Karnataka Election 2023: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈಗಾಗಲೇ ಮಹದಾಯಿ ಯೋಜನೆಗೆ ಅನುಮತಿ ನೀಡಿದ್ದು, ಡಿಪಿಆರ್ ಕೂಡ ಸಿದ್ದ ಆಗಿದೆ. ಚುನಾವಣೆಯ ನೀತಿ ಸಂಹಿತೆ ಮುಗಿದ ಕೂಡಲೇ ಯೋಜನೆ ಆರಂಭಿಸುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಈ ಚುನಾವಣೆಯಲ್ಲಿ ಬಿಜೆಪಿ ಕುಟುಂಬದ 36 ಜನರಿಗೆ ಟಿಕೆಟ್ ನೀಡಿದ್ದಾರೆ. ಆದರೂ ಕಾಂಗ್ರೆಸ್ ವಿರುದ್ಧ ಪರಿವಾರವಾದದ ಬಗ್ಗೆ ಮಾತನಾಡುತ್ತಾರೆ ಎಂದು ರಾಜ್ಯಸಭಾ ಸದಸ್ಯ ರಾಜೀವ್ ಶುಕ್ಲಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿಯವರು, ಅಮಿತ್ ಶಾ ಅವರು ಯಾಕೆ ಬರುತ್ತಿದ್ದಾರೆ ಅಂತ ಕಾಂಗ್ರೆಸ್ ನವರು ಕೇಳುತ್ತಾರೆ. ಆದರೆ, ರಾಹುಲ್, ಪ್ರಿಯಾಂಕಾ ಇಲ್ಲಿ ಬಂದಿದ್ದಾರೆ. ರಾಹುಲ್, ಪ್ರಿಯಾಂಕಾ ಬಂದಷ್ಟು ನಮಗೆ ಅನುಕೂಲ. ಅವರು ಹೋದಲ್ಲಿ ಕಾಂಗ್ರೆಸ್ ಸೋತಿದೆ. ಅವರು ಬಂದಷ್ಟು ನಮಗೆ ಲಾಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಹೇಳಿದರು.
Karnataka Assembly Election 2023: ಅಭಿವೃದ್ಧಿ ಕೆಲಸ ಮಾಡುವವನಿಗೆ ಯಾವುದೇ ಜಾತಿ, ಗ್ರಾಮ ಇಲ್ಲ. ವಿಶ್ವಗುರು ಬಸವಣ್ಣನವರ ವಿಚಾರಧಾರೆಗಳನ್ನು ಅಳವಡಿಸಿಕೊಂಡವನು ನಾನು. ಇದು ಮಾಜಿ ಸಿಎಂ ಕ್ಷೇತ್ರ, ಇಲ್ಲಿನ ಜನರ ಪ್ರೀತಿ ನೋಡಿ ಖುಷಿಯಾಗಿದೆ ಎಂದು ಸೋಮಣ್ಣ ಹೇಳಿದರು.
ನಾವು ಸತ್ಯದ ಪರವಾಗಿ ಹೋರಾಟ ಮಾಡುತ್ತಿದ್ದು, ಭಗವಂತನ ಆಶೀರ್ವಾದ ನಮ್ಮ ಮೇಲಿದೆ. ಇನ್ನು ಕರ್ನಾಟಕದ ಚುನಾವಣೆ ಕೂಡ ಸತ್ಯದ ಪರವಾದ ಹೋರಾಟವಾಗಿದೆ. ಇಂದು ಬೆಳಗ್ಗೆ ಮೈಸೂರಿನ ಮೈಲಾರಿ ಹೊಟೇಲ್ ಗೆ ಹೋಗಿದ್ದೆ. ಅಲ್ಲಿ ಕರ್ನಾಟಕದ ಸ್ವಾಭಿಮಾನ, ಪರಿಶ್ರಮದ ದರ್ಶನವಾಯಿತು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದರು.
H D Kumaraswamy: "ಸಿ" ಓಟರ್ ಕಾಂಗ್ರೆಸ್ ಪಕ್ಷ ಸಮೀಕ್ಷೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿಗಳು; ಅವರ ಸಮೀಕ್ಷೆ ನಿಜ ಆಗಲ್ಲ. 150 ಸ್ಥಾನ ಕಾಂಗ್ರೆಸ್ ಗೆ ಬರುತ್ತೆ, ರಕ್ತದಲ್ಲಿ ಬರೆದುಕೊಡ್ತೀನಿ ಎಂಬ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರ ನೇತೃತ್ವದಲ್ಲಿ ರಾಜ್ಯದ ರೈತ ಮೋರ್ಚದ ಉಪಾಧ್ಯಕ್ಷರಾದ ರಾಮರೆಡ್ಡಿ, SC ಘಟಕದ ಉಪಾಧ್ಯಕ್ಷರಾದ ವಿಜಯ್, ಜಿಲ್ಲೆಯ ಪ್ರಮುಖರು ಸೇರಿದಂತೆ ನೂರಾರು ಸಂಖ್ಯೆಯ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ತತ್ವ ಸಿದ್ದಾಂತಕ್ಕೆ ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಬೇಷರಾತ್ತಾಗಿ ಸೇರ್ಪಡೆಗೊಂಡಿದ್ದಾರೆ.
Praveen Nettaru Dream Home: ಪ್ರವೀಣ್ ನೆಟ್ಟಾರು ಕನಸು ನನಸು ಮಾಡುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಅವರ ಕುಟುಂಬಸ್ಥರ ಜೊತೆಗೆ ಈ ಹಿಂದೆ ಮಾತುಕತೆ ನಡೆಸಿದ್ದರು. ಬಳಿಕ ಮನೆ ನಿರ್ಮಾಣಕ್ಕೆ ಚಾಲನೆ ನೀಡಿದ್ದರು.
