Karnataka Assembly Election 2023: ನಮ್ಮಲ್ಲಿ ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಯಾರಾಗಬೇಕೆಂದು ತೀರ್ಮಾನ ಮಾಡುವುದಿಲ್ಲ, ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Karnataka Assembly Election 2023: ಬಿಜೆಪಿಯ ಐಟಿ ಸೆಲ್ ಜಗತ್ತಿನ ಏಕೈಕ "ಫೇಕ್ ಫ್ಯಾಕ್ಟರಿ"! ಇನ್ನೆಲ್ಲಿಯದ್ದೋ ಫೋಟೋ ತಂದು ಸಿದ್ದರಾಮನಹುಂಡಿಯ ಹೆಸರಿಗೆ ಜೋಡಿಸುವ ಕಲೆ ಬಿಜೆಪಿಗೆ ಮಾತ್ರ ಸಾಧ್ಯವಾಗುವಂತದ್ದು! ಎಂದು ಕಾಂಗ್ರೆಸ್ ಟೀಕಿಸಿದೆ.
Karnataka Assembly Election 2023: ಗ್ರಾಮ ಪಂಚಾಯ್ತಿ ಚುನಾವಣೆಯಲ್ಲೂ ಸ್ಪರ್ದಿಸಲಾಗದ ವ್ಯಕ್ತಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು ಯೋಗ್ಯತೆ ಇಲ್ಲ. ತಾಕತ್ತಿದ್ದರೆ ಚುನಾವಣೆಗೆ ಸ್ಪರ್ಧಿಸಿ ಜನಬೆಂಬಲ ಪಡೆದು ಬರಲಿ ಎಂದು ಕಾಂಗ್ರೆಸ್ ಸವಾಲು ಹಾಕಿದೆ.
Man wipes rain water off modi cutouts : ಬಿಜೆಪಿ ನಾಯಕರು ತಮ್ಮ ಅಭ್ಯರ್ಥಿಗಳ ಪರ ರೋಡ್ಶೋ ನಡೆಸಿ ಪ್ರಚಾರ ಮಾಡುತ್ತಿದ್ದಾರೆ. ಹಳ್ಳಿಗಳಿಂದ ಹಿಡಿದು ನಗರದ ರಸ್ತೆಗಳಲ್ಲಿ ಮೋದಿ ಸೇರಿದಂತೆ ಅನೇಕ ಬಿಜೆಪಿ ನಾಯಕರ ಕಟೌಟ್ಗಳು ರಾರಾಜಿಸುತ್ತಿವೆ. ಮೊನ್ನೆ ಏಕಾಎಕಿ ಸುರಿದ ಮಳೆಯಿಂದಾಗಿ ನೆನೆದಿದ್ದ, ಪ್ರಧಾನಿ ನರೇಂದ್ರ ಮೋದಿಯವರ ಕಟೌಟ್ನ್ನು ವ್ಯಕ್ತಿಯೊಬ್ಬ ಒರೆಸಿದ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Karnataka Assembly Election 2023: ಮೇ 10ರಂದು ಯಾರ ಡ್ಯಾಂ ಲೇವಲ್ ಎಷ್ಟಿದೆ ಅಂತಾ ಗೊತ್ತಾಗುತ್ತೆ. ಪ್ರತಿದಿನ ಡ್ಯಾಂ ಲೇವಲ್ ಗೇಜ್ ಮಾಡ್ತಿರ್ತೇವೆ. ಅದೇ ರೀತಿ ಮೇ 10ರಂದು ಲಿಂಗಾಯತ ಮತಗಳು ಹರಿದುಬಂದು ಬಿಜೆಪಿ ತುಂಬಿ ತುಳಕುತ್ತದೆ ಎಂದು ಸಿಸಿ ಪಾಟೀಲ್ ಹೇಳಿದ್ದಾರೆ.
