Karnataka Election Results 2023: 'ಕರ್ನಾಟಕದಲ್ಲಿ ಇಂದು ನಡೆದಿದ್ದು 2024 ರಲ್ಲಿಯೂ ಪುನರಾವರ್ತನೆಯಾಗಲಿದೆ', ಇದು ಮೋದಿ-ಶಾ ಸೋಲು ಎಂದ ಸಂಜಯ್ ರಾವುತ್

Karnataka Assembly Election: ಕರ್ನಾಟಕ ವಿಧಾನಸಭಾ ಚುನಾವಣೆಯ ಆರಂಭಿಕ ಟ್ರೆಂಡ್‌ಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಈ ಮುನ್ನಡೆಯ ಬಳಿಕ ಇದೀಗ ವಿವಿಧ ಪಕ್ಷಗಳ ನಾಯಕರುಗಳಿಂದ ಪ್ರತಿಕ್ರಿಯೆಗಳು ಬರಲಾರಂಭಿಸಿವೆ. ಈ ಕುರಿತು ತಮ್ಮ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಶಿವಸೇನೆಯ ಉದ್ಧವ್ ಬಣದ ಮುಖಂಡ ಸಂಜಯ್ ರಾವುತ್ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ ಮತ್ತು ಕರ್ನಾಟಕದಲ್ಲಿ ಈ ಬಾರಿ ನಡೆದಿದ್ದು 2024 ರಲ್ಲೂ ಪುನರಾವರ್ತನೆಯಾಗಲಿದೆ ಎಂದು ಹೇಳಿದ್ದಾರೆ.  

Written by - Nitin Tabib | Last Updated : May 13, 2023, 12:08 PM IST
  • ಈ ಕುರಿತು ಮಾತನಾಡಿರುವ ಶಿವಸೇನೆಯ (ಯುಬಿಟಿ) ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಅವರು,
  • 'ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಮೋದಿ ಮತ್ತು ಅಮಿತ್ ಶಾ ಅವರ ಸೋಲು.
  • ಕರ್ನಾಟಕದಲ್ಲಿ ಏನಾಗಿದೆಯೋ ಅದೇ 2024ರ ಲೋಕಸಭೆ ಚುನಾವಣೆಯಲ್ಲೂ ಆಗಲಿದೆ.
  • ಕರ್ನಾಟಕ ಚುನಾವಣೆಯನ್ನು ಪ್ರತಿಷ್ಠೆಯ ಚುನಾವಣೆಯನ್ನಾಗಿ ಮಾಡಿದರು,
  • ಆದರೆ ಸೋಲುತ್ತೇವೆ ಎಂದು ಭಾವಿಸಿದಾಗ ಭಜರಂಗಬಲಿ ಮುಂದಕ್ಕೆ ತಂದರು' ಎಂದು ಸಂಜಯ್ ರಾವುತ್ ಹೇಳಿದ್ದಾರೆ.
Karnataka Election Results 2023: 'ಕರ್ನಾಟಕದಲ್ಲಿ ಇಂದು ನಡೆದಿದ್ದು 2024 ರಲ್ಲಿಯೂ ಪುನರಾವರ್ತನೆಯಾಗಲಿದೆ', ಇದು ಮೋದಿ-ಶಾ ಸೋಲು ಎಂದ ಸಂಜಯ್ ರಾವುತ್ title=
ಸಂಜಯ್ ರಾವುತ್

