ಬೆಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾದ ಕಾರಣ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 


COMMERCIAL BREAK
SCROLL TO CONTINUE READING

ಮುಂದಿನ 5 ದಿನವೂ ಭಾರೀ ಮಳೆ ಕಾರಣ ನಾಳೆ ಆರೆಂಜ್ ಅಲರ್ಟ್, ಮುಂದಿನ ಮೂರು ದಿನ ಎಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 


ಇದನ್ನೂ ಓದಿ : ಹೌದು. ನಾನು ಲಕ್ಕಿ ಡಿಪ್ ಸಿಎಂ, ಏನೀಗ?: ‘ಆಪರೇಷನ್ ಕಮಲ’ದ ವಿರುದ್ಧ ಎಚ್‌ಡಿಕೆ ಆಕ್ರೋಶ


ಬೆಳಗಾವಿ ಜಿಲ್ಲೆಗೆ ಆರೆಂಜ್, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್, ಕೊಡಗು, ಶಿವಮೊಗ್ಗ, ಚಿಕ್ಕಮಂಗಳೂರಿಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್, ಮುಂದಿನ ಮೂರ ದಿನಗಳು ಪಶ್ಚಿಮ ಘಟ್ಟ ಜಿಲ್ಲೆಗಳಿಗೆ ಎಲ್ಲೊ ಅಲರ್ಟ್, ಬೆಂಗಳೂರಲ್ಲಿ ಇಂದು ಮತ್ತು ನಾಳೆ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ತಿಳಿಸಿದೆ. 


ರಾಜ್ಯದಲ್ಲಿ ಬಹುತೇಕ ಕಡೆ ಮಳೆಯಾಗುತ್ತಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಲ್ಲಿ ಮುಂಗಾರು ಚುರುಕಾಗಿದ್ದು. ಕರಾವಳಿಯಲ್ಲಿ 10 ಕಡೆ ಅತಿ ಭಾರಿ ಮಳೆಯಾಗಿದ್ದು,  12 ರಿಂದ 20 ಸೆಂ.ಮೀ ಮಳೆ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್ ನಲ್ಲಿ 25 ಸೆಂಮೀ ಮಳೆಯಾಗಿದೆ. ಚಿಕ್ಕಮಂಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. 


ಇದನ್ನೂ ಓದಿ : ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸದ ಸರ್ಕಾರ: ಸಿದ್ದರಾಮಯ್ಯ ಆಕ್ರೋಶ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