MP Kumaraswamy: ವಿವಿಧ ಕಾರಣಗಳಿಂದ ಸದಾ ಸುದ್ದಿಯಾಗುತ್ತಿದ್ದ ಎಂ.ಪಿ.ಕುಮಾರಸ್ವಾಮಿ ಇದೀಗ ಚುನಾವಣೆ ಸಂದರ್ಭದಲ್ಲಿ ತನ್ನ ಮೇಲೆ ಯಾವುದೇ ಮಾನಹಾನಿಕರ ಸುದ್ದಿ ಪ್ರಸಾರವಾಗದಂತೆ ಮಾಧ್ಯಮಗಳ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದಾರೆ
Karnataka Election Photos : ವಿಧಾನಸಭಾ ಚುನಾವಣ ಕಣ ರಂಗೇರುತ್ತಿದೆ. ಸ್ಪರ್ಧಿಗಳು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮುಂದಾಳತ್ವದಲ್ಲಿ ಚುನಾವಣೆ ನಡೆಯುತ್ತಿದೆ. ಇದರ ನಡುವೆ ಇಂದು ಕಾರ್ಯಕ್ರವೊಂದರಲ್ಲಿ ಇಬ್ಬರು ನಾಯಕರು ಕ್ಯಾಮರಾಗೆ ಪೋಸ್ ಕೊಟ್ಟಿದ್ದು, ಫೋಟೋಸ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
Karnataka Election 2023: ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಅಸಿಂಧು ಮಾಡಲು ಸಿಎಂ ಕಚೇರಿಯಿಂದ ಅಧಿಕಾರಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪದ ಬಗ್ಗೆ ಸುದ್ದಿಗಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿ ಮಾತನಾಡಿದರು.
Voting from home : ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಇದೇ ಮೊದಲ ಬಾರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಚುನಾವಣಾ ಆಯೋಗ ಒದಗಿಸಿದೆ. ಈ ಸೌಲಭ್ಯವನ್ನು ಯಾರು ಪಡೆಯಬಹುದು ಎಂಬ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.
ಶಿಡ್ಲಘಟ್ಟ ಸ್ವಾಭಿಮಾನಿ ಪರ್ವ ಶುರುವಾಗಿದೆ.. ಶಿಡ್ಲಘಟ್ಟ ನಗರ ಮತ್ತು ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಒಂದು ಸಾವಿರಕ್ಕೂ ಅಧಿಕ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ಬಿಜೆಪಿ ಪಕ್ಷ ತ್ಯಜಿಸಿ ಸ್ಥಳೀಯ ಜೆಡಿಎಸ್ ಅಭ್ಯರ್ಥಿ ಬಿ ಎನ್ ರವಿಕುಮಾರ್ ನೇತೃತ್ವದಲ್ಲಿ JDS ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಮಾಜಿ ಸಚಿವರು ಹಾಗೂ ಕಲಘಟಗಿ - ಅಳ್ನಾವರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂತೋಷ್ ಲಾಡ್ ಅವರು ಹುಲಗಿನಕೊಪ್ಪ, ಸಂಗಟಿಕೊಪ್ಪ ಹಾಗೂ ಜುಂಜನಬೈಲ್ನಲ್ಲಿ ಬಿರುಸಿನ ಪ್ರಚಾರ ಕೈಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಂತೋಷ್ ಲಾಡ್, ನನ್ನ ಅಧಿಕಾರಾವಧಿಯಲ್ಲಿ ಪ್ರತಿಯೊಂದು ತಾಂಡಾ ಹಾಗೂ ಗ್ರಾಮಗಳ ಅಭಿವೃದ್ಧಿಯಾಗಿದೆ. ಅಧಿಕಾರ ಇಲ್ಲದೇ ಇದ್ದಾಗಲೂ ಕ್ಷೇತ್ರದ ಜನರಿಗಾಗಿ ಹಲವಾರು ಸಾಮಾಜಿಕ ಸೇವಾ ಕಾರ್ಯ ಕೈಗೊಂಡಿದ್ದೆ ಅಂತಾ ಹೇಳಿದ್ದಾರೆ.
