Karnataka New CM: ಮೇ 17 ಅಥವಾ 18ರಂದು ನೂತನ ಸಿಎಂ ಪ್ರಮಾಣವಚನ?: ಮೇ 17 ಅಥವಾ 18ರಂದು ನೂತನ ಸಿಎಂ ಜೊತೆ ಕೆಲ ಸಚಿವರು ಸಹ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಮೊದಲಿಗೆ ಕೆಲ ಹಿರಿಯರನ್ನು ಒಳಗೊಂಡ ಸಂಪುಟ ಅಸ್ತಿತ್ವಕ್ಕೆ ಬರಲಿದೆ ಎಂದು ಹೇಳಲಾಗುತ್ತಿದೆ.


COMMERCIAL BREAK
SCROLL TO CONTINUE READING

ಈಗಾಗಲೇ ಸಿದ್ದರಾಮಯ್ಯರನ್ನು ಮುಂದಿನ ಸಿಎಂ ಎಂದು ಕಾಂಗ್ರೆಸ್ ವರಿಷ್ಠರು ಘೋಷಿಸಿದ್ದು, ಇನ್ನಷ್ಟೇ ಅಧಿಕೃತವಾಗಬೇಕಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ಗೆ ಉಪಮುಖ್ಯಮಂತ್ರಿ ಪಟ್ಟ ನೀಡಲು ನಿರ್ಧರಿಸಲಾಗಿದೆ. ಮೂಲಗಳ ಪ್ರಕಾರ ನೂತನ ಕಾಂಗ್ರೆಸ್‍ ಸರ್ಕಾರದಲ್ಲಿ ನಾಲ್ವರು ಡಿಸಿಎಂ ಆಗಲಿದ್ದಾರೆಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ನಾನು ಪೂಜೆ-ಪುನಸ್ಕಾರ ಎಲ್ಲಾ ಮಾಡಬೇಕಿದೆ: ಡಿ.ಕೆ.ಶಿವಕುಮಾರ್


ಇನ್ನು ಡಿ.ಕೆ.ಶಿವಕುಮಾರ್ Vs ಸಿದ್ದರಾಮಯ್ಯ ಸಿಎಂ ಕದನದಲ್ಲಿ ಸಿದ್ದು ‘ಕೈ’ ಮೇಲಾಗಿದೆ. ಕಾಂಗ್ರೆಸ್ ಪಕ್ಷವನ್ನು ಬಹುಮತದಿಂದ ಅಧಿಕಾರಕ್ಕೆ ತಂದ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಬೇಕೆಂದು ಅವರ ಬೆಂಬಲಿಗರು ಒತ್ತಾಯಿಸಿದರೆ, ತಮ್ಮ ವರ್ಚಸ್ಸಿನಿಂದಲೇ ಕಾಂಗ್ರೆಸ್‍ಗೆ 136 ಸೀಟು ಗೆಲ್ಲಿಸಿಕೊಟ್ಟ ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿಯಾಗಬೇಕೆಂದು ಅವರ ಅಭಿಮಾನಿಗಳು ಪಟ್ಟು ಹಿಡಿದಿದ್ದರು. ಕೆಲವರು ಲಿಂಗಾಯತರಿಗೆ ಸಿಎಂ ಪಟ್ಟ ಬೇಕೆಂದು ಎಂ.ಬಿ.ಪಾಟೀಲ್ ಪರ ಮತ್ತೆ ಕೆಲವರು ದಲಿತರಿಗೆ ಸಿಎಂ ಪಟ್ಟ ಬೇಕೆಂದು ಡಾ.ಜಿ.ಪರಮೇಶ್ವರ್ ಬ್ಯಾಟಿಂಗ್ ಮಾಡಿದ್ದಾರೆ. ಆದರೆ ಅಂತಿಮವಾಗಿ ಸಿದ್ದರಾಮಯ್ಯನವರೇ ಮುಂದಿನ ಸಿಎಂ ಆಗಿ ಆಯ್ಕೆಯಾಗಿದ್ದಾರೆ.  


ಸಿಎಂ ಆಯ್ಕೆ ಪಕ್ಷದ ವರಿಷ್ಠರ ತೀರ್ಮಾನ


ಯಾರಿಗೆ ಶಾಸಕರ ಬೆಂಬಲ ಇದೆಯೆಂಬುದು ಮುಖ್ಯವಲ್ಲ. ಸಿಎಂ ಆಯ್ಕೆಯನ್ನು ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬಿಟ್ಟಿದ್ದೇವೆಂದು ಸದಾಶಿವನಗರದ ತಮ್ಮ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.​  


ಇದನ್ನೂ ಓದಿ: Karnataka New CM Siddaramaiah: ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ, ಅಧಿಕೃತ ಘೋಷಣೆಯಷ್ಟೇ ಬಾಕಿ!


ನನ್ನ ಅಧ್ಯಕ್ಷತೆಯಲ್ಲಿ 135 ಶಾಸಕರು ಆಯ್ಕೆಯಾಗಿದ್ದಾರೆ. ನನಗೆ ಕೊಂಚ ಆರೋಗ್ಯ ಸಮಸ್ಯೆಯಾಗಿದೆ. ಹೀಗಾಗಿ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ. ನಾನು ವಿಶ್ರಾಂತಿ ತೆಗೆದುಕೊಳ್ಳುತ್ತೇನೆ ಅಂತಾ ಡಿಕೆಶಿ ಹೇಳಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.