CM Basavaraj Bommai: ಕಾಂಗ್ರೆಸ್ ಅಧಿಕಾರಕ್ಕೆ ಬಂದ್ಮೇಲೆ 40 ಪರ್ಸೆಂಟ್ ಕಮಿಷನ್ ತನಿಖೆ ಕೈಗೊಳ್ಳಲಾಗುವುದು ಎಂಬ ಲಕ್ಷ್ಮಣ್ ಸವದಿ ಅವರ ಹೇಳಿಕೆಗೆ ಅವರು ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
Karnataka Assembly Election 2023: ಯಡಿಯೂರಪ್ಪರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರ ಬೈಗುಳ, ಟೀಕೆಯನ್ನು ಅಶೀವಾರ್ದ ಎಂದು ತೆಗೆದುಕೊಂಡಿದ್ದೇನೆ. ಟಿಕೆಟ್ ಕೊಡಿಸುವುದಾಗಿ ಹೇಳಿ ಯಡಿಯೂರಪ್ಪ ಈಗ ಅಸಹಾಯಕರಾಗಿದ್ದಾರೆ ಎಂದು ಶೆಟ್ಟರ್ ಹೇಳಿದ್ದಾರೆ.
Karnataka Assembly Election 2023: ಬಿಜೆಪಿ ಪ್ರಕಟಿಸಿರುವ ಪರಿಷ್ಕೃತ ಮೀಸಲಾತಿ ನೀತಿಯಲ್ಲಿ ಮುಸ್ಲಿಂಮರ ವಿರುದ್ಧದ ದ್ವೇಷದ ರಾಜಕೀಯ ದುರುದ್ದೇಶ ಇತ್ತೇ ಹೊರತು, ಪ್ರಾಮಾಣಿಕತೆ ಇರಲಿಲ್ಲವೆಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Karnataka Assembly Election: ಜಗದೀಶ್ ಶೆಟ್ಟರ್ ಪಕ್ಷಾಂತರದಿಂದ ಬಿಜೆಪಿ ವಿಚಲಿತವಾಗಿಲ್ಲ. ಆದರೆ, ಹುಬ್ಬಳ್ಳಿ ಹತ್ತಾರು ಪ್ರದೇಶಗಳ ಕೇಂದ್ರ ಸ್ಥಾನ. ಹೀಗಾಗಿ ಎಲ್ಲ ನಾಯಕರು ಇಲ್ಲಿ ಬರ್ತಿದ್ದಾರೆ ಹೊರತು ಶೆಟ್ಟರ್ ಕಾರಣಕ್ಕೆ ಅಲ್ಲ. ಬಿಜೆಪಿ ವೀಕ್ ಇದೆ ಅಂತ ಮೋದಿ ಸೆಂಟ್ರಲ್ ಕ್ಷೇತ್ರಕ್ಕೆ ಬರ್ತಿಲ್ಲ. ಬೇರೆ ಪ್ರದೇಶಕ್ಕೆ ಬಂದಂತೆ ಮೋದಿ ಇಲ್ಲಿಯೂ ಬರ್ತಾರೆ ಎಂದರು.
Karnataka Election Campaign: ಸ್ಯಾಂಡಲ್ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಏಪ್ರಿಲ್ 28ರಿಂದ ವಿವಿಧ ಪಕ್ಷಗಳ ತಮ್ಮ ಕೆಲವು ಸ್ನೇಹಿತರ ಪರ ಮತಬೇಟೆ ನಡೆಸಲಿದ್ದಾರೆ. ಪೊಗರು ಪೋರ ಧ್ರುವ ಸರ್ಜಾ ಏಪ್ರಿಲ್ 28ರಂದು ಚಿಕ್ಕಬಳ್ಳಾಪುರದ ಬಿಜೆಪಿ ಅಭ್ಯರ್ಥಿ ಸಚಿವ ಡಾ. ಕೆ. ಸುಧಾಕರ್ ಪರ ಪ್ರಚಾರ ನಡೆಸಲಿದ್ದಾರೆ.
Karnataka Assembly Election 2023: ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಸೋಲಿಸಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪಣತೊಟ್ಟಿದ್ದಾರೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿ ಸೆಡ್ಡುಹೊಡೆದ ಕ್ಷೇತ್ರಗಳಿಗೆ ರಾಜಾಹುಲಿ ಎಂಟ್ರಿ ಕೊಟ್ಟಿದ್ದಾರೆ.
Karnataka Assembly Election 2023: ಈ ಬಾರಿ 1 ಹಂತದಲ್ಲಿ ಎಲೆಕ್ಷನ್ ನಡೆಯುತ್ತಿರುವ ಹಿನ್ನೆಲೆ, ಮೇ 5ರಿಂದ ಮೇ 13ರವರೆಗೂ ಚುನಾವಣಾ ಕೆಲಸಕ್ಕೆ ಬಸ್ಸುಗಳ ಅವಶ್ಯತೆಯಿದೆ. ಚುನಾವಣಾ ಅಧಿಕಾರಿಗಳು KSRTC ಹಾಗೂ BMTC ಬಸ್ಸುಗಳನ್ನು ಬುಕಿಂಗ್ ಮಾಡಿದ್ದಾರೆ.
Karnataka Assembly Election 2023: ಕೆಲ ರಾಜಕೀಯ ಮುಖಂಡರ ಜೊತೆ ಕೈಜೊಡಿಸಿರುವ ಚಿಲುಮೆ ಸಂಸ್ಥೆ ಮತ್ತೆ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಹಿಂಬಾಗಿಲ ಮೂಲಕ ಎಂಟ್ರೀ ಕೋಡ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.