Karnataka Assembly Election Results 2023: ಕರ್ನಾಟಕದ ಎಲ್ಲಾ 224 ವಿಧಾನಸಭಾ ಸ್ಥಾನಗಳಿಗೆ ಮತ ಎಣಿಕೆ ನಡೆಯುತ್ತಿದೆ ಮತ್ತು ಕಾಂಗ್ರೆಸ್ ಟ್ರೆಂಡ್‌ಗಳಲ್ಲಿ ಬಹುಮತದ ಅಂಕವನ್ನು ದಾಟಿದೆ. ಕಾಂಗ್ರೆಸ್ ಮುನ್ನಡೆಯ ಕುರಿತು ಶಿವಸೇನಾ (ಯುಬಿಟಿ) ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ದೊಡ್ಡ ಹೇಳಿಕೆ ನೀಡಿದ್ದು, ಭಾರತೀಯ ಜನತಾ ಪಕ್ಷದ (ಬಿಜೆಪಿ) ತಲೆಯ ಮೇಲೆ ಬಜರಂಗಬಲಿಯ ಗದಾ ಏಟು ಬಿದ್ದಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಪ್ರಸ್ತುತ ನಡೆದಿದ್ದು 2024ರ ಚುನಾವಣೆಯಲ್ಲೂ ನಡೆಯಲಿದೆ.
ಈ ಕುರಿತು ಮಾತನಾಡಿರುವ ಶಿವಸೇನೆಯ (ಯುಬಿಟಿ) ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಅವರು, 'ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಮೋದಿ ಮತ್ತು ಅಮಿತ್ ಶಾ ಅವರ ಸೋಲು. ಕರ್ನಾಟಕದಲ್ಲಿ ಏನಾಗಿದೆಯೋ ಅದೇ 2024ರ ಲೋಕಸಭೆ ಚುನಾವಣೆಯಲ್ಲೂ ಆಗಲಿದೆ. ಕರ್ನಾಟಕ ಚುನಾವಣೆಯನ್ನು ಪ್ರತಿಷ್ಠೆಯ ಚುನಾವಣೆಯನ್ನಾಗಿ ಮಾಡಿದರು, ಆದರೆ ಸೋಲುತ್ತೇವೆ ಎಂದು ಭಾವಿಸಿದಾಗ ಭಜರಂಗಬಲಿ ಮುಂದಕ್ಕೆ ತಂದರು' ಎಂದು ಸಂಜಯ್ ರಾವುತ್ ಹೇಳಿದ್ದಾರೆ.

ಇದನ್ನೂ ಓದಿ-Tumkur Assembly Election Result 2023: ತುಮಕೂರು ನಗರದಲ್ಲಿ 11ನೇ ಸುತ್ತಿನ ಮತಎಣಿಕೆ ಮುಕ್ತಾಯ: 701 ಮತಗಳಿಂದ ಕಾಂಗ್ರೆಸ್ ಮುನ್ನಡೆ

ಕರ್ನಾಟಕದಲ್ಲಿ ಆರಂಭಿಕ ಟ್ರೆಂಡ್‌ಗಳಲ್ಲಿ ಬಹುಮತದತ್ತ ಕಾಂಗ್ರೆಸ್ 
ಕರ್ನಾಟಕ ವಿಧಾನಸಭಾ ಚುನಾವಣೆ 2023 ರ ಮತ ಎಣಿಕೆಯ ಆರಂಭಿಕ ಟ್ರೆಂಡ್‌ಗಳಲ್ಲಿ, ಪ್ರತಿಪಕ್ಷ ಕಾಂಗ್ರೆಸ್ ಬಹುಮತದ ಅಂಕವನ್ನು ದಾಟಿದೆ ಮತ್ತು ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಗಿಂತ ಕಾಂಗ್ರೆಸ್ ಸಾಕಷ್ಟು ಮುಂದಕ್ಕೆ ಸಾಗಿದೆ. ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಕಾಂಗ್ರೆಸ್ ಬೆಳಗ್ಗೆ  11 ಗಂಟೆಯವರೆಗೆ 118 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 74 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ನೇತೃತ್ವದ ಜೆಡಿಎಸ್ (ಜೆಡಿಎಸ್) 21 ಸ್ಥಾನಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿದೆ.

ಇದನ್ನೂ ಓದಿ-Chikkamagalore Vidhan Sabha Chunav: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕೈ ಕಲಿಗಳದ್ದೇ ಮೇಲು ಗೈ!

ಮತ ಎಣಿಕೆ ಮಧ್ಯೆ ಸಿದ್ದರಾಮಯ್ಯ ಪುತ್ರನ ಮಹತ್ವದ ಹೇಳಿಕೆ
ಕರ್ನಾಟಕದ ಎಲ್ಲಾ 224 ಸ್ಥಾನಗಳ ಮತ ಎಣಿಕೆ ನಡೆಯುತ್ತಿರುವ ಮಧ್ಯೆ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ದೊಡ್ಡ ಆಶಯವನ್ನು ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಹಿತದೃಷ್ಟಿಯಿಂದ ನನ್ನ ತಂದೆ ಮುಖ್ಯಮಂತ್ರಿಯಾಗಬೇಕು ಎಂದು ಯತೀಂದ್ರ ಹೇಳಿದ್ದಾರೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ನಾವು ಏನು ಬೇಕಾದರೂ ಮಾಡುತ್ತೇವೆ ಎಂದು ಯಾತೀಂದ್ರ ಹೇಳಿದ್ದಾರೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News