Karnataka assembly Election 2023: ಕಿತ್ತೂರು ಕರ್ನಾಟಕ ಭಾಗದಲ್ಲಿ ಸಹೋದರ ರಾಹುಲ್ ಗಾಂಧಿ ಪ್ರಚಾರ ಮಾಡುತ್ತಿರುವ ಬೆನ್ನಲ್ಲೇ ಈಗ ರಾಜ್ಯ ಚುನಾವಣಾ ಅಖಾಡಕ್ಕೆ ಪ್ರಿಯಾಂಕಾ ಗಾಂಧಿ ಎಂಟ್ರಿ ಕೊಡುತ್ತಿದ್ದು ಇಂದಿನಿಂದ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ.


COMMERCIAL BREAK
SCROLL TO CONTINUE READING

ಚಾಮರಾಜನಗರ ಜಿಲ್ಲೆಯ ಹನೂರಿಗೆ ಮಧ್ಯಾಹ್ನ 2.30 ರ ಸುಮಾರಿಗೆ ಬರಲಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಗಿರಿಜನ ಮಹಿಳೆಯರೊಂದಿಗೆ ಸಂವಾದ ನಡೆಸಲಿದ್ದಾರೆ‌‌. ಗಿರಿಜನ ಮಹಿಳೆಯರ ಅಭಿವೃದ್ಧಿಗೆ ಕಾಂಗ್ರೆಸ್ ನೀತಿ, ಕಾರ್ಯಕ್ರಮಗಳ ಬಗ್ಗೆ ಪ್ರಿಯಾಂಕಾ ತಿಳಿಸಲಿದ್ದಾರೆ.


ಇದನ್ನೂ ಓದಿ- ಗರ್ಭಿಣಿ ಹಾಗೂ ಹಾಲುಣಿಸುವ ತಾಯಂದಿರಿಗೆ ನೇರ ಮತದಾನಕ್ಕೆ ಅವಕಾಶ..!


ಇನ್ನು, ಸಂವಾದದ ಬಳಿಕ ಜಿಲ್ಲೆಯ ನಾಲ್ಕು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಿಯಾಂಕಾ ಗಾಂಧಿ ಚುನಾವಣಾ ಭಾಷಣ ಮಾಡಲಿದ್ದು ಈಗಾಗಲೇ ಹನೂರಿನಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.


ಇದನ್ನೂ ಓದಿ- Karnataka Election 2023: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮೇಲೆ ಜನರಿಗೆ ವಿಶ್ವಾಸವಿಲ್ಲ - ಸಿಎಂ ಬೊಮ್ಮಾಯಿ


ಸೋಮವಾರವಷ್ಟೇ ಗುಂಡ್ಲುಪೇಟೆಯಲ್ಲಿ ಅಮಿತ್ ಷಾ ರೋಡ್ ಶೋ ಮಾಡಿ ಕಮಲಪಡೆಗೆ ರಣೋತ್ಸಾಹ ತುಂಬಿದ್ದರು. ಈಗ ಕೈ ನಾಯಕಿ ಎಂಟ್ರಿ ಕೊಡುತ್ತಿದ್ದು ಕೈ ಪಡೆಗೆ ಶಕ್ತಿ ತುಂಬಲಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.