ಮೈಸೂರು: ಇದು ಸಿದ್ದರಾಮಯ್ಯನವರ ಕೊನೆಯ ಚುನಾವಣೆ, ಗೌರವಯುತವಾಗಿ ಚುನಾವಣಾ ರಾಜಕೀಯದಿಂದ ನಿವೃತ್ತರಾಗಲು ಅವರಿಗೆ ಅವಕಾಶ ಮಾಡಿಕೊಡಿ ಎಂದು ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಮಂಗಳವಾರ ರಾತ್ರಿ ವರುಣಾ ಕ್ಷೇತ್ರದ ರ್ಯಾಲಿ ವೇಳೆ ಭಾಷಣ ಮಾಡಿದ ಯತೀಂದ್ರ ಸಿದ್ದರಾಮಯ್ಯ, ‘ನಿಮ್ಮ ಕೈ ಮುಗಿದು ಬೇಡಿಕೊಳ್ಳುತ್ತೇನೆ, ಇದೊಂದು ಅವಕಾಶ ಮಾಡಿ ಎಂದು ಭಾವನಾತ್ಮಕವಾಗಿ ಮನವಿ ಮಾಡಿಕೊಂಡರು.


ಇದನ್ನೂ ಓದಿ: Karnataka Assembly Election: ಬಿಜೆಪಿಯವರನ ನೋಡಿದ್ರೆ ಯಾರು ವೋಟ್ ಹಾಕಲ್ಲ ಅದ್ಕೆ ಪದೇ ಪದೇ ಮೋದಿ & ಅಮಿತ್ ಶಾ ಅವ್ರನ್ನ ಕರೆಸುತ್ತಿದ್ದಾರೆ: ಸಿದ್ದರಾಮಯ್ಯ


ಸಿದ್ದರಾಮಯ್ಯರ ಕೊನೆ ಚುನಾವಣೆ ಎಂದು ಒತ್ತಿ ಒತ್ತಿ ಹೇಳಿದ ಡಾ.ಯತೀಂದ್ರ ಸಿದ್ದರಾಮಯ್ಯ, ‘ಬಡವರು, ರೈತರು, ಹಿಂದುಳಿದವರು, ದಲಿತರು ಮತ್ತು ಅಲ್ಪಸಂಖ್ಯಾತರಿಗಾಗಿ ಇಡೀ ಜೀವನ ಹೋರಾಟ ಮಾಡಿದ್ದಾರೆ. ಪಾಪ ಸಿದ್ದರಾಮಯ್ಯ ಅವರ ಕೊನೆ ಚುನಾವಣೆ ಇದು. ಅವರ ‘ಕೈ’ ಹಿಡಿಯಬೇಕು’ ಎಂದು ಹೇಳಿದರು.


ದಲಿತ ಮತ್ತು ಬಡವರ ವಿರೋಧಿ ಬಿಜೆಪಿಯನ್ನು ಕಿತ್ತು ಬಿಸಾಕಿ. ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ. ಪೆಟ್ರೋಲ್-ಡೀಸೆಲ್ ಮತ್ತು ಸಿಲಿಂಡರ್ ಬೆಲೆ ಜಾಸ್ತಿಯಾಗಿದೆ. ಬಡವರು ಬದುಕಲು ಕಷ್ಟವಾಗಿದೆ, ಬಿಜೆಪಿ ಬಡವರ ಜೀವನ ಕಷ್ಟ ಮಾಡಿದ್ದಾರೆ. ಬಿಜೆಪಿ ಬಡವರಿಗೆ ಸರ್ಕಾರದ ಹಣ ಖರ್ಚು ಮಾಡಲ್ಲ. ಉದ್ಯಮಿ ಮತ್ತು ಶ್ರೀಮಂತರಿಗೆ ಸರ್ಕಾರದ ಹಣ ಖರ್ಚು ಮಾಡುತ್ತದೆ ಎಂದು ವಾಗ್ದಾಳಿ ನಡೆಸಿದರು.


ಇದನ್ನೂ ಓದಿ: ಮನೆಯಿಂದ ಮತದಾನ ಮಾಡಿದ ಶತಾಯುಷಿ: ಫೋನ್ ಕಾಲ್ ಮೂಲಕ ಅಭಿನಂದನೆ ಸಲ್ಲಿಸಿದ ಮುಖ್ಯ ಚುನಾವಣಾ ಆಯುಕ್ತರು


ಅದಕ್ಕೆ ಕಾಂಗ್ರೆಸ್ ನಾವು ಬಡವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ. ಹಳ್ಳಿಗಳಲ್ಲಿ ಕರೆಂಟ್ ಬಿಲ್ ಕಟ್ಟುವ ಆಗಿಲ್ಲವೆಂದು ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.