ಚಾಮರಾಜನಗರ: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಕೆಲವು ಅಭ್ಯರ್ಥಿಗಳಿಗೆ ತಮ್ಮ ಓಟನ್ನು ತಮಗೆ ಹಾಕಿಕೊಳ್ಳಲು ಸಾಧ್ಯವಾಗಿಲ್ಲ. ಹೌದು, ಸ್ಪರ್ಧಿಸುವ ಕ್ಷೇತ್ರ ಬೇರೆ- ವಿಳಾಸ, ಹುಟ್ಟೂರು ಬೇರೆಯಾಗಿರುವ ಹಿನ್ನೆಲೆ ತಮ್ಮ ಓಟನ್ನು ಅಭ್ಯರ್ಥಿಗಳು ಬೇರೆಯವರಿಗೆ ಹಾಕಿದ್ದಾರೆ.  


COMMERCIAL BREAK
SCROLL TO CONTINUE READING

ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ದರ್ಶನ್ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾನ ಮಾಡಿದ್ದಾರೆ. ಅದರಂತೆ ಚಾಮರಾಜನಗರ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಸಿ‌.ಪುಟ್ಟರಂಗಶೆಟ್ಟಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವೋಟಿಂಗ್ ಮಾಡಿದ್ದಾರೆ.


ಇದನ್ನೂ ಓದಿ: ಈವರೆಗೆ ರಾಜ್ಯದಲ್ಲಿ ಅತೀ ಹೆಚ್ಚು ಮತದಾನವಾದ ಜಿಲ್ಲೆ ಯಾವುದು ಗೊತ್ತೇ..? ಇಲ್ಲಿದೆ ವಿವರ


ಕೊಳ್ಳೇಗಾಲದಲ್ಲಿ ತೀವ್ರ ಪೈಪೋಟಿ ಕೊಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿ‌ ಎ.ಆರ್.ಕೃಷ್ಣಮೂರ್ತಿ ಚಾಮರಾಜನಗರ ಕ್ಷೇತ್ರದ ಆಲೂರು ಗ್ರಾಮದಲ್ಲಿ ಮತ ಚಲಾವಣೆ ಮಾಡಿದ್ದಾರೆ. ಕೊಳ್ಳೇಗಾಲದ ಜೆಡಿಎಸ್ ಅಭ್ಯರ್ಥಿ ಬಿ.ಪುಟ್ಟಸ್ವಾಮಿ ವರುಣಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾನ ಮಾಡಿದ್ದಾರೆ.


ಅದರಂತೆ ಕನ್ನಡ ಚಳವಳಿಗಾರ, ಚಾಮರಾಜನಗರ ಪಕ್ಷೇತರ ಅಭ್ಯರ್ಥಿ ವಾಟಾಳ್ ನಾಗರಾಜ್ ಬೆಂಗಳೂರಲ್ಲಿ ಮತ ಚಲಾವಣೆ ಮಾಡಿದ್ದಾರೆ. ಹನೂರು ಜೆಡಿಎಸ್ ಅಭ್ಯರ್ಥಿ ಮಂಜುನಾಥ್ ಬೆಂಗಳೂರಲ್ಲಿ ವೋಟಿಂಗ್ ಮಾಡಿದ್ದಾರೆ. ಇವರೆಲ್ಲರೂ ಸ್ಪರ್ಧಿಸುವ ಕ್ಷೇತ್ರ, ವಿಳಾಸ, ಹುಟ್ಟೂರು ಬೇರೆಯಾಗಿರುವ ಕಾರಣ ಬೇರೆಯ ಅಭ್ಯರ್ಥಿಗಳಿಗೆ ಮತ ಹಾಕಿದ್ದಾರೆ.


ಇದನ್ನೂ ಓದಿ: ಮತದಾನ ಮಾಡಿ ಹೊರ ಬಂದ‌ ಬಳಿಕ ವ್ಯಕ್ತಿ ಸಾವು..!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.