Karnataka Assembly Election 2023: ವಿ.ಸೋಮಣ್ಣ ಪತ್ನಿ ಶೈಲಜಾ ಸೋಮಣ್ಣ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಸುತ್ತುತ್ತಿದ್ದು, ಮಹಿಳಾ ಸಂಘಗಳು, ಮುಖಂಡರ ಮನೆಗೆ ಭೇಟಿ ಕೊಟ್ಟು ಟ್ರಬಲ್ ಶೂಟರ್ ಆಗಿ ಕೆಲಸ ಮಾಡುತ್ತಿದ್ದಾರೆ.
ಮಹತ್ವಾಕಾಂಕ್ಷೆಯ ಪಂಚರತ್ನ ಯೋಜನೆಗಳ ಜಾರಿ, ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳ ಕ್ಷಿಪ್ರಗತಿಯ ಅನುಷ್ಠಾನ ಸೇರಿದಂತೆ ಹಲವಾರು ಪ್ರಮುಖ ಘೋಷಣೆಗಳನ್ನು ಮಾಡಿರುವ ಜೆಡಿಎಸ್ ಪಕ್ಷವು, ಜನತೆಗೆ ಸಾಮಾಜಿಕ ಭದ್ರತೆ ನೀಡುವ ಹಿನ್ನೆಲೆಯಲ್ಲಿ ಅನೇಕ ಜನಾನುರಾಗಿ ಕಾರ್ಯಕ್ರಮಗಳನ್ನು ರೂಪಿಸಿದೆ.
Karnataka assembly Election: ಜೆಡಿಎಸ್ ಭದ್ರಕೋಟೆ ಎಂದು ಬಿಂಬಿತವಾಗಿರುವ ಜಿಲ್ಲೆಯಲ್ಲಿ ಹಿಡಿತ ಕಾಯ್ದುಕೊಳ್ಳಲು ವರಿಷ್ಠರು ರಾಜಕೀಯ ತಂತ್ರ ಪ್ರಯೋಗಿಸುತ್ತಿದ್ದು, ಅರಸೀಕೆರೆ, ಅರಕಲಗೂಡು ಕ್ಷೇತ್ರಕ್ಕೆ ಬೇರೆ ಪಕ್ಷದ ಪ್ರಬಲ ಅಭ್ಯರ್ಥಿಗಳನ್ನು ಪಕ್ಷಕ್ಕೆ ಕರೆ ತಂದು ಟಿಕೆಟ್ ನೀಡಿದೆ. ಉಳಿದ ಕ್ಷೇತ್ರದಲ್ಲೂ ಪ್ರಚಾರ ಕಾರ್ಯ ಬಿರುಸುಗೊಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಐದನೇ ಗ್ಯಾರಂಟಿ ಯೋಜನೆ ಘೋಷಣೆ ಮಾಡಲಾಗಿದೆ. ಮಂಗಳೂರಿನಲ್ಲಿ ಇಂದು 5ನೇ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ ರಾಹುಲ್ ಗಾಂಧಿ ಸಾರ್ವಜನಿಕ ಬಸ್ಗಳಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆ ನೀಡಿದರು
Karnataka assembly Election 2023: ಕುಂದಗೋಳ ಪಟ್ಟಣದಲ್ಲಿ ಹೆಲಿಕ್ಯಾಪ್ಟರ್ ನಲ್ಲಿ ಬಂದಿಳಿದು ರಸ್ತೆ ಮೂಲಕ ಸಂಶಿ ತಲುಪಿ ಬಳಿಕ ಬಸ್ ನಿಲ್ದಾಣದ ಮೂಲಕ ಮೆರವಣಿಗೆಯಲ್ಲಿ ಸಾಗಿದ ಸುದೀಪ್ ನಂತರ ಬಹಿರಂಗ ಸಭೆಯಲ್ಲಿ ಪಾಲ್ಗೊಂಡರು. ಅಭಿಮಾನಿಗಳ ಉತ್ಸಾಸ ಕಂಡು ಸಂತಸಗೊಂಡ ಸುದೀಪ್, ಆಕಾಶದತ್ತ ಕೇಸರಿ ಬಲೂನ್ ಹಾರಿಸಿ ವಿಜಯದ ಸಂಕೇತ ತೋರಿಸಿದರು.
