ಬೆಂಗಳೂರು: ಕಾಂಗ್ರೆಸ್​ ಪಕ್ಷಕ್ಕೆ ಅಭೂತಪೂರ್ವ ಗೆಲುವು ಸಿಕ್ಕ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ‘ಈ ಅತಿದೊಡ್ಡ ಗೆಲುವಿಗೆ ಕಾರಣರಾದ ಪಕ್ಷದ ಕಾರ್ಯಕರ್ತರಿಗೆ ಮತ್ತು ನಾಯಕರಿಗೆ ಧನ್ಯವಾದಗಳು’ ಎಂದು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಕಾಂಗ್ರೆಸ್ ನಾಯಕರ ಬೆಂಬಲ ನೆನೆದ ಡಿಕೆಶಿ


ಜೈಲಿಗೆ ಹೋದ ದಿನಗಳಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ನೀಡಿದ ಬೆಂಬಲ ನೆನೆದು ಡಿಕೆಶಿ ಇದೇ ವೇಳೆ ಕಣ್ಣೀರು ಹಾಕಿದ್ದಾರೆ. ಸೋನಿಯಾ ಗಾಂಧಿ ಮತ್ತು ಸಿದ್ದರಾಮಯ್ಯನವರು ನೀಡಿದ ಬೆಂಬಲ ನೆನೆದು ಭಾವುಕರಾದರು. ಕಾಂಗ್ರೆಸ್ ಮೇಲೆ ನಂಬಿಕೆ ಇಟ್ಟು ಮತ ಹಾಕಿದ ಕರ್ನಾಟಕದ ಜನತೆಗೆ ಸಾಷ್ಟಾಂಗ ನಮಸ್ಕಾರಗಳು ಎಂದು ಡಿಕೆಶಿ ಹೇಳಿದರು.


ಇದನ್ನೂ ಓದಿ: Karnataka Election Results 2023: ಟ್ರೆಂಡ್ ಗಳಲ್ಲಿ ಭಾರಿ ಮುನ್ನಡೆಯ ಬಳಿಕ ಫುಲ್ ಜೋಶ್ ನಲ್ಲಿ ಕಾಂಗ್ರೆಸ್, ನಾಳೆ ಶಾಸಕಾಂಗ ಪಕ್ಷದ ಸಭೆ!


ಡಿ.ಕೆ.ಶಿವಕುಮಾರ್ 91,455 ಮತಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ. ಡಿಕೆಶಿಗೆ ಸವಾಲು ಹಾಕಿದ್ದ ಬಿಜೆಪಿಯ ಆರ್.ಅಶೋಕ್ ಕೇವಲ 13,723 ಮತಗಳನ್ನು ಪಡೆದು ಹೀನಾಯ ಸೋಲು ಕಂಡಿದ್ದಾರೆ. ಜೆಡಿಎಸ್‍ನ ಬಿ.ನಾಗರಾಜು 15,047 ಬಿಜೆಪಿ ಅಭ್ಯರ್ಥಿಗಿಂತಲೂ ಹೆಚ್ಚಿನ ಮತ ಗಳಿಸಿದ್ದಾರೆ.


ಇದನ್ನೂ ಓದಿ: ಚುನಾವಣೆ ಫಲಿತಾಂಶ: ಜನಾದೇಶ ಸ್ವಾಗತಿಸಿದ ಹೆಚ್.ಡಿ.ಕುಮಾರಸ್ವಾಮಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.