ಬೆಂಗಳೂರು: ಮೇ 10 ರ ಚುನಾವಣೆಗೆ ಕೇವಲ ಮೂರು ದಿನ ಬಾಕಿ ಇದೆ. ಇನ್ನೂ ಅಂತಿಮ ಫಲಿತಾಂಶ ಮೇ 13 ಕ್ಕೆ ಪ್ರಕಟಗೊಳ್ಳಲಿದೆ. ಅದಕ್ಕೂ ಮೊದಲು ಜೀ ಕನ್ನಡ ನ್ಯೂಸ್ MATRIZE ಸಂಸ್ಥೆಯ ಸಹಯೋಗದೊಂದಿಗೆ ಜನರ ನಾಡಿ ಮಿಡಿತವನ್ನು ಹಿಡಿಯುವ ಪ್ರಯತ್ನ ಮಾಡಿದೆ.ಇದಕ್ಕಾಗಿ ರಾಜ್ಯ ವಿಧಾನಸಭೆಯ ಎಲ್ಲಾ 224 ಕ್ಷೇತ್ರಗಳ ಬಗ್ಗೆ 3 ಲಕ್ಷದ 36 ಸಾವಿರ ಜನರ ಮೂಲಕ ಅಭಿಪ್ರಾಯವನ್ನು ಸಂಗ್ರಹಿಸಿದೆ.


COMMERCIAL BREAK
SCROLL TO CONTINUE READING

ಜೀ ಕನ್ನಡ ನ್ಯೂಸ್ ತನ್ನ ಮೂರನೆಯ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಹಲವು ವಿಷಯಗಳನ್ನು ಮಾನದಂಡವಾಗಿ ಪರಿಣಮಿಸಿದೆ.ಈಗಾಗಲೇ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ರಾಜ್ಯದಲ್ಲಿಯೇ ಟಿಕಾಣಿ ಹೂಡಿ ಭರ್ಜರಿ ಚುನಾವಣಾ ಪ್ರಚಾರವನ್ನು ನಡೆಸುತ್ತಿದ್ದಾರೆ.ಈ ಸಂದರ್ಭದಲ್ಲಿ ಈ ನಾಯಕರುಗಳ ಕೊನೆಯ ಹಂತದ ಪ್ರಚಾರ ಜನರ ಮೇಲೆ ಯಾವ ರೀತಿ ಪರಿಣಾಮ ಬೀರಬಲ್ಲದು ಎನ್ನುವುದನ್ನು ನಾವು ತಿಳಿಯಬೇಕಾಗಿದೆ.ಒಂದೆಡೆ ಬಿಜೆಪಿ ಪರವಾಗಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ರಂತಹ ನಾಯಕರು ತಮ್ಮ ಪ್ರಚಾರದ ಮೂಲಕ ಮತದಾರರನ್ನು ಬಿಜೆಪಿ ಪರವಾಗಿ ವಾಲುವಂತೆ ಮಾಡುತ್ತಾರೆಯೇ? ಅಥವಾ ಕಾಂಗ್ರೆಸ್ ಪಕ್ಷದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರ ಅಬ್ಬರದ ಪ್ರಚಾರವು ಕಾಂಗ್ರೆಸ್ ಪಕ್ಷಕ್ಕೆ ಎಷ್ಟರ ಮಟ್ಟಿಗೆ ವರವಾಗಲಿದೆ ? ಎನ್ನುವಂತಹ ಪ್ರಶ್ನೆಗಳಿಗೆ ಮೇ 10 ರಂದು ನಡೆಯುವ ಮತದಾನ ಮತ್ತು ಮೇ 13 ರಂದು ಪ್ರಕಟವಾಗುವ ಫಲಿತಾಂಶಕ್ಕೂ ಮೊದಲು ಜನಾಭಿಪ್ರಾಯದ ಮೂಲಕ ಉತ್ತರ ಕಂಡುಕೊಳ್ಳುವ ಪ್ರಯತ್ನವನ್ನು ಜೀ ಕನ್ನಡ ನ್ಯೂಸ್ ಮಾಡಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.