ಬೆಂಗಳೂರು : ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆ ಭಾರೀ ಮಳೆ ಇದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಪ್ರಸಾದ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತು ಮಾತನಾಡಿದ ವಿಜ್ಞಾನಿ ಪ್ರಸಾದ್, ಕರಾವಳಿಯ ಹಲವು ಪ್ರದೇಶದಲ್ಲಿ ಅತಿ ಭಾರೀ ಹಾಗೂ ಭಾರೀ ಮಳೆ ದಾಖಲಾಗಿದೆ. ದಕ್ಷಿಣ ಒಳನಾಡಿನ ಕೊಡಗಿನಲ್ಲಿ ಭಾರೀ ಮಳೆಯಾಗಿದೆ. 
ಅರಬ್ಬೀ ಸಮುದ್ರದಲ್ಲಿ ಟ್ರಫ್ ಹಿನ್ನಲೆ, ಕರಾವಳಿ ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರೀ ಮಳೆ, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನಲ್ಲಿ ಇಂದು ಮತ್ತು ನಾಳೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದರು. 


ಇದನ್ನೂ ಓದಿ : Janardhan Reddy : 'ನಾನು ಮನಸ್ಸು ಮಾಡಿದ್ರೆ‌ ಇವತ್ತಾದ್ರು ಒಂದು ದಿನ ಸಿಎಂ ಆಗುವೆ'


ಬೆಳಗಾವಿ, ಬೀದರ್, ಧಾರವಾಡ, ಹಾವೇರಿ,ಕಲಬುರುಗಿಗೆ ಎಲ್ಲೋ ಅಲರ್ಟ್ ಘೋಷಣೆ ದಕ್ಷಿಣ ಒಳನಾಡಿಗೆ ಹಗುರ ಮಳೆ ಸಾಧ್ಯತೆ ಇದೆ. ಬೆಂಗಳೂರಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಮಿಂಚಿನೊಂದಿಗೆ ಮಳೆಯಾಗಲಿದೆ. ಬೆಂಗಳೂರಲ್ಲಿ ನಾಳೆಯೂ ಮೋಡ ಕವಿದ ವಾತಾವರಣ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.