ದ್ರೋಹಿಗಳಿಗೆ ಮೋದಿ ಸಿಂಹ ಸ್ವಪ್ನ ಆಗಿದ್ದಾರೆ. ಹೀಗೆ ಮಾತಾಡಿಯೇ ಕಾಂಗ್ರೆಸ್ ಈ ಮಟ್ಟಕ್ಕೆ ಬಂದಿದೆ. ಪ್ರಧಾನಿ ಬಗ್ಗೆ ಅವರ ಮಾತುಗಳು ಕಾಂಗ್ರೆಸ್ ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಇತ್ತೀಚೆಗೆ ದಲಿತರ ವೋಟ್ ಬ್ಯಾಂಕಿಗೋಸ್ಕರ ಅಂಬೇಡ್ಕರ್ ಅವರನ್ನು ನಾಟಕದ ಪ್ರೀತಿಯನ್ನು ಬಿಜೆಪಿ ತೋರುಸುತ್ತಿದೆ. ದಲಿತರೊಳಗಡೆ ಬಿಜೆಪಿಯವರು ಬೆಂಕಿ ಹಚ್ಚುವ ಕೆಲಸ ಮಾಡ್ತ ಇದ್ದಾರೆ ಎಂದು ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಕುರಿತ ಹೇಳಿಕೆಗೆ ಕಮಲಪಾಳಯದ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ, ರಾಷ್ಟ್ರದ ಕ್ಷಮೇ ಕೇಳಬೇಕು ಎಂದು ಖರ್ಗೆ ಅವರಿಗೆ ಒತ್ತಾಯಿಸುತ್ತಿದ್ದಾರೆ. ಮೋದಿ ವಿಷ ಸರ್ಪ ಎಂಬ ಕಾಂಗ್ರೆಸ್ ಅಧ್ಯಕ್ಷನ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ವಿಷ ಸರ್ಪ ಅಂತ ನಾನು ಹೇಳಿಲ್ಲ. ಬಿಜೆಪಿ ಪಾರ್ಟಿ ಹಾವು ಇದ್ದಂಗೆ, ಸ್ವಲ್ಪ ನೆಕ್ಕಿ ನೋಡ್ತೆವಿ ಅಂದ್ರೆ ಅಲ್ಟಿಮೇಟ್ಲಿ ಡೆತ್ ಅಂತ ಹೇಳಿದ್ದೇನೆ. ನಾನು ಮೋದಿಯವರ ಬಗ್ಗೆ ಏನೂ ಹೇಳಿಲ್ಲ. ವೈಯಕ್ತಿಕವಾಗಿ ನಾವು ಯಾರ ಬಗ್ಗೆಯೂ ಹೇಳೋದಿಲ್ಲ ಎಂದು ತಮ್ಮ ಹೇಳಿಕೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪಷ್ಟತೆ ನೀಡಿದ್ದಾರೆ.
ಪಕ್ಷದ ಪದಾಧಿಕಾರಿಗಳಿಗೆ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತ ಗಟ್ಟೆಗಳ ವಿವರ ನೀಡುವಂತೆ ಕೋರಿ ಸಂಸದೆ ಶೋಭಾ ಕರಂದ್ಲಾಜೆ ಪತ್ರ ಬರೆದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ರಾಜ್ಯದಲ್ಲಿ ಚುನಾವಣಾ ನಡೆಸುತ್ತಿರುವುದು ಚುನಾವಣಾ ಆಯೋಗವೋ? ಭಾರತೀಯ ಜನತಾ ಪಕ್ಷವೋ? ಎಂದು ಅವರು ಪ್ರಶ್ನಿಸಿದ್ದಾರೆ.
Karnataka Assembly Election: ಸಮಾಜವಾದದ ತಾಯಿಬೇರಾಗಿರುವ ಜಿಲ್ಲೆಯಲ್ಲಿ ಸಾಮಾಜಿಕ ನ್ಯಾಯಕ್ಕೆ ನಾಂದಿ ಹಾಡಿದ ಸಮಾಜವಾದದ ಹರಿಕಾರ ಶಾಂತವೇರಿಗೋಪಾಲಗೌಡರು ಜನಿಸಿದ್ದು ಹೆಮ್ಮೆಯ ಸಂಗತಿ. ಸಾಹಿತ್ಯ,ಕಲೆ, ರಂಗಭೂಮಿ, ಸುಗಮ ಸಂಗೀತ, ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಇಲ್ಲಿನ ಪ್ರಕೃತಿ ಸೌಂದರ್ಯ ಸ್ಪೂರ್ತಿಯಾದರೆ, ಹೊರಾಟದ ಕಿಚ್ಚನ್ನು ಬೆಳೆಸಿದ ಇಲ್ಲಿನ ಮಣ್ಣು, ರಾಜಕೀಯವಾಗಿ ಹಲವರನ್ನು ಉತ್ತುಂಗಕ್ಕೇರಿಸಿದೆ.
ಇದೊಂದು ದೊಡ್ಡ ಪಿತೂರಿಯಾಗಿದ್ದು, ಚುನಾವಣಾ ಆಯೋಗ ರಾಜ್ಯ ಚುನಾವಣಾ ಪ್ರಕ್ರಿಯೆಯಲ್ಲಿ ಅಮಿತ್ ಶಾ ಭಾಗವಹಿಸದಂತೆ ನಿಷೇಧ ಹೇರಬೇಕು. ಈ ವಿಚಾರವಾಗಿ ಎಐಸಿಸಿ ಮೂಲಕ ಕೇಂದ್ರ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದು,ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು.
