ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶನಿವಾರ ಮೊದಲ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಸಚಿವರು, ಡಿಸಿಎಂ ಜೊತೆಗೆ ನಾನು ಅಧಿಕಾರ ಸ್ವೀಕಾರ ಮಾಡಿದ್ದೇನೆ. ಕಾಂಗ್ರೆಸ್ ಬೆಂಬಲಿಸಿದ ನಾಡಿನ ಜನತೆಗೆ ಮತ್ತು ಮತದಾರರಿಗೆ ಧನ್ಯವಾದಗಳು. ರಾಷ್ಟ್ರೀಯ ನಾಯಕರು, ಇತರೆ ರಾಜ್ಯಗಳ ಬಿಜೆಪಿಯೇತರ ನಾಯಕರು ಶುಭಾಶಯ ಕೊರಿದ್ದಾರೆ. ಪ್ರಣಾಳಿಕೆ ಮೂಲಕ ಹಲವಾರು ಭರವಸೆ ನೀಡಿದ್ದೇವೆ. 6 ಗ್ಯಾರಂಟಿಗಳನ್ನು ವಾಗ್ದಾನದ ರೂಪದಲ್ಲಿ ನೀಡಿದ್ದೆವು. ಎಲ್ಲಾ ಗ್ಯಾರಂಟಿಗಳಿಗೆ ಅನುಮೋದನೆ ನೀಡಿ ಆದೇಶ ಹೊರಡಿಸಲು ಹೇಳಿದ್ದೇವೆ ಎಂದು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ನಮ್ಮದು ನುಡಿದಂತೆ ನಡೆಯುವ ಸರ್ಕಾರ: ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. 2013-18ರಲ್ಲಿ ಕೊಟ್ಟ ಮಾತು ಈಡೇರಿಸಿದ್ದೇವೆ. ಕೊಟ್ಟ ಭರವಸೆಗಳ ಜೊತೆಗೆ 30 ಭರವಸೆಗಳನ್ನು ಹೆಚ್ಚುವರಿಯಾಗಿ ಈಡೇರಿಸಿದ್ದೆವು. ಸರ್ಕಾರ ರಚನೆ ಬಳಿಕ ಮೊದಲ ಸಚಿವ ಸಂಪುಟ ಸಭೆ ನಡೆದಿದೆ. ಪ್ರಮುಖವಾಗಿ ನಮ್ಮ ಪ್ರಣಾಳಿಕೆಯ ಮೂಲಕ ಅನೇಕ ಭರವಸೆ ನೀಡಿದ್ದೇವೆ. ಎಲ್ಲಾ ಭರವಸೆಗಳನ್ನು ಒಂದೇ ವರ್ಷದಲ್ಲಿ ಈಡೇರಿಸಲು ಸಾಧ್ಯವಿಲ್ಲ. 5 ಗ್ಯಾರಂಟಿಗಳನ್ನು ಮಾತ್ರ ಮೊದಲ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯುವುದಾಗಿ ಹೇಳಿದ್ದೇವು. ಇದನ್ನು ಅನೇಕ ಬಾರಿ ಪ್ರಸ್ತಾಪ ಮಾಡಿದ್ದೇವೆ. 2013ರ ಸರ್ಕಾರದಲ್ಲಿ 165ರ ಪೈಕಿ 155 ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿದರು.


ಇದನ್ನೂ ಓದಿ: "ನಾವು ಸುಳ್ಳು ಆಶ್ವಾಸನೆ ನೀಡುವುದಿಲ್ಲ. ಕೊಟ್ಟ ಮಾತನ್ನು ನಾವು ಉಳಿಸಿಕೊಳ್ಳುತ್ತೇವೆ"


