ಧಾರವಾಡ: ಹೌದು! ಒಂದು ಬಾರಿ ಮಣೆ ಹಾಕಿದವರಿಗೆ ಸತತ ಎರಡನೇ ಬಾರಿಯೂ ಧಾರವಾಡ ಗ್ರಾಮೀಣ ಕ್ಷೇತ್ರದ ಮತದಾರ ಮಣೆ ಹಾಕುವುದಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. 


COMMERCIAL BREAK
SCROLL TO CONTINUE READING

ಹೌದು! ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪದಡಿ ಜೈಲುವಾಸ ಅನುಭವಿಸಿ ಇದೀಗ  ಧಾರವಾಡ ಜಿಲ್ಲೆಯಿಂದ ಹೊರಗಿರುವ ವಿನಯ್ ಕುಲಕರ್ಣಿಯವರು ಕ್ಷೇತ್ರಕ್ಕೆ ಇಂದು ದಿನವೂ ಕಾಲಿಡದೇ ಇದ್ದರೂ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ. ಧಾರವಾಡ ಜಿಲ್ಲೆಯ ಗಡಿ ಭಾಗದಲ್ಲೇ ನಿಂತು ಚುನಾವಣೆ ಮಾಡಿದ ವಿನಯ್ ಕುಲಕರ್ಣಿ ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿಯವರ ವಿರುದ್ಧ 18 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. 


ಇದನ್ನೂ ಓದಿ: Mudigere Assembly Election Result 2023: ನಯನ ಮೋಟಮ್ಮ ʼಕೈʼ ಹಿಡಿದ ಮೂಡಿಗೆರೆ ಮತದಾರರು


ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ಅವರು ಸತತ ಎರಡನೇ ಬಾರಿಯೂ ಗೆಲುವಿನ ಲೆಕ್ಕಾಚಾರದಲ್ಲಿದ್ದರು. ಆದರೆ, ಮತದಾರನ ಅಂತಿಮ ನಿರ್ಣಯವೇ ಬೇರೆಯಾಗಿತ್ತು. ಅಂಚೆ ಮತ ಎಣಿಕೆಯಿಂದಲೇ ಮುನ್ನಡೆ ಕಾಯ್ದುಕೊಂಡು ಬಂದ ವಿನಯ್ ಕುಲಕರ್ಣಿ ಕೊನೆಯ ಸುತ್ತಿನವರೆಗೂ ಮುನ್ನಡೆ ಕಾಯ್ದುಕೊಂಡೇ ಬಂದರು. 


ಇದನ್ನೂ ಓದಿ: ಸೆಂಟ್ರಲ್ ಕಾಂಗ್ರೆಸ್ ಸೋಲಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ: ರಜತ್ ಉಳ್ಳಾಗಡ್ಡಿಮಠ


ಧಾರವಾಡ ಗ್ರಾಮೀಣ ಕ್ಷೇತ್ರದ ಈ ಚುನಾವಣೆ ಇಡೀ ರಾಜ್ಯದ ಗಮನಸೆಳೆದಿತ್ತು. ಕ್ಷೇತ್ರದಲ್ಲಿ ವಿನಯ್ ಕುಲಕರ್ಣಿಯವರ ಪತ್ನಿ ಶಿವಲೀಲಾ ಕುಲಕರ್ಣಿ ಹಾಗೂ ಅವರ ಮಕ್ಕಳು ಅಬ್ಬರದ ಪ್ರಚಾರ ನಡೆಸಿದ್ದರು. ಕೊನೆಗೂ ಶಿವಲೀಲಾ ಕುಲಕರ್ಣಿ ಅವರ ಹೋರಾಟಕ್ಕೆ ಗೆಲುವು ಸಿಕ್ಕಂತಾಗಿದೆ.


ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಾನೇ ವಿನಯ್ ಕುಲಕರ್ಣಿ ಎಂದು ಅಭಿಯಾನ ಕೂಡ ಆರಂಭಿಸಿದ್ದರು. ತಳಮಟ್ಟದಿಂದ ಕಾಂಗ್ರೆಸ್ ಕಾರ್ಯಕರ್ತರು ದೊಡ್ಡಮಟ್ಟದಲ್ಲಿ ಕಸರತ್ತು ನಡೆಸಿದ್ದರಿಂದ ಕ್ಷೇತ್ರಕ್ಕೆ ವಿನಯ್ ಕುಲಕರ್ಣಿ ಕಾಲಿಡದಿದ್ದರೂ ಅಭೂತಪೂರ್ವ ಗೆಲುವು ದಾಖಲಿಸಿದ್ದಾರೆ. ಬಿಜೆಪಿಯವರು ಕೂಡ ಅಬ್ಬರದ ಪ್ರಚಾರವನ್ನೇ ನಡೆಸಿದ್ದರು. ಅಮೃತ ದೇಸಾಯಿ ಹಾಗೂ ವಿನಯ್ ಕುಲಕರ್ಣಿ ಮಧ್ಯೆ ನೇರಾ ನೇರ ಪೈಪೋಟಿ ಏರ್ಪಟ್ಟು ಯಾರೇ ಗೆದ್ದರೂ 5 ಸಾವಿರ ಮತಗಳ ಅಂತರದೊಳಗೆ ಗೆಲ್ಲುತ್ತಾರೆ ಎಂಬ ಲೆಕ್ಕಾಚಾರ ಹಾಕಲಾಗಿತ್ತು. ಆದರೆ, ನಿರೀಕ್ಷೆಗೂ ಮೀರಿ ವಿನಯ್ ಕುಲಕರ್ಣಿ ಗೆಲುವು ಸಾಧಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