ಚಿಂತಾಮಣಿ ಬಳಿ ಭೀಕರ ರಸ್ತೆ ಅಪಘಾತ: 12 ಮಂದಿ ದಾರುಣ ಸಾವು

ಮೃತರಲ್ಲಿ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. 

Last Updated : Jul 3, 2019, 04:15 PM IST
ಚಿಂತಾಮಣಿ ಬಳಿ ಭೀಕರ ರಸ್ತೆ ಅಪಘಾತ: 12 ಮಂದಿ ದಾರುಣ ಸಾವು title=

ಚಿಕ್ಕಬಳ್ಳಾಪುರ: ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದ ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟಾಟಾ ಏಸ್ ನಲ್ಲಿದ್ದ 12 ಮಂದಿ ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.

ಮೃತರಲ್ಲಿ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಉಳಿದಂತೆ ಘಟನೆಯಲ್ಲಿ 8 ಮಂದಿಗೆ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಮೃತರೆಲ್ಲರೂ ಚಿಂತಾಮಣಿಯ ಮುರುಗಮಲ್ಲ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಎನ್ನಲಾಗಿದ್ದು, ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಳಿಕ ಖಾಸಗಿ ಬಸ್​ ಚಾಲಕ ಮತ್ತು ನಿರ್ವಾಹಕ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

Trending News