Karnataka Election 2023: ಕೈ ತಪ್ಪಿದ ಟಿಕೆಟ್, ಬಿಜೆಪಿ ತೊರೆಯಲಿದ್ದಾರಾ ಲಕ್ಷ್ಮಣ ಸವದಿ!?

Karnataka Election 2023: ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದೆ. ಇದರಿಂದ ಬೇಸರಗೊಂಡಿದ್ದ ಸವದಿ ಅವರನ್ನು ಕಾಂಗ್ರೆಸ್‌ ನಾಯಕ ರಾಜು ಕಾಗೆ ಭೇಟಿ ಮಾಡಿದ್ದರು. ಈ ಬೆಳವಣಿಗೆ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದೆ.   

Written by - Chetana Devarmani | Last Updated : Apr 12, 2023, 01:34 PM IST
  • ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ
  • ಸವದಿ ಕೈ ತಪ್ಪಿದ ಅಥಣಿ ಬಿಜೆಪಿ ಟಿಕೆಟ್
  • ಬಿಜೆಪಿ ತೊರೆಯಲಿದ್ದಾರಾ ಲಕ್ಷ್ಮಣ ಸವದಿ!?
Karnataka Election 2023: ಕೈ ತಪ್ಪಿದ ಟಿಕೆಟ್, ಬಿಜೆಪಿ ತೊರೆಯಲಿದ್ದಾರಾ ಲಕ್ಷ್ಮಣ ಸವದಿ!? title=
Laxman Savadi

ಬೆಳಗಾವಿ: ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ತಮ್ಮ ಎಂಎಲ್‌ಸಿ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ದಟ್ಟವಾಗಿವೆ. ಅಥಣಿ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷದಿಂದ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಮಂಗಳವಾರ ಸಂಜೆ ಪ್ರಕಟವಾದ ಪಟ್ಟಿಯಲ್ಲಿ ಹಾಲಿ ಶಾಸಕ ಮಹೇಶ ಕುಮಠಳ್ಳಿ ಅವರನ್ನು ಅಥಣಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಯನ್ನಾಗಿ ಘೋಷಿಸಿದ್ದಾರೆ. 

ಅಥಣಿಯ ನಿವಾಸದಲ್ಲಿ ಮಾತನಾಡಿದ ಸವದಿ, ಮಂಗಳವಾರ ಸಂಜೆಯಿಂದಲೇ ಹಲವು ರಾಜಕೀಯ ಪಕ್ಷಗಳ ಮುಖಂಡರು ನನ್ನನ್ನು ಸಂಪರ್ಕಿಸುತ್ತಿದ್ದಾರೆ. ಆದರೆ, ನನ್ನ ಎಲ್ಲ ಅನುಯಾಯಿಗಳ ಅಭಿಪ್ರಾಯ ಪಡೆದು ಗುರುವಾರ ಸಂಜೆ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ : ರಾಜಕಾರಣ ಫುಟ್ಬಾಲ್ ಆಟವಲ್ಲ, ಅದೊಂದು ಚದುರಂಗದಾಟ- ಡಿ.ಕೆ. ಶಿವಕುಮಾರ್

ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರಿಗೆ ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಒಂದು ದಿನದ ನಂತರ, ಬಿಜೆಪಿ ಪಕ್ಷವನ್ನು ತೊರೆಯುವ ನಿರ್ಧಾರ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಸವದಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. ನಾಳೆ ಸಂಜೆ ಸವದಿ ತಮ್ಮ ಮುಂದಿನ ನಡೆ ಏನೆಂದು ಸ್ಪಷ್ಟಪಡಿಸಲಿದ್ದಾರಂತೆ. 

ಸವದಿ ಅಥಣಿಯಿಂದ ಮೂರು ಬಾರಿ ಶಾಸಕರಾಗಿದ್ದಾರೆ. ಆದರೆ 2018ರ ಚುನಾವಣೆಯಲ್ಲಿ ಆಗಿನ ಕಾಂಗ್ರೆಸ್ ಅಭ್ಯರ್ಥಿ ಮಹೇಶ ಕುಮಠಳ್ಳಿ ಎದುರು ಸೋತಿದ್ದರು. ಕಾಂಗ್ರೆಸ್‌ನಿಂದ ಇತರ ಅನೇಕರೊಂದಿಗೆ, ಕುಮಠಳ್ಳಿ ನಂತರ ಬಿಜೆಪಿಗೆ ಹಾರಿದರು. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಉರುಳಿಸಿ 2019 ರಲ್ಲಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರವನ್ನು ರಚಿಸಲು ಪಕ್ಷಕ್ಕೆ ಸಹಾಯ ಮಾಡಿದರು.

ಸವದಿ ಅವರ ಕಟ್ಟಾ ಪ್ರತಿಸ್ಪರ್ಧಿ ಹಾಗೂ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರ ನಿಕಟವರ್ತಿಯೂ ಆಗಿರುವ ಕುಮಠಳ್ಳಿ ಅವರಿಗೆ ಪಕ್ಷ ಈಗ ಅಥಣಿ ಟಿಕೆಟ್ ನೀಡಿದೆ. ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಪ್ರಕಟಿಸಿದೆ. ಪಟ್ಟಿಯಲ್ಲಿ 52 ಹೊಸ ಮುಖಗಳಿದ್ದು, ಕೇಸರಿ ಪಕ್ಷವು ಕೆಲವು ಪ್ರಮುಖ ಹೆಸರುಗಳನ್ನು ಕೈಬಿಟ್ಟು ಅವರನ್ನು ಮತ್ತು ಅವರ ಬೆಂಬಲಿಗರನ್ನು ನಿರಾಶೆಗೊಳಿಸಿದೆ.

ಇದನ್ನೂ ಓದಿ : ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಗೆ ಸೇರುತ್ತಿದ್ದರು ಎಂಬ ವಿಷಯ ಅಪ್ರಸ್ತುತ: ಸಿಎಂ

ಸ್ಥಳೀಯ ಕಾಂಗ್ರೆಸ್ ನಾಯಕರು ಸವದಿ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ವರದಿಯಾಗಿದೆ, ಅವರು ಮತ್ತೆ ಕಾಂಗ್ರೆಸ್‌ ಸೇರ್ಪಡೆಯಾಗಬಹುದು ಎಂಬ ಊಹಾಪೋಹಗಳಿವೆ. ಸವದಿ ಅವರು ಕಾಂಗ್ರೆಸ್ ಸೇರುವ ಮುನ್ಸೂಚನೆ ಸಿಕ್ಕಿದೆ ಎನ್ನಲಾಗುತ್ತಿದೆ. ಇದರ ಸುಳಿವಿನಂತೆ ಕಾಂಗ್ರೆಸ್ ಮುಖಂಡ ಹಾಗೂ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆ ಇಂದು ಬೆಳಗ್ಗೆ ಸವದಿ ಅವರ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದರು. ಇದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News