಚಕ್ರವ್ಯೂಹ title=

ಚಾಮರಾಜನಗರ : ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ‌ಮಾಡಿ ಪ್ರತಿಷ್ಟೆ ಪಣಕ್ಕಿಡಲು ತೆರಳುತ್ತಿರುವ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಕಟ್ಟಿಹಾಕಲು ಕಾಂಗ್ರೆಸ್ ರಣತಂತ್ರ ಹೆಣೆಯುತ್ತಿದ್ದು ವರುಣಕ್ಕೇ ಹೆಚ್ಚು ತೆರಳದಂತೆ ಕೈ ಚಕ್ರವ್ಯೂಹ ಹೆಣೆಯುತ್ತಿದೆ. 

ಹೌದು.. ಸಿದ್ದರಾಮಯ್ಯ ವಿರುದ್ಧ ಪ್ರಬಲ ಸ್ಪರ್ಧೆ ಒಡ್ಡಲು ಬಿಜೆಪಿ ಸೋಮಣ್ಣಗೆ ಟಿಕೆಟ್ ಕೊಟ್ಟಿದೆ. ಆದರೆ, ವರುಣಗೆ ಸೋಮಣ್ಣ ಹೋಗಲಾರದೇ ಚಾಮರಾಜನಗರದಲ್ಲೇ ಕಟ್ಟಿಹಾಕಲು ಕಾಂಗ್ರೆಸ್ ಮುಂದಾಗಿದ್ದು ಇದಕ್ಕೇ ಬಿಜೆಪಿ ಬಂಡಾಯವೇ ಬಂಡವಾಳವಾಗಿದೆ. ಸೋಮಣ್ಣಗೆ ಚಾಮರಾಜನಗರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಭಿನ್ನಮತ ಸ್ಪೋಟವಾಗಿದೆ. ಟಿಕೆಟ್ ವಂಚಿತ ನಾಗಶ್ರೀ ಪ್ರತಾಪ್ ಅವರ ಬೆಂಬಲಿಗರು ಈಗಾಗಲೇ ಕೆರಳಿ ಕೆಂಡವಾಗಿದ್ದು ಸಾಲುಸಾಲು ಸಭೆ ನಡೆಸುತ್ತಿದ್ದಾರೆ. ಮತ್ತೊಂದು ಕಡೆ ಕೆಆರ್ಐಡಿಎಲ್ ಅಧ್ಯಕ್ಷ ರುದ್ರೇಶ್ ಬಹಿರಂಗವಾಗಿಯೇ ಸೋಮಣ್ಣ ವಿರುದ್ಧ ಹರಿಹಾಯ್ದಿದ್ದು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಇದನ್ನೂ ಓದಿ: ಗಾಂಧಿನಗರ ವಿಧಾನಸಭಾ ಕ್ಷೇತ್ರ: ಗುಂಡೂರಾವ್ ಗೆಲುವಿನ ಓಟ ಮುಂದುವರೆಯುತ್ತಾ?

ಹೇಳಿಕೇಳಿ ಚಾಮರಾಜನಗರ ಹಾಗೂ ವರುಣದಲ್ಲಿ ಲಿಂಗಾಯತ ಪ್ರಾಬಲ್ಯ ಇದ್ದು ಸೋಮಣ್ಣ ಅವರು ಲಿಂಗಾಯತ ನಾಯಕರನ್ನು ತುಳಿಯುತ್ತಿದ್ದಾರೆ, ಯಡಿಯೂರಪ್ಪ ಬಗ್ಗೆ ಇಲ್ಲ ಸಲ್ಲದ ಮಾತು ಆಡುತ್ತಾರೆ ಎಂಬ ರುದ್ರೇಶ್ ಆರೋಪ ಈಗಾಗಾಲೇ ಸಮುದಾಯದ ಜನರಲ್ಲಿ ಕಿಚ್ಚು ಹೊತ್ತಿಸಿದೆ. ಇದು ಚುನಾವಣೆ ಹೊತ್ತಲ್ಲಿ ಅಂಡರ್ ಕರೆಂಟಾಗಿ ಕೆಲಸ ಮಾಡಲಿದೆ ಎಂಬುದು ಸೋಮಣ್ಣ ಆದಿಯಾಗಿ ಎಲ್ಲರಿಗೂ ತಿಳಿದಿದ್ದು ಇದನ್ನು ಶಮನ ಮಾಡುವುದರಲ್ಲೇ ಸೋಮಣ್ಣ ಕಾಲ ಕಳೆಯಬೇಕಾಗುತ್ತದೆ, ವರುಣದತ್ತ ಗಮನ ಹರಿಸುವುದು ಅಸಾಧ್ಯವಾಗಲಿದೆ ಎಂದು ಕೈ ಪಡೆ ರಣತಂತ್ರವಾಗಿದೆ.

