ಚಾಮರಾಜನಗರ: ಚುನಾವಣಾ ಕಣ ದಿನೇದಿನೆ ರಂಗೇರುತ್ತಿದ್ದು, ಅಭ್ಯರ್ಥಿಗಳು ವಿಭಿನ್ನ ರೀತಿಯಲ್ಲಿ ಪ್ರಚಾರಕ್ಕೆ ಇಳಿದಿದ್ದಾರೆ. ಅಭ್ಯರ್ಥಿಗಳ ಕುಟುಂಬಸ್ಥರು ಅಖಾಡಕ್ಕೆ ಇಳಿದು ಮನೆ-ಮನೆಗೆ ಭೇಟಿ ಕೊಡುತ್ತಿದ್ದು, ಚಾಮರಾಜನಗರ ಬಿಎಸ್‍ಪಿ ಅಭ್ಯರ್ಥಿ ಒಂದು ಹೆಜ್ಜೆ ಮುಂದೆ ಹೋಗಿ ಆನೆ ಸವಾರಿ ಮಾಡುತ್ತಿದ್ದಾರೆ.


COMMERCIAL BREAK
SCROLL TO CONTINUE READING

ಚಾಮರಾಜನಗರ BSP ಅಭ್ಯರ್ಥಿ ಹ.ರಾ.ಮಹೇಶ್ ಆನೆ ಮಾದರಿ ಪ್ರಚಾರ ರಥವನ್ನು ನಿರ್ಮಾಣ ಮಾಡಿಸಿಕೊಂಡಿದ್ದು, ಆನೆ ಮೇಲೆ ಕುಳಿತು ಭರ್ಜರಿ ಪ್ರಚಾರ ನಡೆಸಿ ಗಮನ ಸೆಳೆಯುತ್ತಿದ್ದಾರೆ. 15 ಅಡಿ ಎತ್ತರದ ಆನೆ ಮೇಲೆ ಕುಳಿತು ಮತಬೇಟೆ ನಡೆಸಲಾಗುತ್ತಿದೆ. ಮತದಾರರು ಒಂದು ಕ್ಷಣ ಆನೆ ಕಂಡು ಮುದಗೊಳ್ಳುವ ಜೊತೆಗೆ ನಿಂತು ಅಭ್ಯರ್ಥಿ ಮಾತು ಕೇಳಿ ಹೋಗುವಷ್ಟರ ಮಟ್ಟಿಗೆ ಆನೆ ಪ್ರಚಾರ ರಥ ವರ್ಕೌಟ್ ಆಗುತ್ತಿದೆ‌.


ಇದನ್ನೂ ಓದಿ: Karnataka Assembly Election 2023: ಮೈಸೂರಿನಲ್ಲಿ ಯಾರ ಕೈ ಹಿಡಿಯಲಿದ್ದಾನೆ ಮತದಾರ ಪ್ರಭು?


ಹಳ್ಳಿ-ಹಳ್ಳಿಗಳಿಗೆ ಆನೆ ಪ್ರಚಾರ ರಥ ಲಗ್ಗೆ ಇಡುತ್ತಿದ್ದು, ಒಟ್ಟಿನಲ್ಲಿ ವಿಭಿನ್ನವಾಗಿ ಮತಬೇಟೆ ನಡೆಸುತ್ತಿದ್ದಾರೆ. ಪ್ರಬಲ ಅಭ್ಯರ್ಥಿಗಳು ಸ್ಪರ್ಧಿಸಿರುವ ಚಾಮರಾಜನಗರದಲ್ಲಿ ಗಣನೀಯವಾಗಿ ಬಿಎಸ್ಪಿ ಅಭ್ಯರ್ಥಿ ಗುರುತಿಸಿಕೊಂಡಿದ್ದಾರೆ.


ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಿಂದ ಮತಬೇಟೆ!


ಕುಂದಾನಗರಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತಬೇಟೆ ನಡೆಸುತ್ತಿದ್ದಾರೆ. ಶನಿವಾರ ಬೆಳ್ಳಂಬೆಳಗ್ಗೆಯೇ ಕಾಂಗ್ರೆಸ್ ಅಭ್ಯರ್ಥಿ ಆಸಿಫ್ (ರಾಜು) ಸೇಠ್ ಮತಬೇಟೆಗೆ ಇಳಿದಿದ್ದಾರೆ. ಬೆಳಗಾವಿ ಉತ್ತರ ಮತ ಕ್ಷೇತ್ರದ ಅಭ್ಯರ್ಥಿ ಆಸಿಫ್ ಸೆಠ್ ಕಾಂಗ್ರೆಸ್‍ಗೆ ಮತ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.


ಇದನ್ನೂ ಓದಿ: ಅಭ್ಯರ್ಥಿಗೆ ಆಮೀಷ ಆಡಿಯೋ: ಮೂವರ ವಿರುದ್ಧ ಕೇಸ್ ದಾಖಲು!


ಗಲ್ಲಿ ಗಲ್ಲಿಯಲ್ಲಿ ತಿರುಗಿ ಮತಯಾಚನೆ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಆಸಿಫ್ ಸೇಠ್‍ಗೆ ಮರಾಠ ಸಮುದಾಯದ ಯುವಕರು ಬೆಂಬಲ ಸೂಚಿಸಿದ್ದಾರೆ. ಜನರ ಉತ್ತಮ ಬೆಂಬಲ ಹಿನ್ನೆಲೆ ಆಸಿಫ್ ಸೇಠ್‍ಗೆ ಗೆಲುವಿನ ವಿಶ್ವಾದಲ್ಲಿದ್ದಾರೆ.



ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.