Gadag: ನೀರು ಕುಡಿಯಲು ಹೋಗಿ ಮೂವರು ಬಾಲಕಿಯರು ನೀರುಪಾಲು

ಮೂವರು ಬಾಲಕಿಯರು ನೀರು ಪಾಲಾಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದಲ್ಲಿ ನಡೆದಿದೆ.

Written by - Zee Kannada News Desk | Last Updated : May 16, 2022, 09:44 PM IST
  • ನೀರು ಕುಡಿಯಲು ಹೋಗಿ ಮೂವರು ಬಾಲಕಿಯರು ನೀರುಪಾಲಾಗಿದ್ದಾರೆ
  • ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದಲ್ಲಿ ಘಟನೆ
  • ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
Gadag: ನೀರು ಕುಡಿಯಲು ಹೋಗಿ ಮೂವರು ಬಾಲಕಿಯರು ನೀರುಪಾಲು title=
ಮೂವರು ಬಾಲಕಿಯರು ನೀರುಪಾಲು

ಗದಗ: ನೀರು ಕುಡಿಯಲು ಹೋಗಿ ಮೂವರು ಬಾಲಕಿಯರು ನೀರು ಪಾಲಾಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದಲ್ಲಿ ನಡೆದಿದೆ.

ಇದನ್ನೂ ಓದಿ: ನ್ಯಾಯ ಕೋರಿ ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ಪಿಎಸ್ಐ ಅಭ್ಯರ್ಥಿಗಳು ..!

ಸುನಿತಾ ಲಕ್ಷ್ಮಣ ಲಮಾಣಿ(9), ಅಂಕಿತಾ ಲಕ್ಷ್ಮಣ ಲಮಾಣಿ(13), ಸುನಿತಾ ಲೋಕೆಶ್ ಲಮಾಣಿ(10) ಮೃತ ದುರ್ದೈವಿಗಳಾಗಿದ್ದಾರೆ. ಕೃಷಿ ಹೊಂಡದಲ್ಲಿ ನೀರು ಕುಡಿಯುವಾಗ ಓರ್ವ ಬಾಲಕಿ ನೀರು ಪಾಲಾಗಿದ್ದಾಳೆ. ಆಕೆಯನ್ನು ಉಳಿಸಲು ಹೋಗಿ ಮತ್ತಿಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿದ್ದಾರೆ. ಘಟನಾ ಸ್ಥಳದಲ್ಲಿ ಯಾರೂ ಇಲ್ಲದ ಕಾರಣ ಬಾಲಕಿಯರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.

ಇದನ್ನೂ ಓದಿ: Student Suicide: ಶಿವಮೊಗ್ಗದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು

ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ ಮೂವರು ಬಾಲಕಿಯರ ಮೃತದೇಹಗಳನ್ನು ಹೊರತೆಗೆಯಲಾಯಿತು. ಬಾಲಕಿಯರ ಶವಗಳನ್ನು ನೋಡಿ ಕುಟುಂಬಸ್ಥರ ಆಕಂದ್ರನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಮುಂಡರಗಿ ತಹಶೀಲ್ದಾರ್ ಆಶಪ್ಪ ಪೂಜಾರ, ಸಿಪಿಐ ಸುನೀಲ್ ಸೌದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News