Karnataka Elections 2023: ಖಾಕಿ ಕಾರ್ಯಾಚರಣೆ, ಲಕ್ಷಾಂತರ ನಗದು ಮತ್ತು ಅಪಾರ ವಸ್ತುಗಳು ವಶ!

Karnataka Assembly Elections 2023: ಏಪ್ರಿಲ್ 1ರಂದು ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಅನಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ಅಂದಾಜು 10 ಲಕ್ಷ ರೂ. ಮೌಲ್ಯದ ಅಕ್ಕಿ, ಬೇಳೆ, ಎಣ್ಣೆ, ಶಾವಿಗೆ, ಸಕ್ಕರೆ ಮತ್ತು ಇತರೆ ವಸ್ತುಗಳಿದ್ದ 500 ಬ್ಯಾಗ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ.

Written by - Puttaraj K Alur | Last Updated : Apr 2, 2023, 12:08 PM IST
  • ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 10 ಲಕ್ಷ ರೂ. ಮೌಲ್ಯದ ಅಕ್ಕಿ, ಬೇಳೆ, ಎಣ್ಣೆ, ಶಾವಿಗೆ & ಸಕ್ಕರೆ ವಶ
  • ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಂದಾಜು 5 ಲಕ್ಷ ರೂ. ಮೌಲ್ಯದ 115 ಕ್ವಿಂಟಾಲ್ ಅಕ್ಕಿ ವಶ
  • ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದ 90 ಸಾವಿರ ರೂ. ನಗದು ವಶಕ್ಕೆ
Karnataka Elections 2023: ಖಾಕಿ ಕಾರ್ಯಾಚರಣೆ, ಲಕ್ಷಾಂತರ ನಗದು ಮತ್ತು ಅಪಾರ ವಸ್ತುಗಳು ವಶ! title=
ಲಕ್ಷಾಂತರ ನಗದು ಮತ್ತು ವಸ್ತುಗಳು ವಶಕ್ಕೆ

ಶಿವಮೊಗ್ಗ: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಹಣದ ಹೊಳೆಯೇ ಹರಿಯುತ್ತಿದೆ. ಶಿವಮೊಗ್ಗ ಜಿಲ್ಲೆಯ ವಿವಿಧ ಚೆಕ್‍ಪೋಸ್ಟ್‍ಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಹಣ ಹಾಗೂ ಅಪಾರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹೌದು, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್‍ಪೋಸ್ಟ್ಗಳಲ್ಲಿ ವಾಹನಗಳ ತಪಾಸಣೆ ವೇಳೆ ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಮತ್ತು ಅನಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ಅಪಾರ ಪ್ರಮಾಣದ ವಸ್ತುಗಳು ಮತ್ತು ಲಕ್ಷಾಂತರ ನಗದು ಹಣವನ್ನು ಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಜೆಡಿಎಸ್ ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಏಪ್ರಿಲ್ 1ರಂದು ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಅನಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ಅಂದಾಜು 10 ಲಕ್ಷ ರೂ. ಮೌಲ್ಯದ ಅಕ್ಕಿ, ಬೇಳೆ, ಎಣ್ಣೆ, ಶಾವಿಗೆ, ಸಕ್ಕರೆ ಮತ್ತು ಇತರೆ ವಸ್ತುಗಳಿದ್ದ 500 ಬ್ಯಾಗ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅದೇ ರೀತಿ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಅಂದಾಜು 5 ಲಕ್ಷ ರೂ. ಮೌಲ್ಯದ 115 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಇದಲ್ಲದೆ ಸೂಕ್ತ ದಾಖಲೆಗಳಿಲ್ಲದೇ 3 ಲಗೇಜ್ ವಾಹನಗಳಲ್ಲಿ ಸಾಗಿಸುತ್ತಿದ್ದ ಅಂದಾಜು 4.50 ಲಕ್ಷ ರೂ. ಮೌಲ್ಯದ ರಗ್ಗು ಮತ್ತು ಜಮಖಾನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಕಗ್ಗಂಟಾದ ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿ - ಖರ್ಗೆ ಹಾಗೂ ಡಿಕೆಶಿ ಚರ್ಚೆ

ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ 90 ಸಾವಿರ ರೂ. ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲಿಯೇ ಮತದಾರರನ್ನು ಸೆಳೆಯಲು ವಿವಿಧ ರೀತಿಯ ಆಮೀಷಗಳನ್ನು ಒಡ್ಡಲಾಗುತ್ತಿದೆ. ಮತದಾರರ ಹಂಚಲು ಹಣ, ಬೆಲೆಬಾಳುವ ವಸ್ತುಗಳನ್ನು ಅಕ್ರಮವಾಗಿ ಸಾಗಾಟ ನಡೆಸಲಾಗುತ್ತಿದೆ.

ಅಕ್ರಮವಾಗಿ ಹಣ ಮತ್ತು ವಸ್ತುಗಳ ಸಾಗಾಟದ ಮೇಲೆ ಕಣ್ಣಿಟ್ಟಿರುವ ಪೊಲೀಸರು ಚೆಕ್‍ಪೋಸ್ಟ್ಗಳಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ. ದಾಖಲೆಗಳಿಲ್ಲದ ಹಣ ಮತ್ತು ವಸ್ತುಗಳನ್ನು ಕಂಡೆರೆ ಅವುಗಳನ್ನು ಕೂಡಲೇ ತಮ್ಮ ವಶಕ್ಕೆ ತೆಗೆದುಕೊಳ್ಳುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
  

Trending News