Karnataka Assembly Elections: ರಾಜ್ಯದೆಲ್ಲೆಡೆ ಎಲೆಕ್ಷನ್ ಅಬ್ಬರ ಜೋರಾಗಿದೆ. ಮೊದಲಿನಿಂದಲೂ ಕರಾವಳಿಯಲ್ಲಿ ಗೆದ್ದ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂಬ ಮಾತಿದೆ. ಕರಾವಳಿಯಲ್ಲಿ ಪ್ರಸ್ತುತ ಏಳು ಮಂದಿ ಬಿಜೆಪಿ ಶಾಸಕರಿದ್ದು, ಒಬ್ಬರು ಕಾಂಗ್ರೆಸ್ ಶಾಸಕರಿದ್ದಾರೆ.
CM Basavaraj Bommai on Congress: 150 ಸ್ಥಾನ ಯಾರಿಗೆ ಕೊಡಬೇಕು ಎಂದು ಜನ ತೀರ್ಮಾನ ಮಾಡುತ್ತಾರೆ. ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಮತ್ತು ಬೂತ್ ಮಟ್ಟದ ಗೆಲುವಿನ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾರ್ಯಕರ್ತರಿಗೆ ಸಂದೇಶ ನೀಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು
Karnataka Election 2023 : ಬಿಜೆಪಿ ಪ್ರಚಾರ ಸಮಯದಲ್ಲಿ ಕಾಂಗ್ರೆಸ್ ವಿರುದ್ದ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಅಮಿತ್ ಶಾ ಅವರ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿದೆ. ಅಮಿತ್ ಶಾ ಅವರ ಬಂಧನವಾಗಬೇಕು ಎಂದು ಆಗ್ರಹಿಸಿದ್ದಾರೆ.
ಮತದಾರರ ಜವಾಬ್ದಾರಿಯಾದ ಮತದಾನ ಪ್ರಜಾಪ್ರಭುತ್ವದ ಭದ್ರ ಅಡಿಪಾಯವಾಗಿದೆ. ಆದರೆ ಭಾರತ ಸರ್ಕಾರ ಮತದಾನವನ್ನು ಕಡ್ಡಾಯಗೊಳಿಸಿಲ್ಲದಿರುವುದರಿಂದ, ಅದು ಪ್ರತಿಯೊಬ್ಬ ಭಾರತೀಯ ನಾಗರಿಕನ ನೈತಿಕ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಭಾರತದಲ್ಲಿ ಮತದಾನ ಯಾಕೆ ಅಷ್ಟೊಂದು ಅಮೂಲ್ಯ?
ಬದಲಾವಣೆಯ ಮೂಲ
Rahul Gandhi : ಕರುನಾಡ ಕುರುಕ್ಷೇತ್ರಕ್ಕೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಕದನ ಕಲಿಗಳು ರಣರಂಗದಲ್ಲಿ ಯಶಸ್ಸುಗಳಿಸಲು ಅಬ್ಬರದ ಪ್ರಚಾರವನ್ನು ನಡೆಸುತ್ತಿದ್ದಾರೆ. ಚುನಾವಣಾ ಕಣ ರಂಗೆರುತ್ತಿದ್ದಂತೆ ಕೇಂದ್ರ ನಾಯಕರು ಗೆಲುವು ಸಾಧಿಸಲು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಗೆಲ್ಲುವ ಹುಮ್ಮಸ್ಸಿನಲ್ಲಿರುವ ಕಾಂಗ್ರೇಸ್ ತನ್ನ ಕೇಂದ್ರನಾಯಕರನ್ನು ರಾಜ್ಯಕ್ಕೆ ಕರೆರಲಿದೆ.
ಗೃಹಸಚಿವ ಅಮಿತ್ ಶಾ ಅವರೇ, ಇದು ಕರ್ನಾಟಕ, ಇಲ್ಲಿ ಹೊಡೆಯುವ, ಬಡಿಯುವ, ಮುರಿಯುವ, ಸುಡುವ ‘ಗುಜರಾತ್ ಮಾದರಿ’ ನಡೆಯುವುದಿಲ್ಲ. ಇಲ್ಲಿ ಏನಿದ್ದರೂ ಪ್ರೀತಿಸುವ, ಪೊರೆಯುವ ಮತ್ತು ಕಟ್ಟುವ ‘ಕರ್ನಾಟಕ ಮಾದರಿ’ಯೇ ನಡೆಯುವುದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.