ನನ್ನ ನಾಮಪತ್ರ ಕ್ರಮಬದ್ಧವಾಗಿದೆ. ಯಾವುದೇ ತೊಂದರೆ ಇಲ್ಲ. ಎಲ್ಲವನ್ನೂ ಚುನಾವಣಾ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಇಲ್ಲಸಲ್ಲದವರ ಆರೋಪಕ್ಕೆ ಉತ್ತರ ಕೊಡಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕ್ರಾಂತಿಕಿರಣ್ ಹೇಳಿದ್ದಾರೆ
ಶಿವಮೊಗ್ಗ ನಗರ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕರಾದ ಪ್ರಸನ್ನ ಕುಮಾರ್ ಅವರನ್ನು ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ಜೆಡಿಎಸ್ ಪಕ್ಷಕ್ಕೆ ಸೇರಿಸಿಕೊಂಡ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಕಾಂಗ್ರೆಸ್ ಜನರಲ್ಲಿ ಆಶೀರ್ವಾದವನ್ನು ಕೇಳುತ್ತದೆ. ಬಿಜೆಪಿ ಜನತೆಗೆ "ಮೋದಿ ಆಶೀರ್ವಾದ"ದ ಬೆದರಿಕೆ ಹಾಕುತ್ತದೆ. ಇದು ಪ್ರಜೆಗಳೇ ಪ್ರಭುಗಳು ಎಂದು ನಂಬಿರುವ ಕಾಂಗ್ರೆಸ್ಸಿಗೂ ಪ್ರಜೆಗಳನ್ನು ಗುಲಾಮರು ಎಂದು ತಿಳಿದ ಬಿಜೆಪಿಗೂ ಇರುವ ವ್ಯತ್ಯಾಸ. ಬಿಜೆಪಿಯವರೇ ಹೇಳಿದಂತೆ ಬಿಜೆಪಿ "ಬ್ಲಾಕ್ಮೇಲ್ ಜನತಾ ಪಾರ್ಟಿ" ಆಗಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
Karnataka Election Photos : ಡಿ.ಕೆ ಶಿವಕುಮಾರ್ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಡಿಕೆಶಿ ನಾಮಪತ್ರವನ್ನು ರಾಜ್ಯ ಚುನಾವಣಾ ಪ್ರಾಧಿಕಾರ ಅಂಗೀಕಾರಮಾಡಿದೆ. ಇದರಿಂದ ಐಟಿ, ಇಡಿ ಸೇರಿದಂತೆ ಯಾವುದೇ ದಾಳಿ ಭಯ ಡಿಕೆಶಿಗೆ ಇಲ್ಲ. ನಿರ್ಭಯವಾಗಿ ನಿರ್ಭೀತಿಯಿಂದ ಚುನಾವಣಾ ಕಾರ್ಯಗಳಲ್ಲಿ ಭಾಗಿಯಾಗಬಹುದು.
Karnataka assembly Election: ಸಚಿವ ವಿ. ಸೋಮಣ್ಣ ಇಂದು ಮಾರ್ನಿಂಗ್ ವಾಕ್ ನಿಂದಲೇ ಚಾಮರಾಜನಗರದಲ್ಲಿ ಮತಬೇಟೆ ಆರಂಭಿಸಿದರು. ಚಾಮರಾಜನಗರದ ವಿವಿಧ ಬಡಾವಣೆಗಳು, ಟೀ ಅಂಗಡಿಗಳಿಗೂ ಎಡತಾಕಿದ ಸೋಮಣ್ಣ ತನಗೊಂದು ಅವಕಾಶ ಕೊಡಿ ಎಂದು ಮನವಿ ಮಾಡಿದರು.
ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದರೂ ರಾಷ್ಟ್ರೀಯ ಒಗ್ಗಟ್ಟನ್ನು, ಸಂವಿಧಾನದ ಆಧಾರದ ಮೇಲೆ ಒಟ್ಟಾಗಿ ತೆಗೆದುಕೊಂಡು ಹೋಗುವ ಮನಸ್ಥಿತಿ ಇಲ್ಲ. ಹಿಂದುತ್ವ, ಧರ್ಮಾಂಧತೆ, ಜಾತಿಗಳ ನಡುವೆ ಕಲಹ ಸೃಷ್ಟಿಸಿ, ಸಾಮಾಜಿಕ ಸಾಮರಸ್ಯ ನಾಶ ಮಾಡುತ್ತಾ ಬಂದಿದ್ದಾರೆ ಎಂದು ಮಾಜಿ ಸಚಿವ ಬಿ.ಸೋಮಶೇಖರ್ ಕಿಡಿ ಕಾರಿದ್ದಾರೆ.
Vinay Kulkarni : ಧಾರವಾಡ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಧಾರವಾಡ ಭೇಟಿಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿಲ್ಲ. ಯೋಗೇಶ್ ಗೌಡ ಹತ್ಯೆ ಪ್ರಕರಣದ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಧಾರವಾಡ ಭೇಟಿಗೆ ನಿರ್ಭಂದಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.