ಕೊಪ್ಪಳ : Karnataka Assembly Election : ಚುನಾವಣಾ ಏಜೆಂಟರುಗಳು ಮತಗಟ್ಟೆ ಒಳಗೆ ರೆಡ್ಡಿ ನಾಮಫಲಕ ಇರೋ ಬ್ಯಾಡ್ಜ್ ಹಾಕಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಚುನಾವಣೆ ಏಜೆಂಟರ ಈ ನಡೆಗೆ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ,  ಜನಾರ್ದನ ರೆಡ್ಡಿ ಮತಗಟ್ಟೆಗೆ ಬರುತ್ತಿದ್ದಂತೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ.  


COMMERCIAL BREAK
SCROLL TO CONTINUE READING

ಬಿಜೆಪಿಯಿಂದ ಹೊರ ಬಂದಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ತಮ್ಮದೇ ಆದ ಹೊಸ ಪಕ್ಷವನ್ನು ಕಟ್ಟುವ ಮೂಲಕ ಕಣಕ್ಕಿಳಿದಿದ್ದಾರೆ. ಆದರೆ, ಇದೀಗ  ಚುನಾವಣಾ ಏಜೆಂಟರುಗಳು ಮತಗಟ್ಟೆ ಒಳಗೆ ರೆಡ್ಡಿ ಹೆಸರಿನ ನಾಮಫಲಕ ಬಳಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.  ಈ ಹಿನ್ನೆಲೆಯಲ್ಲಿ ಗಾಲಿ ಜನಾರ್ದನ ರೆಡ್ಡಿ ಮತ ಗಟ್ಟೆಗೆ ಆಗಮಿಸುತ್ತಿದ್ದಂತೆಯೇ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 


ಇದನ್ನೂ ಓದಿ : Karnataka Assembly Election : ಹುರುಪಿನಿಂದಲೇ ಮತ ಚಲಾಯಿಸಿದ ಶತಾಯುಷಿಗಳು!


ಈ ಸಂದರ್ಭದಲ್ಲಿ ಗಾಲಿ ಜನಾರ್ದನ ರೆಡ್ಡಿ ಮತ್ತು ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದಿದೆ. ಈ ವೇಳೆ ವಾಗ್ವಾದ ಮಾಡುತ್ತಿದ್ದ ಜನರಿಗೆ ಜನಾರ್ದನ ರೆಡ್ಡಿ ವಾರ್ನಿಂಗ್ ನೀಡಿದ್ದಾರೆ ಎನ್ನಲಾಗಿದೆ. ಯಾರು ಗಲಾಟೆ ಮಾಡುತ್ತಿದ್ದಾರೆ ಅವರ ಹೆಸರು ಬರೆದುಕೋ ಎಂದು ತಮ್ಮ ಆಪ್ತ ಸಹಾಯಕನಿಗೆ ಸೂಚಿಸುವ ಮೂಲಕ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. 


ಇದೀಗ ಜನಾರ್ದನ ರೆಡ್ಡಿ ಅವರ ನಡೆಗೆ ಆಕ್ರೋಶ ವ್ಯಕ್ತವಾಗಿದ್ದು, ವಿಡಿಯೋ ಕೂಡಾ ವೈರಲ್ ಆಗುತ್ತಿದೆ. ಗೆಲ್ಲುವ ಮುನ್ನವೇ ಈ ರೀತಿ ವರ್ತಿಸಿದರೆ ಗೆದ್ದ ಮೇಲೆ ಇನ್ನೇನು ಮಾಡ್ತಾರೋ ಎ ಉವ ಅಸಮಾಧಾನ ಸ್ಥಳೀಯರಲ್ಲಿ ವ್ಯಕ್ತವಾಗಿದೆ. 


ಇದನ್ನೂ ಓದಿ : Karnataka voting: ಮತದಾನಕ್ಕಾಗಿ ಅಮೇರಿಕಾದಿಂದ ಬಂದ ಮಹಿಳೆ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