GST ತೆರಿಗೆ ಬಿಟ್ಟು ಉಳಿದ ತೆರಿಗೆ ಹಾಕಬಹುದು: ರಾಜ್ಯದ ಜನರಿಗೆ ನಮ್ಮ ಮೇಲೆ ವಿಶ್ವಾಸವಿದೆ. ಆದರೆ ವಿರೋಧ ಪಕ್ಷದವರು ತಪ್ಪು ದಾರಿಗೆ ತರುವ ಪ್ರಯತ್ನ ಮಾಡುತ್ತಾರೆ. ದೇಶದ ಪ್ರಧಾನ ಮಂತ್ರಿ ಅವರೇ ‘ಮನ್ ಕೀ ಭಾತ್’ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಇದು ವಾಸ್ತವದಲ್ಲಿ ಆಗದ ವಿಷಯವೆಂದು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಹೇಳಿದ್ದರು. ಈ ಎಲ್ಲಾ ಕಾರ್ಯಕ್ರಮಕ್ಕೆ 50 ಸಾವಿರ ಕೋಟಿ ರೂ. ಆಗಬಹುದು. ವರ್ಷದಿಂದ ವರ್ಷಕ್ಕೆ ಶೇ.10ರಷ್ಟು ಬಜೆಟ್ ಗಾತ್ರ ಹೆಚ್ಚಾಗುತ್ತದೆ. ಪ್ರತಿವರ್ಷ ಶೇ.10ರಷ್ಟು ಬಜೆಟ್ ಗಾತ್ರ ಹೆಚ್ಚಾಗುತ್ತದೆ. ತೆರಿಗೆ ವಸೂಲಾತಿ ಮಾಡಿದರೆ ಹೆಚ್ಚಳಕ್ಕೆ ಅವಕಾಶವಿದೆ. ಜಿಎಸ್‍ಟಿ ತೆರಿಗೆ ಬಿಟ್ಟು ಉಳಿದ ತೆರಿಗೆ ಹಾಕಬಹುದು. 1 ಲಕ್ಷ ಕೋಟಿ ರೂ. ಬರಬೇಕಿತ್ತು. ಸಹಾಯಧನದ ಸೇರಿ ೫೦ ಸಾವಿರ ಕೋಟಿ ರೂ.ನೂ ಬರಲಿಲ್ಲ. 4 ಲಕ್ಷ ಕೋಟಿ ರೂ. ತೆರಿಗೆಯನ್ನು ಕರ್ನಾಟಕದಿಂದ ಕೇಂದ್ರ ವಿಧಿಸಲಿದೆ. 5,64,000 ಕೋಟಿ ರೂ. ಸಾಲ ಇದೆ. ಬಿಜೆಪಿಯವರು ಬಂದ ಮೇಲೆ. 3.22 ಲಕ್ಷ ಕೋಟಿ ರೂ. ಆಗಿದೆ. 78 ಸಾವಿರ ಕೋಟಿ ರೂ. ಸಾಲ ವರ್ಷ ಪ್ರಸ್ತಾವಿತ ಸಾಲವಾಗಿದೆ. ನನ್ನ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ 5 ವರ್ಷದಲ್ಲಿ 1.16 ಲಕ್ಷ ಕೋಟಿ ರೂ. ಸಾಲ ಮಾಡಿದ್ದೆ ಎಂದು ಹೇಳಿದ್ದಾರೆ.


ಜುಲೈನಲ್ಲಿ ಹೊಸ ಬಜೆಟ್: ಜುಲೈನಲ್ಲಿ 3.15 ಲಕ್ಷ ಕೋಟಿ ರೂ. ಮೊತ್ತದ ಹೊಸ ಬಜೆಟ್ ಮಂಡಿಸುತ್ತೇನೆ. 50 ಸಾವಿರ ಕೋಟಿ ರೂ. ಆದಾಯ ಸಂಗ್ರಹ ಮಾಡುತ್ತೇವೆ. 5 ಗ್ಯಾರಂಟಿಗಳ ಪೈಕಿ ಎಲ್ಲಾ ಮನೆಗಳಿಗೆ ಗೃಹ ಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ. ಇದಕ್ಕೆ 1 ತಿಂಗಳಿಗೆ ಸುಮಾರು 1,200 ಕೋಟಿ ರೂ. ಆಗಬಹುದು. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ  2,000 ರೂ. ನೀಡಲಾಗುತ್ತದೆ. ಅನ್ನಭಾಗ್ಯ ಯೋಜನೆಯ ಖರ್ಚಿನ ಬಗ್ಗೆ ಸಮಾಲೋಚನೆ ನಡೆಸಬೇಕು, ಹೀಗಾಗಿ ಮುಂದಿನ ಕ್ಯಾಬಿನೆಟ್‍ನಲ್ಲಿ ಈ ಬಗ್ಗೆ ಹೇಳುತ್ತೇವೆ. ನಿರುದ್ಯೋಗಿ ಪದವೀಧರರಿಗೆ 2 ವರ್ಷದವರೆಗೆ ಉದ್ಯೋಗ ಭತ್ಯೆ ಮತ್ತು ಸರ್ಕಾರಿ ಬಸ್‌ನಲ್ಲಿ ಓಡಾಡುವ ಮಹಿಳೆಯರಿಗೆ ಉಚಿತ ಪಾಸ್ ನೀಡಲಾಗುತ್ತದೆ. ಎಲ್ಲಾ ಗ್ಯಾರಂಟಿಗಳಿಗೆ ತಾಂತ್ರಿಕ ಅನುಮೋದನೆ ಅಷ್ಟೇ. ತಾತ್ವಿಕವಾಗಿ ಒಪ್ಪಿಗೆ ಕೊಟ್ಟಿದ್ದೇವೆ ಎಂದು ಹೇಳಿದರು.


ಇದನ್ನೂ ಓದಿ: ಎಲ್ಲಾ ಭರವಸೆಗಳನ್ನು ಒಂದೇ ವರ್ಷದಲ್ಲಿ ಈಡೇರಿಸಲು ಸಾಧ್ಯವಿಲ್ಲ..! ಆದರೆ..


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.