Karnataka Assembly Election 2023 Latest Updates (ಕರ್ನಾಟಕ ಅಸೆಂಬ್ಲಿ ಎಲೆಕ್ಷನ್ 2023 ಲೇಟೆಸ್ಟ್ ಅಪ್ಡೇಟ್) : ರಾಜ್ಯ ರಾಜಕಾರಣದಲ್ಲಿ ವಿಧಾನಸಭಾ ಚುನಾವಣಾ ಕಾವು ರಂಗೇರುತ್ತಿದೆ. ವೋಟ್ ಹಾಕಿ ನಮ್ಮ ಸಾಂವಿಧಾನಿಕ ಹಕ್ಕನ್ನು ಚಲಾಯಿಸಬೇಕು ಎಂದು ಕೊಂಡಿದ್ದವರಿಗೆ ಶಾಕ್ ಆಗಿದೆ. ಬೆಳ್ಳಂಬೆಳಿಗ್ಗೆ ಮತಗಟ್ಟೆಗೆ ಬಂದರೂ ಲಿಸ್ಟ್ ನಲ್ಲಿ ಮಾತ್ರ ಹೆಸರು ಇಲ್ಲ. ಚೆಕ್ ಮಾಡಿದರೇ ಡಿಲೀಟೆಡ್ ಅಂತ ತೋರಿಸುತ್ತಿದೆ. ಇದು ವೋಟ್ ಹಾಕಲು ಬಂದವರು ಶಾಕ್ ಆಗಿರುವ ಸ್ಟೋರಿ.. 


COMMERCIAL BREAK
SCROLL TO CONTINUE READING

ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಬಿಗ್ ಶಾಕ್ ಎದುರಾಗಿದ್ದು, ಮತ ಕೇಂದ್ರದಲ್ಲಿ ಗೊಂದಲ ಉಂಟಾಗಿದೆ. ಹೌದು.. ಒಂದೇ ಮತ ಕೇಂದ್ರದಲ್ಲಿ 400 ಕ್ಕೂ ಅಧಿಕ ಮತದಾರರ ಹೆಸರುಗಳು ಡಿಲೀಟ್ ಆಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. 


ಇದನ್ನೂ ಓದಿ- ರಸ್ತೆ, ಬಸ್ ಸಮಸ್ಯೆ: ಮಧ್ಯಾಹ್ನವಾದರೂ ಮತ ಹಾಕದ ರಾಜ್ಯದ ಕಟ್ಟ ಕಡೆಯ ಗ್ರಾಮದ ಜನತೆ


ಹುಬ್ಬಳ್ಳಿ ಧಾರವಾಡ ಪಶ್ಚಿಮ‌ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆಯಲ್ಲಿ ಮತದಾರರ ಹೆಸರುಗಳೇ ಡಿಲೀಟ್ ಆಗಿದೆ. ಗುರುನಾಥ ನಗರದಲ್ಲಿರುವ ಪ್ರಿಯದರ್ಶಿನಿ ಕಾಲೇಜಿನ ಮತಗಟ್ಟೆ ವ್ಯಾಪ್ತಿಗೆ ಬರುವ ಮತದಾರರ ಹೆಸರು ಡಿಲೀಟ್ ಆಗಿದ್ದು, ಸಾರ್ವಜನಿಕರು ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 


ಇದನ್ನೂ ಓದಿ- ಸಂಭ್ರಮದಿಂದ ಸೋಲಿಗರ ಮತದಾನ: ವನವಾಸಿಗಳನ್ನು ಸೆಳೆಯುತ್ತಿದೆ ಎಥ್ನಿಕ್ ಮತಗಟ್ಟೆ


ಮತದಾರರ ಪಟ್ಟಿಯಲ್ಲಿ ಬದುಕಿದ್ದವರ ಹೆಸರೇ ಡಿಲೀಟ್: 
ಇನ್ನು ಮತದಾರರ ಪಟ್ಟಿಯಲ್ಲಿ ಬದುಕಿದ್ದವರ ಹೆಸರೇ ಡಿಲೀಟ್ ಆಗಿದ್ದು, ಬದುಕಿದ್ದವರ ಹೆಸರನ್ನೇ ಡಿಲೀಟ್ ಮಾಡಿದ್ದಾರೆ. ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಡಿಲೀಟ್ ಆದ ಹಿನ್ನೆಲೆ ಮತದಾರರು ಕೆಂಡಾಮಂಡಲರಾಗಿದ್ದಾರೆ. ಚುನಾವಣಾ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಮಾಯವಾಗಿವೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.