ಬೆಂಗಳೂರು : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆಯಾಗಲಿದೆ  ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


COMMERCIAL BREAK
SCROLL TO CONTINUE READING

ನಿನ್ನೆ ರಾತ್ರಿ ರಾಜ್ಯದ ಅನೇಕ ಕಡೆಗಳಲ್ಲಿ ಭಾರೀ ಮಳೆ(Heavy Rain)ಯಾಗಿದೆ. ಅಲ್ಲದೆ, ಮುಂದಿನ ನಾಲ್ಕು-ಐದು ದಿನ ಭಾರೀ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.


ಇದನ್ನೂ ಓದಿ : Bengaluru Gang Rape Case: 12 ಮಂದಿಯ ಬಂಧನ, ಶಂಕಿತರಿಂದ ವಿಡಿಯೋ ಹಂಚಿಕೆ


ಈ ತಿಂಗಳಲ್ಲಿ ಶೇ.94 ರಿಂದ 106 ರಷ್ಟು ಮಳೆಯಾಗಲಿದೆ. ಈ ಮಳೆ ದೇಶಾದ್ಯಂತ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ(Indian Meteorological Department) ತಿಳಿಸಿದೆ.


ಇದನ್ನೂ ಓದಿ : Shobha Karandlaje : 'ನಾನು ರೈತನ ಮಗಳು, ರೈತರಿಗಾಗಿ ಕೆಲಸ ಮಾಡುತ್ತೇನೆ'


ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಇಂದಿನಿಂದ ಮತ್ತೆ ಮಳೆ(Rain) ಆರಂಭವಾಗಲಿದೆ. ಕರಾವಳಿ ಜಿಲ್ಲೆಗಳಲ್ಲೂ ವರುಣ ಆರ್ಭಟಿಸಲಿದ್ದಾನೆ. ಇನ್ನೆರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಜು. 5ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


ಇದನ್ನೂ ಓದಿ : Rain in Karnataka : ಇಂದಿನಿಂದ ರಾಜ್ಯದಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ 


ಕಲ್ಯಾಣ ಕರ್ನಾಟಕ(Kalyana Karnataka)ದಲ್ಲಿ ಕಳೆದ ವಾರ ಜೋರಿದ್ದ ಮಳೆ ಈ ವಾರ ಇಳಿಕೆಯಾಗಿದೆ. ಆದರೆ, ನೈರುತ್ಯ ಮುಂಗಾರಿನಲ್ಲಿ ಈ ಭಾಗಕ್ಕೆ ಜು.08ರ ನಂತರ ಉತ್ತಮ ಮಳೆಯಾಗಲಿದೆ ಎನ್ನಲಾಗುತ್ತಿದೆ. ಉತ್ತರ ಒಳನಾಡಿನಲ್ಲಿ ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದೆ. ನೈಋತ್ಯ ಮುಂಗಾರು ದುರ್ಬಲವಾದ್ದರಿಂದ ಕರಾವಳಿಯಲ್ಲಿ ಹೆಚ್ಚು ಮಳೆಯಾಗುತ್ತಿದೆ.


ಇದನ್ನೂ ಓದಿ : ರಾಜ್ಯಕ್ಕೆ ಸಿಗದ ಕ್ಯಾಬಿನೆಟ್ ದರ್ಜೆ ಸ್ಥಾನ, ನಾಲ್ವರಿಗೆ ರಾಜ್ಯ ಖಾತೆ


ಮಲೆನಾಡಿನಲ್ಲೂ ಇಂದು ಮಳೆಯಾಗಲಿದ್ದು, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಜು. 5ರವರೆಗೆ ಮಳೆ(Rainfall)ಯಾಗಲಿದೆ. ಬೆಂಗಳೂರಿನಲ್ಲಿ ಕೂಡ ಈ ವಾರಾಂತ್ಯದಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮಳೆ ಹೆಚ್ಚಾಗುತ್ತಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲೂ ಇಂದಿನಿಂದ 12 ರವರೆಗೆ ಮಳೆಯಾಗಲಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