Heavy Rainfall : ಉತ್ತರ ಕರ್ನಾಟಕ ಭಾಗದಲ್ಲಿ ಮುಂದಿನ 5 ದಿನ ಭಾರೀ ಮಳೆ!

ಧಾರವಾಡ, ಹಾವೇರಿ, ಹಾಗು ಬೆಳಗಾವಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಯಾದಗಿರಿ ಹಾಗು ಕಲಬುರ್ಗಿ ಜಿಲ್ಲೆಗಳಲ್ಲಿ 13 ರಿಂದ 14 ರವರೆಗೆ ಮತ್ತು ಗದಗ ಜಿಲ್ಲಿಗೆ 17 ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

Written by - Channabasava A Kashinakunti | Last Updated : Jul 14, 2021, 08:35 AM IST
  • ಮುಂದಿನ 5 ದಿನ ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಮುಂದುವರಿಯಲಿದ್ದು
  • ಧಾರವಾಡ, ಹಾವೇರಿ, ಹಾಗು ಬೆಳಗಾವಿ ಜಿಲ್ಲೆಗಳಲ್ಲಿ 5 ದಿನಗಳ ಕಾಲ ಯಲ್ಲೋ ಅಲರ್ಟ್
  • ಉತ್ತರ ಕನ್ನಡ ಜಿಲ್ಲೆಗೆ ಮುಂದಿನ 5 ದಿನಗಳ ಕಾಲ ಆರೆಂಜ್ ಅಲರ್ಟ್
Heavy Rainfall : ಉತ್ತರ ಕರ್ನಾಟಕ ಭಾಗದಲ್ಲಿ ಮುಂದಿನ 5 ದಿನ ಭಾರೀ ಮಳೆ! title=

ಬೆಂಗಳೂರು : ಮುಂದಿನ 5 ದಿನ ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಮುಂದುವರಿಯಲಿದ್ದು ಎಲ್ಲ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂಡ್ ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

ಧಾರವಾಡ, ಹಾವೇರಿ, ಹಾಗು ಬೆಳಗಾವಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಯಲ್ಲೋ ಅಲರ್ಟ್(Yellow Alert) ಘೋಷಿಸಲಾಗಿದೆ. ಬೀದರ್, ಯಾದಗಿರಿ ಹಾಗು ಕಲಬುರ್ಗಿ ಜಿಲ್ಲೆಗಳಲ್ಲಿ 13 ರಿಂದ 14 ರವರೆಗೆ ಮತ್ತು ಗದಗ ಜಿಲ್ಲಿಗೆ 17 ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ : Global Home Price Index 2021: ಭಾರತದಲ್ಲಿ ಮನೆಗಳ ಬೆಲೆಗಳಲ್ಲಿ ಭಾರಿ ಕುಸಿತ, ನಮ್ಮ ಬೆಂಗಳೂರಿನಲ್ಲಿ ಎಷ್ಟು ಕುಸಿತ?

ಉತ್ತರ ಕನ್ನಡ ಜಿಲ್ಲೆಗೆ ಮುಂದಿನ 5 ದಿನಗಳ ಕಾಲ ಆರೆಂಜ್ ಅಲರ್ಟ್(Orange Alert) ಹಾಗು ಬೆಳಗಾವಿ ಜಿಲ್ಲೆಗೆ ಜುಲೈ 15 ರಂದು  ಆರೆಂಜ್ ಅಲರ್ಟ್ ನೀಡಲಾಗಿದೆ. ರಾಜ್ಯದ ಬಹುತೇಕ ಮೋಡ ಕವಿದ ವಾತಾವರಣವಿದೆ.

ಇದನ್ನೂ ಓದಿ : Karnataka Unlock: ಸೋಂಕಿನ ಪ್ರಮಾಣ ಇಳಿಕೆ, ಮತ್ತಷ್ಟು ವಿನಾಯಿತಿ ಘೋಷಿಸುವ ಸಾಧ್ಯತೆ..?

ಮುಂದಿನ ಜುಲೈ 16ರವರೆಗೂ ಮಳೆ ಇದೇ ರೀತಿ ಮುಂದುವರೆಯಲಿದ್ದು, ಅಧಿಕ ಮಳೆ(Heavy Rainfall)ಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಳೆಯಿಂದಾಗಿ ದೇಶದ ಅನೇಕ ಭಾಗಗಳಲ್ಲಿ ಈಗಾಗಗಲೇ ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ. 

ಇದನ್ನೂ ಓದಿ : BankingExams: ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆದರಿದ ಇಲಿ’

ಕಳೆದ ಎರಡು ಮೂರು ದಿನಗಳಿಂದ ಕರ್ನಾಟಕ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅತಿಹೆಚ್ಚು ಮಳೆಯಾಗುತ್ತಿದೆ. ಕಳೆದೊಂದು ವಾರದಿಂದ ಕೊಂಚ ವಿರಾಮ ನೀಡಿದ್ದ ಮಳೆ(Rain) ಕಳೆದ ಮೂರು ದಿನಗಳಿಂದ ಬಿರುಸು ಕೊಂಡಿದೆ. ಈಗಾಗಲೇ ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಇನ್ನು ಮೂರು ದಿನ ಇದೇ ರೀತಿ ಮಳೆಯಾಗಲಿದೆ. ಅರಬ್ಬಿ ಸಮುದ್ರದಲ್ಲಿ ಏಳುವ ಗಾಳಿ ಯಿಂದ ಅಲೆಗಳ ಹೊಡೆತ ಇನ್ನಷ್ಟು ಹೆಚ್ಚಲಿದ್ದು, ಕಡಲ ಕೊರೆತ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನಲೆ ಈಗಾಗಲೇ ಈ ಪ್ರದೇಶಗಳಲ್ಲಿ ರೆಡ್​ ಆಲರ್ಟ್​ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ : Monsoon 2021 : ಇಂದಿನಿಂದ ಜು.16ರವರೆಗೂ ರಾಜ್ಯದಲ್ಲಿ ಭಾರೀ ಮಳೆ!

ದಕ್ಷಿಣ ಭಾರತ ಸೇರಿದಂತೆ ಉತ್ತರ ಭಾರದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಿದೆ. ಸೋಮವಾರ-ಮಂಗಳವಾರ ಸುರಿದ ಭಾರಿ ಮಳೆಗೆ ಉತ್ತರ ಪ್ರದೇಶ ಮತ್ತು ರಾಜಸ್ಥಾನ್​, ಗುಜರಾತ್​, ಹಿಮಾಚಲ ಪ್ರದೇಶದ ಜನ ತತ್ತರಿಸಿ ಹೋಗಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News