Karnataka Elections 2023: ದೆಹಲಿ ಅಂಗಳಕ್ಕೆ ತಲುಪಿದ ಸಿಎಂ ಆಯ್ಕೆ!

Karnataka Election Result 2023: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ವಿಚಾರ ಇದೀಗ ದೊಡ್ಡ ತಲೆನೋವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಅಂತಿಮವಾಗಿ ಯಾರನ್ನು ಆಯ್ಕೆ ಮಾಡುತ್ತಾರೆ ಅನ್ನೋದು ತೀವ್ರ ಕೂತುಹಲ ಮೂಡಿಸಿದೆ. ಮುಂದಿನ ಸಿಎಂ ಡಿ.ಕೆ.ಶಿವಕುಮಾರ್ ಅಥವಾ ಸಿದ್ದರಾಮಯ್ಯರಾ ಅನ್ನೋ ಪ್ರಶ್ನೆ ಮೂಡಿದೆ.

Written by - Puttaraj K Alur | Last Updated : May 14, 2023, 09:13 PM IST
  • ಬಗೆಹರಿಯದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ಕಗ್ಗಂಟು
  • ಮುಖ್ಯಮಂತ್ರಿ ಆಯ್ಕೆ ವಿಚಾರ ಇದೀಗ ದೆಹಲಿ ಅಂಗಳಕ್ಕೆ ತಲುಪಿದೆ
  • ಸಮಾನ ಅವಕಾಶವೆಂಬ ಅಧಿಕಾರ ಹಂಚಿಕೆ ಸೂತ್ರಕ್ಕೆ ಒಪ್ಪದ ಡಿಕೆಶಿ
Karnataka Elections 2023: ದೆಹಲಿ ಅಂಗಳಕ್ಕೆ ತಲುಪಿದ ಸಿಎಂ ಆಯ್ಕೆ! title=
ಅಧಿಕಾರ ಹಂಚಿಕೆ ಸೂತ್ರಕ್ಕೆ ಒಪ್ಪದ ಡಿಕೆಶಿ!

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯನ್ನು ಎಐಸಿಸಿ ಅಧ್ಯಕ್ಷರ ನಿರ್ಧಾರಕ್ಕೆ ಬಿಡಲು ಕಾಂಗ್ರೆಸ್ ಶಾಸಕಾಂಗ ಪಕ್ಷವು ಸರ್ವಾನುಮತದಿಂದ ನಿರ್ಧರಿಸಿದೆ. ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.

ಸಿಎಲ್‍ಪಿ ನಾಯಕನ ಆಯ್ಕೆ ಕಗ್ಗಂಟು ಬಗೆಹರಿದಿಲ್ಲ. ಈ ಹಿನ್ನೆಲೆ ಸಿಎಂ ಆಯ್ಕೆ ವಿಚಾರ ಇದೀಗ ದೆಹಲಿ ಅಂಗಳಕ್ಕೆ ತಲುಪಿದೆ. ಶಾಸಕಾಂಗ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಹೊಸ ಪಟ್ಟು ಹಿಡಿದಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಅವರು ನಿರ್ಣಯ ಮಂಡಿಸಿದ್ದಾರೆ. ಅಧಿಕಾರ ಹಂಚಿಕೆ ಸೂತ್ರಕ್ಕೆ ಡಿಶಿಕೆ ಒಪ್ಪಿಗೆ ನೀಡಿಲ್ಲ. ಸಿದ್ದರಾಮಯ್ಯ ಮತ್ತು ನಿಮಗೂ ಸಮಾನ ಅವಕಾಶ ಎಂದಿದ್ದಕ್ಕೆ ಡಿಕೆಶಿ ಒಪ್ಪಿಗೆ ನೀಡಿಲ್ಲ.

ಇದನ್ನೂ ಓದಿ: 'ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಪರಾಕ್' ಭವಿಷ್ಯವಾಣಿ ನಿಜವಾಯಿತಾ...!

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ವಿಚಾರ ಇದೀಗ ದೊಡ್ಡ ತಲೆನೋವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಅಂತಿಮವಾಗಿ ಯಾರನ್ನು ಆಯ್ಕೆ ಮಾಡುತ್ತಾರೆ ಅನ್ನೋದು ತೀವ್ರ ಕೂತುಹಲ ಮೂಡಿಸಿದೆ. ಮುಂದಿನ ಸಿಎಂ ಡಿ.ಕೆ.ಶಿವಕುಮಾರ್ ಅಥವಾ ಸಿದ್ದರಾಮಯ್ಯರಾ ಅನ್ನೋ ಪ್ರಶ್ನೆ ಮೂಡಿದೆ.

ಇತ್ತ ತಮಗೆ ಡಿ.ಕೆ.ಶಿವಕುಮಾರ್ ಅವರೇ ಸಿಎಂ ಆಗಬೇಕೆಂದು ಡಿಕೆಶಿ ಅಭಿಮಾನಿಗಳು ಮತ್ತು ಸಿದ್ದರಾಮಯ್ಯನವರೇ ಸಿಎಂ ಆಗಬೇಕೆಂದು ಸಿದ್ದು ಅಭಿಮಾನಿಗಳು ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಸಿದ್ದರಾಮಯ್ಯರ ಫೋಟೋ ಹಿಡಿದುಕೊಂಡು ಸಿದ್ದು ಸಿಎಂ ಎಂದು ಅಭಿಮಾನಿಗಳು ಘೋಷಣೆ ಕೂಗುತ್ತಿದ್ದರೆ, ಡಿಕೆಶಿ ಸಿಎಂ, ಡಿಕೆಶಿ ಸಿಎಂ ಎಂದು ಡಿಕೆಶಿ ಬೆಂಬಲಿಗರು ಘೋಷಣೆ ಕೂಗುತ್ತಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲಾ ಶಾಸಕರು ಭಾಗಿಯಾಗಿದ್ದಾರೆ. ಒಂದು ಕಡೆ ಸಿಎಲ್‍ಪಿ ಮೀಟಿಂಗ್ ನಡೆಯುತ್ತಿದ್ದರೆ, ಮತ್ತೊಂದು ಕಡೆ  ಸಿದ್ದರಾಮಯ್ಯ ‌ಹಾಗೂ ಡಿಕೆಶಿ ಅಭಿಮಾನಿಗಳು ಘೋಷಣೆ ಕೂಗುತ್ತಾ ಗಲಾಟೆ ಎಬ್ಬಿಸಿದ್ದಾರೆ.  

ಇದನ್ನೂ ಓದಿ: ಗುರುವಾರದಂದು ರಾಜ್ಯದ ನೂತನ ಮುಖ್ಯಮಂತ್ರಿ ಪ್ರಮಾಣವಚನ !

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News