Karnataka Election 2023 : ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ಬೇಸರ ತರಿಸಿದೆ - ಸಿಎಂ ಬೊಮ್ಮಾಯಿ‌

Karnataka Election 2023 : ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಿಜೆಪಿ ತೊರೆದು, ಕಾಂಗ್ರೆಸ್‌ ಪಕ್ಷ ಸೇರಿದ್ದಾರೆ. ಈ ಬಗ್ಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ಬೇಸರ ತರಿಸಿದೆ ಎಂದಿದ್ದಾರೆ.

Written by - Prashobh Devanahalli | Edited by - Chetana Devarmani | Last Updated : Apr 14, 2023, 05:29 PM IST
  • ಕರ್ನಾಟಕ ವಿಧಾನಸಭಾ ಚುನಾವಣೆ 2023
  • ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ಬೇಸರ ತರಿಸಿದೆ
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿಕೆ
Karnataka Election 2023 : ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ಬೇಸರ ತರಿಸಿದೆ - ಸಿಎಂ ಬೊಮ್ಮಾಯಿ‌ title=
Bommai

ಬೆಂಗಳೂರು: ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಗೆ ಹೋಗ್ತಿರೋದು ದುಃಖ ತರಿಸಿದೆ. ಅವರಿಗೆ ಕಾಂಗ್ರೆಸ್ ನಲ್ಲಿ  ರಾಜಕೀಯ ಭವಿಷ್ಯ ಕಂಡಿದೆ. ಕಾಂಗ್ರೆಸ್ ಅಲ್ಲಿ 60 ಸೀಟಿಗೆ ನಿಲ್ಲುವ ಗತಿ ಇಲ್ಲ. ಅದಕ್ಕಾಗಿ ಕೆಲವರನ್ನು ಸೇರಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಸಹಜವಾಗಿ ಆಡಳಿತ ಪಕ್ಷದಲ್ಲಿ ಆಕಾಂಕ್ಷಿಗಳು ಜಾಸ್ತಿ ಇರುತ್ತಾರೆ. ಕಾರ್ಯಕರ್ತರು ನಮ್ಮ ಪರವಾಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ. ಕೆಲವರು ಶಾಸಕರಾಗಬೇಕು ಅಂತ ಪಕ್ಷ ಬಿಡುತ್ತಾರೆ. ನಮ್ಮ ಪಕ್ಷದ ಕಾರ್ಯಕರ್ತರು ನಮ್ಮ ಪಕ್ಷಕ್ಕೆ ಬದ್ಧರಾಗಿದ್ದಾರೆ ಎಂದರು.

ಇದನ್ನೂ ಓದಿ : Karnataka Assembly Election 2023: ಮೊದಲ ದಿನವೇ 221 ನಾಮಪತ್ರ ಸಲ್ಲಿಕೆ

ಈಗಾಗಲೇ ಪಕ್ಷದ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮೂರನೇ ಪಟ್ಟಿ ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇವೆ. ನಾಳೆ ಶಿಗ್ಗಾಂವಿಯಲ್ಲಿ ಚುನಾವಣಾ ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದರು.

ಮಾಜಿ ಉಪಮುಖ್ಯಮಂತ್ರಿ, ಬೆಳಗಾವಿಯ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಅಥಣಿಯಿಂದ  ಬಿಜೆಪಿ ಟಿಕೆಟ್‌ ಸಿಗದ ಹಿನ್ನೆಲೆ ಸವದಿ ಕಾಂಗ್ರೆಸ್‌ ಸೇರಿದ್ದು, ಬಿಜೆಪಿ ನಾಯಕರು ಸವದಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. 

ಇದನ್ನೂ ಓದಿ : ಒಂದು ಫೋನ್ ಕಾಲ್‌ಗೆ ಬಂಡಾಯ ಅಭ್ಯರ್ಥಿ ರುದ್ರೇಶ್ ಥಂಡಾ..! ಸೋಮಣ್ಣನ ಹಾದಿ ಸರಳ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News