Karnataka Election 2023 : ಯಡಿಯೂರಪ್ಪರ ರಾಜಕೀಯ ಭವ್ಯ ಭವಿಷ್ಯಕ್ಕೆ ಮುನ್ನುಡಿ ಬರೆದಿತ್ತು ಸಿಕೆಆರ್ 454. ನಾಮಪತ್ರ ಸಲ್ಲಿಸುವಾಗಲೆಲ್ಲಾ ಈ ನಂಬರ್ ಶುಭಶಕುನವನ್ನೇ ನುಡಿಯುತ್ತಿತ್ತು. ತಂದೆಯ ಪಾಲಿಗೆ ಅದೃಷ್ಟ ತಂದಿದ್ದ ಈ ನಂಬರ್ ಮಗನಿಗೂ ಲಕ್ಕಿಯಾಗಿ ಸಾಬೀತಾಗಲಿದೆಯಾ ?
Karnataka assembly Election: ಮೋದಿ ಕರ್ನಾಟಕಕ್ಕೆ ಬಂದರೇ ಕಾಂಗ್ರೆಸ್ ಅವರ ಗುಂಡಿಗೆಯಲ್ಲಿ ಭಯ ಶುರುವಾಗಲಿದೆ. ನಾನು ಗೋಲಿ, ಬುಗುರಿ ಆಡಿ ಬೆಳೆದಿದ್ದು ಸಿದ್ದರಾಮನಹುಂಡಿಯಲ್ಲಿ, ವರುಣಾಗೆ ಯಾಕೆ ಸೋಮಣ್ಣ ಬಂದ್ರು ಎಂದು ಕೇಳುತ್ತಿದ್ದಾರೆ. ಅವರ ಎದೆಯಲ್ಲಿ ನಡುಕ ಶುರುವಾಗಿದೆ, ಅವರಿಗೆ ಭಯ ಬರಿಸಬೇಕಿತ್ತು, ಬರಿಸಿದ್ದಾಗಿದೆ ನಮಗೆ ಖುಷಿ ಇದೆ ಎಂದು ವ್ಯಂಗ್ಯ ಮಾಡಿದರು.
World Liver Day 2023: ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾದ ಲಿವರ್ ಅಥವಾ ಯಕೃತ್ ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಏಪ್ರಿಲ್ 19ರಂದು ವಿಶ್ವ ಯಕೃತ್ತಿನ ದಿನಾಚರಣೆಯನ್ನು ಆಚರಿಸಲಾಗುತ್ತದೆ.
Karnataka Assembly Election: ಕಡಿಮೆ ಅವಧಿಯಲ್ಲಿ ಗೆಲ್ಲುವ ಕಸರತ್ತು, ರಣನೀತಿಯನ್ನು ರೂಪಿಸುತ್ತಿರುವ ಸಚಿವ ವಿ. ಸೋಮಣ್ಣ ನಾಮಪತ್ರ ಸಲ್ಲಿಸಿದ ಬಳಿಕವೂ ಹಲವು ಮುಖಂಡರ ಮನೆಗೆ ಭೇಟಿ ನೀಡಿ ಸಮಾಲೋಚನೆ ನಡೆಸಲಿದ್ದಾರೆ.
Karnataka Assembly Election: ನಾಮಪತ್ರ ಸಲ್ಲಿಕೆಗೂ ಮುನ್ನ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಬಳಿಕ ದೇವಸ್ಥಾನದಿಂದ ಜಯನಗರ ಬಿಡಿಎ ಕಾಂಪ್ಲೆಕ್ಸ್ ತನಕ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಾವಿರಾರು ಬೆಂಬಲಿಗರು ಹಾಗೂ ಕಾರ್ಯಕರ್ತರು ಹಾಜರಾಗಿ ಜೈಕಾರ ಕೂಗಿದ್ರು.
ಗಿರಿನಾಡು ಯಾದಗಿರಿಯಲ್ಲಿ ಬಿಸಲಿನ ತಾಪ ಹೆಚ್ಚಾದ್ದಂತೆ,ಚುನಾವಣಾ ರಣಕಣದ ಕಾವು ಕೂಡ ಅಷ್ಟೇ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಯಾದಗಿರಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಪಕ್ಷದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯ ಭರಾಟೆ ಕೂಡ ಜೋರಾಗಿದೆ.ಇಲ್ಲಿಯವರೆಗೂ ಯಾದಗಿರಿ ಜಿಲ್ಲೆಯಲ್ಲಿ 22 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಯಾಗಿವೆ ಚುನಾವಣೆ ಕದನದಲ್ಲಿ ಹೋರಾಟ ಅಭ್ಯರ್ಥಿಗಳು ಅಗ್ನಿ ಪರೀಕ್ಷೆ ಇಳಿದಿದ್ದಾರೆ ಇಲ್ಲಿದೆ ಕಂಪ್ಲೀಟ್ ಸ್ಟೋರಿ.
