ಬೆಂಗಳೂರು: ಸಚಿವ ವಿ.ಸೋಮಣ್ಣ ಮತ್ತು ಸಂಸದ ಪ್ರತಾಪ್ ಸಿಂಹ ಅವರು ವರುಣಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಹಂಚಿಕೊಂಡಿರುವ ಕಾಂಗ್ರೆಸ್, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದೆ.


COMMERCIAL BREAK
SCROLL TO CONTINUE READING

‘ಈಗ ಜನರ ಸಮಯ ಬಂದಿದೆ, ಜನರ ಪ್ರಶ್ನೆಗಳಿಗೆ ಬಿಜೆಪಿ ನಾಯಕರು ಉತ್ತರವಿಲ್ಲದ ಉತ್ತರಕುಮಾರರಾಗಿದ್ದಾರೆ! ಡಿಯರ್ ಬಿಜೆಪಿ ಶಾಸಕರನ್ನು ಅಪಹರಿಸಿ ಅನೈತಿಕ ಸರ್ಕಾರ ಮಾಡಿದಂತಲ್ಲ ಜನರನ್ನು ಎದುರಿಸುವುದು. ಅಧಿಕಾರದುದ್ದಕ್ಕೂ ಜನವಿರೋಧಿಯಾಗಿ ನಡೆದುಕೊಂಡ ಬಿಜೆಪಿಗೆ ಜನಾಕ್ರೋಶದ ಅಸಲಿ ದರ್ಶನವಾಗುತ್ತಿದೆ. ಹೇಗಿದೆ ಜನಾಭಿಪ್ರಾಯ ಪ್ರತಾಪ್ ಸಿಂಹ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.


Election 2023: ಸಿಎಂ ಆಗೋಕೆ ಏನ್ ಮಾಡಬೇಕು? ವಿ.ಸೋಮಣ್ಣಗೆ ಬಾಲಕನ ಪ್ರಶ್ನೆ!


ಡಿಕೆಶಿ ನಾಮಪತ್ರ ಅಂಗೀಕಾರ : ಇನ್ನು ಕನಕಪುರ ಬಂಡೆಗಿಲ್ಲ ಅಡ್ಡಿ..!


‘ಒಂದು ಕಡೆ ಈಶ್ವರಪ್ಪ ಮೇಲೆ ಕಮಿಷನ್ ಆರೋಪ. ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ. ಇನ್ನೊಂದೆಡೆ ಸ್ವತಃ ಕರೆ ಮಾಡಿ ಈಶ್ವರಪ್ಪರನ್ನು ಶ್ಲಾಘಿಸಿದ ಪ್ರಧಾನಿ ಮೋದಿ. ಪ್ರಧಾನಿ ಮೋದಿ 'ಭ್ರಷ್ಟಾಚಾರ'ದ ಪರ ನಿಂತಿದ್ದಾರೆ ಎನ್ನುವುದಕ್ಕೆ ಇದಕ್ಕಿಂದ ಸಾಕ್ಷಿ ಬೇಕೆ? ಪ್ರಧಾನಿ ಮೋದಿಯವರು ಈಶ್ವರಪ್ಪನವರಿಗೆ ಕರೆ ಮಾಡಿ ಶ್ಲಾಘಿಸಿದ್ದಾರೆ. ಈ ಶ್ಲಾಘನೆ ಏಕೆ? 40% ಕಮಿಷನ್ ಲೂಟಿ ಮಾಡಿದ್ದಕ್ಕಾ? ಸಂತೋಷ್ ಪಾಟೀಲರ ಜೀವ ತೆಗೆದಿದ್ದಕ್ಕಾ? ಭ್ರಷ್ಟಾಚಾರದ ಪೋಷಣೆ ಮಾಡಿದ್ದಕ್ಕಾ? ಕಮಿಷನ್ ಬಗ್ಗೆ ಪತ್ರ ಬರೆದರೂ ಪ್ರತಿಕ್ರಿಯೆ ನೀಡದ ಮೋದಿ ಕಮಿಷನ್ ಲೂಟಿಕೋರನಿಗೆ ಬೆಂಬಲಿಸಿದ್ದಾರೆ’ ಎಂದು ಕಾಂಗ್ರೆಸ್ ಟೀಕಿಸಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.