ಬೆಂಗಳೂರು : ವಿಧಾನಪರಿಷತ್ ನ ಖಾಲಿ ಇರುವ 3 ಸ್ಥಾನಗಳಿಗೆ ನಿಗಧಿಯಾಗಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕಾಂಗ್ರೇಸ್ ಪಕ್ಷದ 3 ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರಗೊಂಡಿವೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಕಾಂಗ್ರೇಸ್ ಪಕ್ಷದಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್,ಎನ್ ಎಸ್ ಬೋಸರಾಜು ಮತ್ತು ತಿಪ್ಪಣ್ಣಪ್ಪ ಕಮಕನೂರು ಅವರು ನಾಮಪತ್ರ ಸಲ್ಲಿಸಿದ್ದರು.ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಡಾ.ಕೆ ಪದ್ಮರಾಜನ್‌ ಅವರ ನಾಮಪತ್ರ ಸೂಚಕರಿಲ್ಲದ ಕಾರಣ ತಿರಸ್ಕೃತಗೊಂಡಿದೆ ಎಂದು ವಿಧಾನಸಭಾ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಶ್ರೀಮತಿ ಎಂ.ಕೆ.ವಿಶಾಲಾಕ್ಷಿ ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಬಡವರ ತಟ್ಟೆಯ ಅನ್ನಕ್ಕೂ ವ್ಯಾಪಿಸಿದ ಬಿಜೆಪಿಯ ಹೀನ ರಾಜಕೀಯ: ಕಾಂಗ್ರೆಸ್ ಆಕ್ರೋಶ


ವಿಧಾನಪರಿಷತ್ ನ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂನ್ 30 ರಂದು ವಿಧಾನಪರಿಷತ್ ಚುನಾವಣೆ ನಡೆಯಲಿದೆ.ಕಾಂಗ್ರೆಸ್ ಪಕ್ಷವು ಸದ್ಯ ಇಬ್ಬರು ಪಕ್ಷೇತರರ ನೆರವಿನಿಂದ 137 ಸದಸ್ಯರನ್ನು ಒಳಗೊಂಡಿದೆ.ಉಮೇದುವಾರಿಕೆಯನ್ನು ಹಿಂಪಡೆಯಲು ಜೂನ್ 23 ಆಗಿದ್ದು, ಒಂದು ವೇಳೆ ಬಿಜೆಪಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದೇ ಆದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಗೊಳ್ಳುವ ಸಾಧ್ಯತೆ ಇದೆ.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.