ಇಂದು ನಾಮಪತ್ರ ಸಲ್ಲಿಕೆ ಮಾಡುತ್ತಿರುವುದರಿಂದ ಅದಕ್ಕೂ ಮುನ್ನ ಸಿಎಂ ಬೊಮ್ಮಾಯಿ ಶಿಗ್ಗಾವಿ ಪಟ್ಟಣದಲ್ಲಿ ಬೃಹತ್ ರೋಡ್ ಶೋವನ್ನು ಹಮ್ಮಿಕೊಂಡಿದ್ದಾರೆ.ಇದಾದ ಬಳಿಕ ತಾಲೂಕಿನ ಕ್ರೀಡಾಂಗಣದಲ್ಲಿ ಬಹಿರಂಗ ಸಮಾವೇಶ ನಡೆಯಲಿದೆ ಎನ್ನಲಾಗಿದೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ದಿನೆ ದಿನೆ ರಂಗೇರುತ್ತಿದೆ. ನಾಮಪತ್ರ ಸಲ್ಲಿಕೆಯ ದಿನ ಕೊನೆ ಆಗ್ತಿರೋ ಕಾರಣ ಪ್ರತೀ ಕ್ಷೇತ್ರದಲ್ಲೂ ಆಡಳಿತ ಪಕ್ಣ ಸೇರಿ ಹಲವಾರು ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. ಅದರಂತೆ ಬೆಂಗಳೂರಿನ ಮಲ್ಲೇಶ್ವರ ಕ್ಷೇತ್ರದಲ್ಲಿ ನಿನ್ನೆ ಬಿಜೆಪಿ ಬಲಿಷ್ಠ ನಾಯಕ ಸಚಿವ ಡಾ. ಅಶ್ವಥ್ ನಾರಾಯಣ ನಾಮ ಪತ್ರ ಸಲ್ಲಿಸಿದ್ರೆ, ಇತ್ತ ಕಾಂಗ್ರೆಸ್ ಪಕ್ಷದಿಂದಲೂ ಅಭ್ಯರ್ಥಿ ಸವಾಲೆಂಬತೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
Karnataka Assembly Election 2023: ದುರಾಡಳಿತ, ಭ್ರಷ್ಟಾಚಾರದಿಂದ ಮಡುಗಟ್ಟಿದ್ದ ಜನಾಕ್ರೋಶ ಈಗ ಹೊರಬರುತ್ತಿದೆ. ಬಿಜೆಪಿ ಮುಕ್ತ ಮಾಡಲು ಕನ್ನಡಿಗರೇ ಶಪಥ ಮಾಡಿಯಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
Karnataka Assembly Election: ತಹಸಿಲ್ದಾರ ಕಛೇರಿಗೆ ನಾಮಪತ್ರ ಸಲ್ಲಿಸಲು ಆಗಮಿಸಿದ ತಾಲೂಕಿನ ಯಂಕಪ್ಪ ದೇವಿಂದ್ರಪ್ಪ ಎಂಬುವನು ಪಕ್ಷೇತರ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಲು ವಿಭಿನ್ನ ರೀತಿಯಲ್ಲಿ ಬಂದಿದ್ದನು. ಅಭ್ಯರ್ಥಿ ವಿಭಿನ್ನ ನೆಲೆಗೆ ಅಧಿಕಾರಿಗಳು ಮೆಚ್ಚುಗೆ ಸೂಚಿಸಿದ್ದಾರೆ.
ಮೀಸಲಾತಿ ಹೆಚ್ಚಳದ ವಿಚಾರವಾಗಿ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಗೆ ರಾಜ್ಯ ಬಿಜೆಪಿ ಸರ್ಕಾರ ತನ್ನ ಅಫಿಡವಿಟ್ ಸಲ್ಲಿಸಲು ವಿಫಲವಾಗಿದೆ. ಈ ಅಫಿಡವಿಟ್ ಸಲ್ಲಿಸುವವರೆಗೂ ಸರ್ಕಾರದ ಆದೇಶ ಜಾರಿಗೆ ಬರಲು ಸಾಧ್ಯವೇ ಇಲ್ಲ.
