Karnataka Assembly Election 2023: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಡ ತಂತ್ರ ಮಾಡುತ್ತಿದ್ದಾರೆ. ಜಿಲ್ಲಾಧ್ಯಕ್ಷರ ಮೂಲಕ ಒತ್ತಡ ತರುತ್ತಿದ್ದಾರೆ. ಆದರೆ ಫ್ಲಡ್ ಗೇಟ್ ಓಪನ್ ಆದಂತಹ ಸ್ಥಿತಿ‌ ಮುಂದೆ ಬರಲಿದೆ. ಚುನಾಯಿತ ಪ್ರತಿನಿಧಿಗಳಿಗೆ ರಾಜೀನಾಮೆ ಕೊಡೋದು ಬೇಡ ಅಂತ ಹೇಳಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.


COMMERCIAL BREAK
SCROLL TO CONTINUE READING

ಈ ಕುರಿತಂತೆ ಇಂದು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್,  ನಾಮಪತ್ರ ಸಲ್ಲಿಕೆ ನಂತರ ಕ್ಷೇತ್ರದಾದ್ಯಂತ ಪ್ರಚಾರ ಮಾಡುತ್ತೇನೆ. ಕಾಂಗ್ರೆಸ್ ನಲ್ಲಿ ಸರ್ವಾನುಮತದಿಂದ ನನ್ನನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದಾರೆ. ಕರೆದ ಕಡೆ ಕಾಂಗ್ರೆಸ್ ಪರ ಪ್ರಚಾರ ಮಾಡ್ತಿನಿ. ಬಿಜೆಪಿಯನ್ನು ಬೈದರೆ ಉದ್ಧಾರ ಆಗ್ತೇನಾ..? ಸಂದರ್ಭ ಬಂದಾಗ ಟೀಕೆ ಮಾಡೇ ಮಾಡ್ತಿನಿ ಎಂದರು.


ಇದನ್ನೂ ಓದಿ- "ಶೆಟ್ಟರ್ ಅವರನ್ನು ಬಿಜೆಪಿ ನಡೆಸಿಕೊಂಡಿರುವ ರೀತಿ ಯಾವುದೇ ನಾಯಕರಿಗೆ ಆಗಬಾರದು"


ನಾನೇನು ಹೋಗಿ ಜೈಲಿನಲ್ಲಿ ಇರಲೇ.? ಜನರನ್ನು ದೂರ ಇಟ್ಟು ಬಂಗ್ಲೆಯಲ್ಲಿ ಇರಲೇ.? ರಾಜ್ಯಸಭಾ ಸದಸ್ಯರಾಗೋದನ್ನು ತಿರಸ್ಕರಿಸಿದ್ದೇನೆ. ಚುನಾವಣಾ ರಾಜಕಾರಣದಿಂದ ನಿವೃತ್ತಿ ಹೊಂದುತ್ತೇನೆ ಅಂತ ಹೇಳಿಕೆ ಕೊಡಿ ಅಂದರು. ತಾವು ಕಳಿಸಿದ ಪತ್ರಕ್ಕೆ ಸಹಿ ಹಾಕಿ ಕಳಿಸುವಂತೆ ಹೇಳಿದ್ದರು. ಅವರು ಹೇಳಿದಂತೆ ಕೇಳಲು ನಾನೇನು ಹುಡುಗನೇ ಎಂದು ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.


ಇದನ್ನೂ ಓದಿ- 75 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದು ನಾಲ್ಕನೇ ಬಾರಿಗೆ ಗೆಲುವು ಸಾಧಿಸುತ್ತೇನೆ: ಬೊಮ್ಮನಹಳ್ಳಿ ಶಾಸಕ ಸತೀಶ್‌ ರೆಡ್ಡಿ


ಈ ಬಾರಿ ಅಧಿಕಾರಕ್ಕೆ ಬರೋಕೆ ಬಿಜೆಪಿ ಗೆ ಅವಕಾಶವಿತ್ತು. ಆದರೆ ಕೆಲವೊಬ್ಬರಿಗೆ ಬಿಜೆಪಿ ಅಧಿಕಾರಕ್ಕೆ ಬರೋದು ಬೇಡ ಅನಿಸುತ್ತಿದೆ. ಹಾಗಾಗಿಯೇ ಪ್ರಮುಖ ನಾಯಕರ ವಿರುದ್ಧ ಷಡ್ಯಂತ್ರ ಮಾಡಿಕೊಡು ಬಂದಿದ್ದಾರೆ. ಕಳೆದ ಒಂದು ವರ್ಷದಿಂದಲೂ ಈ ಪಿತೂರಿ ನಡೆದಿದೆ  ಎಂದು ಜಗದೀಶ್ ಶೆಟ್ಟರ್ ಬೇಸರ ವ್ಯಕ್ತಪಡಿಸಿದರು. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.