ವರುಣದಲ್ಲಿ ಸೋಮಣ್ಣ ಗಮನ ಕಡಿಮೆಯಾದಷ್ಟು ಕಾಂಗ್ರೆಸ್ ಗೆ ವರವಾಗಲಿದೆ ಎಂಬ ಒಂದಂಶದ ಮೇಲೆ ಚಾಮರಾಜನಗರದಲ್ಲಿನ ಬಂಡಾಯವನ್ನು ಹಾಗೇ ಉಳಿಸಲು ಕಾಂಗ್ರೆಸ್ ಈಗ ಮುಂದಾಗಿದೆ. ಚಾಮರಾಜನಗರದ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲೂ ಅಸಮಾಧಾನ ಇದ್ದು ಇವುಗಳನ್ನು ಪರಿಹರಿಸುವ ಜವಾಬ್ದಾರಿ ಸೋಮಣ್ಣ ಮೇಲಿದೆ. ಬಂಡಾಯ ಶಮನ ಮಾಡುವುದೋ ವರುಣದಲ್ಲಿ ಯುದ್ಧ ಮಾಡುವುದೋ ಎಂಬ ಸಂಧಿಗ್ಧತೆಗೆ ಸೋಮಣ್ಣ ರನ್ನು ದೂಡುವುದೇ ಕಾಂಗ್ರೆಸ್ ನ ಸದ್ಯ ದ ರಣನೀತಿಯಾಗಿದೆ.

ಇದನ್ನೂ ಓದಿ: ಸ್ವಂತ ಶಕ್ತಿ ಮೇಲೆ ನಿಶ್ಚಿತವಾಗಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ: ಬಿಎಸ್‍ವೈ

ಇಂದು ಚಾಮರಾಜನಗರಕ್ಕೆ ಸೋಮಣ್ಣ : ಟಿಕೆಟ್ ಘೋಷಣೆಯಾದ ಬಳಿಕ ಮೈಸೂರಿನ ವರುಣ ಹಾಗೂ ಚಾಮರಾಜನಗರಕ್ಕೆ ಸೋಮಣ್ಣ ಬರುತ್ತಿದ್ದಾರೆ.‌ಜೊತೆಗೆ, ಚಾಮರಾಜನಗರದ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರದ ಹೊಣೆಯನ್ನೂ ಹೊತ್ತಿದ್ದಾರೆ. ಕೊಳ್ಳೇಗಾಲದಲ್ಲಿ ಕಿನಕಹಳ್ಳಿ ರಾಚಯ್ಯ, ಗುಂಡ್ಲುಪೇಟೆಯಲ್ಲಿ ಎಂ.ಪಿ.ಸುನೀಲ್, ಹನೂರಲ್ಲಿ ಮೂವರು ಹಾಗೂ ಚಾಮರಾಜನಗರದಲ್ಲಿ ಪ್ರೊ. ಮಲ್ಲಿಕಾರ್ಜುನಪ್ಪ, ನಾಗಶ್ರೀ ಪ್ರತಾಪ್, ರುದ್ರೇಶ್ ಅಸಮಾಧಾನ ಸ್ಫೋಟಗೊಂಡಿದ್ದು‌ ಇದಕ್ಕೆಲ್ಲಾ ಸೋಮಣ್ಣ ಅವರೇ ತೇಪೆ ಹಚ್ಚಬೇಕಿದೆ. ಜೊತೆಗೆ, ಕಾಂಗ್ರೆಸ್ ನ ಮಾಸ್ ಲೀಡರ್ ಜೊತೆಯೂ ಸ್ಪರ್ಧೆ ಮಾಡಬೇಕಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News