Karnataka Assembly Elections 2023: ವರುಣಾ ಕ್ಷೇತ್ರದಲ್ಲಿ 55 ಸಾವಿರ ಲಿಂಗಾಯಿತ ಮತದಾರರಿದ್ದಾರೆ. ಕುರುಬರು 35 ಸಾವಿರ, ಪರಿಶಿಷ್ಟ ಜಾತಿ 43 ಸಾವಿರ, ಪರಿಶಿಷ್ಟ ಪಂಗಡ 23 ಸಾವಿರ, ಒಕ್ಕಲಿಗರು 12 ಸಾವಿರ ಹಾಗೂ ಇತರ ಹಿಂದುಳಿದ ವರ್ಗಗಳ ಸಮುದಾಯದವರು 12 ಸಾವಿರ ಇದ್ದಾರೆ.
Karnataka Assembly Election 2023: ಬರ್ತಿದೆ… ಬರ್ತಿದೆ.. ಬರ್ತಿದೆ… ಬರ್ತಿಲ್ಲ… ಬರ್ತಿಲ್ಲ ಎನ್ನುವ ಟ್ರೋಲ್ ಒಂದು ಹರಿದಾಡುವಷ್ಟರ ಮಟ್ಟಿಗೆ ಶಿವಮೊಗ್ಗ ಸಿಟಿ ಕ್ಷೇತ್ರ ಕುತೂಹಲ ಮೂಡಿಸಿದೆ. ಬರೋಬ್ಬರಿ 222 ಕ್ಷೇತ್ರಗಳಿಗೂ ಅಳೆದು ಮೊಗೆದು ಟಿಕೆಟ್ ಕೊಟ್ಟಿರುವ ಬಿಜೆಪಿಗೆ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಸಾಧ್ಯವಾಗಲಿಲ್ಲವೇ ? ಈ ಪ್ರಶ್ನೆಗೆ ಬಿಜೆಪಿ ಮೂಲಗಳಲ್ಲಿ ಬೇರೆಯದ್ದೆ ವಿಚಾರ ಕೇಳಿಬರುತ್ತಿದೆ.
Karnataka Assembly Election 2023: ಸಿಂಧನೂರು ತಹಶೀಲ್ದಾರರ ಕಚೇರಿಯಲ್ಲಿ ಇಬ್ಬರೂ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಬಂದ ಜೋಡಿಗೆ ಅದ್ದೂರಿ ಮೆರವಣಿಗೆ ಮಾಡಲಾಗಿದೆ. ಮೆರವಣಿಗೆಯಲ್ಲಿ ಜೋಡಿ ಅಭ್ಯರ್ಥಿಗಳಿಗೆ ಹೂಮಳೆ ಸಹ ಸುರಿಸಲಾಗಿದೆ.
Karnataka Assembly Election: ಇಂದು ಹನೂರು ವಿಧನಾಸಭಾ ಕ್ಷೇತ್ರದಿಂದ ನಾಲ್ಕನೇ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅರ್ಜಿ ಸಲ್ಲಿಸಿದ ಹ್ಯಾಟ್ರಿಕ್ ಶಾಸಕ ನರೇಂದ್ರ ಅವರು ತಮ್ಮ ಆಸ್ತಿ ವಿವರವನ್ನು ಘೋಷಿಸಿದ್ದಾರೆ.
Karnataka Assembly Election 2023: ಬಿಜೆಪಿಯ ಈ ಎಲ್ಲಾ ಬೆಳವಣಿಗೆಗೆ ಬಿ.ಎಲ್.ಸಂತೋಷ್ ನೇರ ಕಾರಣ. ಜಗದೀಶ್ ಶೆಟ್ಟರ್ ಅವರು ಬಿ.ಎಲ್.ಸಂತೋಷ ಮೇಲೆ ಮಾಡಿರುವ ಆರೋಪಗಳು ಸರಿ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Karnataka Election 2023: ಕಾಂಗ್ರೆಸ್ ಲಿಂಗಾಯತರನ್ನೇ ಒಡೆದು ಛಿದ್ರ ಮಾಡಲು ಹೊರಟಿತ್ತು. ಕಾಂಗ್ರೆಸ್ ನ ಒಡೆದು ಆಳುವ ನೀತಿ ಯಾರೂ ಎಂದಿಗೂ ಮರೆಯಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Karnataka Assembly Election 2023: ಸೋಮಣ್ಣ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗ ವರುಣಗೆ ಒಂದೇ ಒಂದು ಮನೆ ಕೊಟ್ಟಿದ್ದನಾ? ಈಗ ಬಂದು ಅಭಿವೃದ್ಧಿ ಬಗ್ಗೆ ಮಾತನಾಡುತ್ತಾನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.