ಬೆಂಗಳೂರು: ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‍ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ(CLP) ನಡೆಯುತ್ತಿದೆ. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಹೋಟೆಲ್ ಮುಂಭಾಗ ಹೈಡ್ರಾಮಾ ನಡೆಸಿದ್ದಾರೆ. ಸಿದ್ದರಾಮಯ್ಯನವರೇ ಸಿಎಂ ಆಗಬೇಕೆಂದು ಅವರ ಅಭಿಮಾನಿಗಳು ಘೋಷಣೆ ಕೂಗುತ್ತಿದ್ದರೆ, ಡಿ.ಕೆ.ಶಿವಕುಮಾರ್ ಅವರೇ ಸಿಎಂ ಆಗಬೇಕೆಂದು ಅವರ ಅಭಿಮಾನಿಗಳು ಘೊಷಣೆ ಕೂಗುತ್ತಿದ್ದಾರೆ.


COMMERCIAL BREAK
SCROLL TO CONTINUE READING

ಸಿದ್ದರಾಮಯ್ಯರ ಫೋಟೋ ಹಿಡಿದುಕೊಂಡು ಸಿದ್ದು ಸಿಎಂ ಎಂದು ಅಭಿಮಾನಿಗಳು ಘೋಷಣೆ ಕೂಗುತ್ತಿದ್ದರೆ, ಡಿಕೆಶಿ ಸಿಎಂ, ಡಿಕೆಶಿ ಸಿಎಂ ಎಂದು ಡಿಕೆಶಿ ಬೆಂಬಲಿಗರು ಘೋಷಣೆ ಕೂಗುತ್ತಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲಾ ಶಾಸಕರು ಭಾಗಿಯಾಗಿದ್ದಾರೆ. ಸಭೆಯಲ್ಲಿ ಸಿಎಂ ಯಾರಾಗಬೇಕು ಅನ್ನೋದರ ಕುರಿತು ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ಮುಂದಿನ ನಿರ್ಧಾರ ಕೈಗೊಳ್ಳಲಿದೆ.


ಇದನ್ನೂ ಓದಿ: Karnataka Election 2023: ಸಿದ್ದರಾಮಯ್ಯ-ಡಿಕೆಶಿಗೆ ಆಲ್ ದಿ ಬೆಸ್ಟ್ ಎಂದ ಹಂಗಾಮಿ ಸಿಎಂ ಬೊಮ್ಮಾಯಿ


ಒಂದು ಕಡೆ ಸಿಎಲ್‍ಪಿ ಮೀಟಿಂಗ್ ನಡೆಯುತ್ತಿದ್ದರೆ, ಮತ್ತೊಂದು ಕಡೆ  ಸಿದ್ದರಾಮಯ್ಯ ‌ಹಾಗೂ ಡಿಕೆಶಿ ಅಭಿಮಾನಿಗಳು ಘೋಷಣೆ ಕೂಗುತ್ತಾ ಗಲಾಟೆ ಎಬ್ಬಿಸಿದ್ದಾರೆ. ಡಿಕೆ ಡಿಕೆ ಎಂದು ಡಿಕೆಶಿ ಬೆಂಬಲಿಗರು ಘೋಷಣೆ ಕೂಗ್ತಾ ಇದ್ರೆ,  ಮತ್ತೊಂದು ಕಡೆ ಸಿದ್ದು ಸಿದ್ದು ಎಂದು ಸಿದ್ದರಾಮಯ್ಯ ಕಡೆಯವರು ಘೋಷಣೆ ಕೂಗುತ್ತಿದ್ದಾರೆ.


ಮುಖ್ಯಮಂತ್ರಿ ಪಟ್ಟಕ್ಕಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಭರ್ಜರಿ ಪೈಪೋಟಿ ನಡೆಯುತ್ತಿದೆ. ಶಾಂಗ್ರಿಲಾ ಹೊಟೇಲಿಗೆ ತೆರಳುವ ಮುನ್ನ ಡಿಕೆಶಿ ತಮ್ಮ ನಿವಾಸದಲ್ಲಿ ಸಭೆ ನಡೆಸಿದ್ದಾರೆ. 15ಕ್ಕೂ ಹೆಚ್ಚು ಶಾಸಕರು ಡಿಕೆಶಿ ನಿವಾಸದಲ್ಲಿ ಮಾತುಕತೆ ನಡೆಸಿ ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.   


ಇದನ್ನೂ ಓದಿ: Karnataka Assembly election: ಹಸ್ತದ ಗುರುತು ಹೇರ್ ಕಟಿಂಗ್ ಮಾಡಿಸಿಕೊಂಡ ಕೈ ಅಭಿಮಾನಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.