ಬೆಂಗಳೂರು : ನಮ್ಮ ಬಜೆಟ್ ನ ಅಂಕಿ-ಅಂಶಗಳನ್ನು ನೋಡಿ ವಿರೋಧ ಪಕ್ಷಗಳ ನಾಯಕರಿಗೆ ಸಂಕಟದಿಂದ ಕೂರಲು ಆಗಲಿಲ್ಲ. ಎಲ್ಲಾ ಗ್ಯಾರಂಟಿಗಳಿಗೆ ಹಣ ಕೊಟ್ಟು ಇಷ್ಟು ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರಲ್ಲ ಎಂದು ಅಸೂಯೆಯಿಂದ ಬಜೆಟ್ ಧಿಕ್ಕರಿಸಿ ಎದ್ದು ಹೋದರು ಎಂದು ವಿಪಕ್ಷ ನಾಯಕರ ನಡೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕಿಡಿಕಾರಿದರು.


COMMERCIAL BREAK
SCROLL TO CONTINUE READING

2024-25ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಬಳಿಕ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಬಜೆಟ್ ನ ಅಂಕಿ-ಅಂಶಗಳನ್ನು ನೋಡಿ ವಿರೋಧ ಪಕ್ಷಗಳ ನಾಯಕರಿಗೆ ಸಂಕಟದಿಂದ ಕೂರಲು ಆಗಲಿಲ್ಲ. ಅಸೂಯೆಯಿಂದ ಬಜೆಟ್ ಧಿಕ್ಕರಿಸಿ ಎದ್ದು ಹೋದರು. ರಾಜ್ಯದ ಇತಿಹಾಸದಲ್ಲಿ ಯಾವುದೇ ವಿರೋಧ ಪಕ್ಷದವರು ಈ ರೀತಿ ಬಜೆಟ್ ಗೆ ಅಪಮಾನ ಮಾಡಿ ಹೋಗಿರಲಿಲ್ಲ . ಈ ಮೂಲಕ ಅವರು ಜನರಿಗೆ, ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ ಎಂದರು. 


ಇದನ್ನೂ ಓದಿ:ರಾಮನಗರ-ಶಿಡ್ಲಘಟ್ಟ ರೇಷ್ಮೆ ಮಾರುಕಟ್ಟೆಗಳನ್ನು ಹೈಟೆಕ್‌ ಮಾಡಲು ಕ್ರಮ


ಇನ್ನು ತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರಿನ ಬಗ್ಗೆ ದೊಡ್ಡ ಪ್ರಮಾಣದ ದೂರದೃಷ್ಟಿ ಇಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ. ನೀರಾವರಿ ಇಲಾಖೆಯಲ್ಲಿ ಹೊಸ ಚಿಂತನೆ ಹಮ್ಮಿಕೊಳ್ಳಲಾಗಿದೆ. ಕೆಆರ್ ಎಸ್ ಉದ್ಯಾನ ಅಭಿವೃದ್ಧಿ, ನವಲಿ ಸಮತೋಲಿತ ಜಲಾಶಯ ನಿರ್ಮಾಣ, ಕೃಷ್ಣ ಮೇಲ್ದಂಡೆ, ಕಳಸಾ ಬಂಡೂರಿ ಯೋಜನೆಗೆ ಮುಂದಾಗಿದ್ದೇವೆ. ಕೇಂದ್ರ ಸರ್ಕಾರ ಕಳಸಾ ಬಂಡೂರಿ ಯೋಜನೆಗೆ ಒಪ್ಪಿಗೆ ನೀಡದಿದ್ದರೂ ನಾವು ಟೆಂಡರ್ ಕರೆದಿದ್ದೇವೆ. ಕೇಂದ್ರ ಸರ್ಕಾರ ಅನುಮತಿ ಕೊಟ್ಟ ತಕ್ಷಣ ಕೆಲಸ ಆರಂಭಿಸಲು ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಮೇಕೆದಾಟು ಯೋಜನೆಗೂ ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು.


ಅಲ್ಲದೆ, ಬೆಂಗಳೂರಿನ ಹೊರವಲಯದ 110 ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆ, ಬೆಂಗಳೂರಿನ ಮೇಲಿನ ಒತ್ತಡ ಕಡಿಮೆ ಮಾಡಲು ಮಾಗಡಿ, ಹೊಸಕೋಟೆ, ನೆಲಮಂಗಲ, ಬಿಡದಿ ಸೇರಿದಂತೆ ಐದು ಹೊಸ ಟೌನ್ ಶಿಪ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲು ಸ್ಕೈ ಡೆಕ್ ನಿರ್ಮಾಣ ಮಾಡಲು ಪ್ರಸ್ತಾವನೆ ಮಾಡಿದ್ದೇವೆ. ಕಂದಾಯ ಇಲಾಖೆಯಲ್ಲಿ ಜನರಿಗೆ ಆಗುತ್ತಿರುವ ತೊಂದರೆ ಸರಿ ಮಾಡಲು ಬದಲಾವಣೆ ತರುತ್ತಿದ್ದೇವೆ. ಪಹಣಿ, ಪೋಡಿ, ಖಾತೆ ಸಮಸ್ಯೆ ಬಗೆಹರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಆಸ್ತಿ ದಾಖಲೆಗಳನ್ನು ಮನೆಬಾಗಿಲಿಗೆ ತಲುಪಿಸಲು ಮುಂದಾಗಿದ್ದೇವೆ ಎಂದು ಮಾಹಿತಿ ನೀಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.