ಚಾಮರಾಜನಗರ: ಬಹಿರಂಗ ಪ್ರಚಾರದ ಕೊನೆದಿನವಾದ ಇಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಕ್ಷೇತ್ರದಲ್ಲಿ ಕೈ ನಾಯಕರಾದ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ಭರ್ಜರಿ ಪ್ರಚಾರ ನಡೆಸಿದರು. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಬಹಿರಂಗ ಪ್ರಚಾರಕ್ಕೆ ತೆರೆ: ಕೊನೆ ದಿನ ಸೋಮಣ್ಣ, ಸಿದ್ದು, ವಾಟಾಳ್ ಅಬ್ಬರ!!


ಇನ್ನು, ಸತೀಶ್ ಜಾರಕಿಹೊಳಿ ತಮ್ಮ ಭಾಷಣದಲ್ಲಿ ಚಿತ್ರನಟ ಸುದೀಪ್ ವಿರುದ್ಧ ಅಸಮಾಧಾನ ಹೊರಹಾಕಿ, ಹಣ ಕೊಟ್ಟು ಅವರನ್ನು ನೋಡುತ್ತಿದ್ದೆವು, ಈಗ ಪುಕ್ಕಟ್ಟೆಯಾಗಿ ನೋಡುತ್ತಿದ್ದೇವೆ, ಅಳಲು-ನಗಲು ದುಡ್ಡು ತೆಗೆದುಕೊಳ್ಳುವವರು ಅವರು, ಜನ ಸೇವೆ ಮಾಡುವವರಲ್ಲ‌, ಅವರು 3 ತಾಸಿನ ನಾಯಕರು ಎಂದು ಟೀಕಿಸಿದರು. 


ಇದನ್ನೂ ಓದಿ:  ಬಿಜೆಪಿ ಒಬ್ಬನೇ ವ್ಯಕ್ತಿಯ ಕೈಯಲ್ಲಿದೆ, ಗುಲಾಮಿ ಸಂಸ್ಕೃತಿಗೆ ಒಗ್ಗಿಕೊಳ್ಳೋರು ಮಾತ್ರ ಅಲ್ಲಿರಲು ಸಾಧ್ಯ: ಜಗದೀಶ್ ಶೆಟ್ಟರ್


ನಿರಂತರವಾಗಿ ಜೊತೆಗಿರುವ ನಾಯಕರು ನಾವು, ಮಳೆ-ಬಿಸಿಲಲ್ಲಿ ನಿಮ್ಮ ಸೇವೆ ಮಾಡುವವರು ನಾವು, ಅವರು ಬಂದರು ಎಂಬುದು ಪರಿಹಾರ ಅಲ್ಲ, ಗಣೇಶ್ ಪ್ರಸಾದ್ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು. ಇತ್ತೀಚಿಗಷ್ಟೇ ನಟ ಸುದೀಪ್ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿ ಧೂಳೆಬ್ಬಿಸಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.