ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಲಿ; ಡಾ.ಜಿ. ಪರಮೇಶ್ವರ ಆಗ್ರಹ

ಮಧುಗಿರಿಯಿಂದ ತುಮಕೂರಿಗೆ ಹೊರಟ ಬಸ್‌ ಮಾರ್ಗ ಮಧ್ಯೆ ಜಟ್ಟಿ ಅಗ್ರಹಾರದಲ್ಲಿ ಭೀಕರ ಅಪಘಾತಕ್ಕೆ ಒಳಗಾಗಿದ್ದು, 5 ಜನ ಸಾವನ್ನಪ್ಪಿದ್ದಾರೆ. 

Last Updated : Oct 30, 2019, 04:35 PM IST
ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಲಿ; ಡಾ.ಜಿ. ಪರಮೇಶ್ವರ ಆಗ್ರಹ title=
File image

ಕೊರಟಗೆರೆ: ಇಂದು ಕೊರಟಗೆರೆ ಸಮೀಪ ಜಟ್ಟಿ ಅಗ್ರಹಾರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತ ಪಟ್ಟವರ ಕುಟುಂಬಕ್ಕೆ ಸರ್ಕಾರ 5 ಲಕ್ಷ ರೂ. ಪರಿಹಾರ ಘೋಷಿಸಬೇಕು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಆಗ್ರಹಿಸಿದರು.

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಪಾಘತದಿಂದ ಗಾಯಗೊಂಡವರ ಆರೋಗ್ಯ ವಿಚಾರಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಡಾ. ಜಿ. ಪರಮೇಶ್ವರ, ಮಧುಗಿರಿಯಿಂದ ತುಮಕೂರಿಗೆ ಹೊರಟ ಬಸ್‌ ಮಾರ್ಗ ಮಧ್ಯೆ ಜಟ್ಟಿ ಅಗ್ರಹಾರದಲ್ಲಿ ಭೀಕರ ಅಪಘಾತಕ್ಕೆ ಒಳಗಾಗಿದ್ದು, 5 ಜನ ಸಾವನ್ನಪ್ಪಿದ್ದಾರೆ. 15 ಕ್ಕೂ ಹೆಚ್ಚು ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಕುಟುಂಬಕ್ಕೆ ಸರಕಾರ 5 ಲಕ್ಷ ರೂ. ಪರಿಹಾರ ಘೋಷಿಸಲಿ ಎಂದರು.

ಜೊತೆಗೆ, ಈ ಮಾರ್ಗದಲ್ಲಿ ಇದು ಎರಡನೇ ಅಪಘಾತವಾಗಿದೆ. ಬಸ್‌ಗಳ ವೇಗಕ್ಕೆ ಕಡಿವಾಣ ಹಾಕಬೇಕಿದೆ. ಈ ನಿಟ್ಟಿನಲ್ಲಿ ಆರ್‌ಟಿಒ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿ, ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಆರ್‌ಟಿಒ ಅಧಿಕಾರಿಗಳು ಖಾಸಗಿ ಬಸ್‌ ಮಾಲೀಕರ ಜೊತೆ ಶಾಮೀಲಾಗಿದ್ದರೆ ಕೂಡಲೇ ಡಿಸಿ ಈ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಬೇಕು ಎಂದ ಪರಮೇಶ್ವರ ಈ ಸಂಬಂಧ ಸಾರಿಗೆ ಸಚಿವರೊಂದಿಗೆ ಮಾತನಾಡುವುದಾಗಿ ತಿಳಿಸಿದರು.

Trending News