ಬೆಂಗಳೂರು : ಸಿಎಂ ಸಿದ್ದರಾಮಯ್ಯನವರು ಬಜೆಟ್ ಪುಸ್ತಕದಲ್ಲಿ‌ ಹೊಸ ಸಂಪ್ರದಾಯವನ್ನು ತುರುಕಿದ್ದಾರೆ. ಹಿಂದಿನ‌ ಸರ್ಕಾರ ಹಾಗೂ‌‌ ಕೇಂದ್ರ ಸರ್ಕಾರದ ನಿಂದನೆಗೆ ನೀಡಿದಷ್ಟು ಸ್ಥಳಾವಕಾಶವನ್ನು ಹೊಸ ಯೋಜನೆಗಳ ಪ್ರಕಟಣೆಗೆ ನೀಡಿಲ್ಲ. ಈ ಬಜೆಟ್ ನಲ್ಲಿ ಆರ್ಥಿಕ ಮುನ್ನೋಟಕ್ಕಿಂತ ರಾಜಕೀಯ ಹಿನ್ನೋಟವೇ ಜಾಸ್ತಿ ಇದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ಅವರು ಬಜೆಟ್‌ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ  25000 ಕೋಟಿ ರೂ. ಖರ್ಚಾಗುತ್ತದೆ ಎಂದು ಲೆಕ್ಕಕೊಟ್ಟಿದ್ದರೂ, ಅದಕ್ಕೆ ಯಾವ ಮೂಲದಿಂದ ಹಣಕಾಸು ಹೊಂದಿಸುತ್ತಾರೆಂಬ ಬಗ್ಗೆ ಸ್ಪಷ್ಟತೆ ಇಲ್ಲ. ಜಿಎಸ್ಟಿ ಪರಿಹಾರ, ತೆರಿಗೆ ಹಂಚಿಕೆಯ ವಿಚಾರಗಳಲ್ಲಿ ಕೇಂದ್ರದ ಟೀಕೆ ಮತ್ತು ಅತಾರ್ಕಿಕ ವಿಚಾರಗಳಿಗೆ ಮಾತ್ರ ಮಹತ್ವ ನೀಡಿ ಸತ್ಯ ಮರೆಮಾಚಿದ್ದಾರೆ.


ಇದನ್ನೂ ಓದಿ: ಬಜೆಟ್‌ ಭಾಷಣದಲ್ಲಿ ರಾಜಕೀಯ, ಕಾಂಗ್ರೆಸ್ ಇನ್ನು ಚುನಾವಣಾ ಗುಂಗಿನಲ್ಲೇ ಇದೆ, ಅಭಿವೃದ್ಧಿ ಮರೀಚಿಕೆ..


ತೆರಿಗೆ ಪ್ರಸ್ತಾಪವಂತೂ ಭವಿಷ್ಯದಲ್ಲಿ " ಸಿದ್ದು ಟ್ಯಾಕ್ಸ್ " ಎಂದೇ ಲೋಕವಿಖ್ಯಾತಿಯಾಗುವ ಅಪಾಯ ಇದೆ. ಅಬಕಾರಿಯೊಂದನ್ನು ಹೊರತುಪಡಿಸಿ ಇನ್ಯಾವ ವಿಭಾಗದಲ್ಲೂ ತೆರಿಗೆ ಹೆಚ್ಚಳದ ಪ್ರಮಾಣ ನಮೂದಿಸಿಲ್ಲ. ಭವಿಷ್ಯದಲ್ಲಿ ನಾಗರಿಕರ ಜೇಬಿಗೆ ಕತ್ತರಿಯ ಬದಲು ಗರಗಸವನ್ನೇ ಹಾಕುವ ಸಾಧ್ಯತೆ ಹೆಚ್ಚಿದೆ.


ಒಟ್ಟಾರೆಯಾಗಿ ಸಿದ್ದರಾಮಯ್ಯನವರು ಬೆಳಕೇ ಇಲ್ಲದ ಕನಸು ಕಾಣುವುದಕ್ಕೂ ಅನರ್ಹವಾದ ಕತ್ತಲೆಯ ಹಾದಿಗೆ ರಾಜ್ಯದ ಜನರನ್ನು ಎಳೆದೊಯ್ಯುವ ಪ್ರಯತ್ನವನ್ನು ನಡೆಸಿದ್ದಾರೆ. "ಎಡವುವುದಕ್ಕಾಗಿಯೇ ನಡೆದರೆ ಒಪ್ಪುವರೇನಯ್ಯ ? ಎಂದು ಹೊಸ ಕವನದ ಸಾಲು ಸೇರಿಸಿದರೆ ಬಜೆಟ್ ನ ಮೆರಗು ಹೆಚ್ಚಬಹುದು ಎಂದಿದ್ದಾರೆ ಶಾಸಕ ವಿ. ಸುನೀಲ್‌ ಕುಮಾರ್‌.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.