ಬೆಂಗಳೂರು : ಅವಸರವೇ ಅಪಘಾತಕ್ಕೆ ಕಾರಣ ಎಂಬ ಮಾತಿದೆ. ಸಿಲಿಕಾನ್ ಸಿಟಿಯಲ್ಲಿ ಇತ್ತೀಚಿಗೆ ನಡೆದಿರುವ ಘಟನೆ ಇದಕ್ಕೆ ಕನ್ನಡಿ ಹಿಡಿದಂತಿದೆ. ಹೌದು, ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಸ್ತೆ ದಾಟುವಾಗ ಯುವತಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವತಿ  ಡಿವೈಡರ್ ಮೇಲೆ ಹಾರಿ ಬಿದ್ದಿದ್ದಾಳೆ.


COMMERCIAL BREAK
SCROLL TO CONTINUE READING

18 ವರ್ಷದ ಅಶ್ವಿನಿ  ಎಂಬಾಕೆ ಅವಸರವಾಗಿ ರಸ್ತೆ ದಾಟುತ್ತಿದ್ದಾಗ ಈ ಅವಘಡ ಸಂಭವಿಸಿದ್ದು ಯುವತಿಗೆ ಗಂಭೀರ ಗಾಯಗಳಾಗಿವೆ. ಬಳ್ಳಾರಿ ರಸ್ತೆಯಲ್ಲಿ ನಡೆದ ಆ್ಯಕ್ಸಿಡೆಂಟ್​ನ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 


ಇದನ್ನೂ ಓದಿ- ಇಡ್ಲಿ ವಿಚಾರಕ್ಕೆ ಗುಂಪುಗಳ ನಡುವೆ ಗ್ಯಾಂಗ್ವಾರ್: ದಾಳಿಗೆ ಕಾರು ಜಖಂ!


ಅಶ್ವಿನಿ ಸ್ನೇಹಿತೆಯೊಂದಿಗೆ ಈಕೆ ಅವಸರವಾಗಿ ರಸ್ತೆ ದಾಟುತ್ತಿದ್ದಳು. ಮತ್ತೊಂದು‌ ಬದಿಯಿಂದ ಬರುತ್ತಿದ್ದ ಕಾರು ಅಶ್ವಿನಿಗೆ ಡಿಕ್ಕಿ ಹೊಡೆದಿದೆ.  ಘಟನೆಯಲ್ಲಿ ಯುವತಿಗೆ ಗಂಭೀರ ಗಾಯವಾಗಿದ್ದು, ಹೆಬ್ಬಾಳ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಟ್ರೀಟ್​ಮೆಂಟ್​ ನೀಡಲಾಗುತ್ತಿದೆ. 


ಇದನ್ನೂ ಓದಿ- ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಕೆ.ಸುಧಾಕರ್


ಈ ದುರ್ಘಟನೆಗೆ ಸಂಬಂಧಿಸಿದಂತೆ ಆರ್.ಟಿ.ನಗರ ಟ್ರಾಫಿಕ್​​​​​​​​​​​​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.