ಬೆಂಗಳೂರು:  ಕೋಲಾರ ಜಿಲ್ಲೆ ಕೆ.ಜಿ. ಎಫ್. ನ ಕ್ಯಾಸಂಬಳ್ಳಿ ಹೋಬಳಿಯ ಮರಡಘಟ್ಟ ಗ್ರಾಮದ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಆರು ಮಕ್ಕಳ ಕುಟುಂಬದವರಿಗೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಮಕ್ಕಳು ಗಣಪತಿ ವಿಸರ್ಜನೆಯ ಆಟವಾಡುತ್ತಾ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಈ ಘಟನೆ ಅತ್ಯಂತ ದುರದೃಷ್ಟಕರ ಎಂದಿರುವ ಮುಖ್ಯಮಂತ್ರಿಗಳು ಕೂಡಲೇ ಮಕ್ಕಳ ಕುಟುಂಬದವರಿಗೆ ಪರಿಹಾರ ನೀಡುವಂತೆ ಕೋಲಾರ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದ್ದಾರೆ.


ಕೋಲಾರ ಜಿಲ್ಲೆ ಕೆ.ಜಿ.ಎಫ್ ನ ಕ್ಯಾಸಂಬಳ್ಳಿ ಹೋಬಳಿಯ ಮರಡಘಟ್ಟ ಗ್ರಾಮದ ಕೆರೆಯಲ್ಲಿ ಮುಳುಗಿ 6 ಮಕ್ಕಳು ಸಾವನ್ನಪ್ಪಿರುವುದು ತೀವ್ರ ನೋವು ತಂದಿದೆ ಎಂದು ವಿಷಾದ ವ್ಯಕ್ತಪಡಿಸಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಮಕ್ಕಳನ್ನು ಕಳೆದುಕೊಂಡ ಪೋಷಕರಿಗೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದಿದ್ದಾರೆ.