ಚಿಕ್ಕಮಗಳೂರು: ಹೊಸ ವರ್ಷಕ್ಕೆ ಕೇವಲ 2 ವಾರ ಬಾಕಿ ಇದೆ. ಇಯರ್ ಎಂಡ್ ಸೆಲೆಬ್ರೇಶನ್, ಕ್ರಿಸ್​ಮಸ್ ಹೀಗೆ ಸಾಲು-ಸಾಲು ರಜೆಗಳಿವೆ ಅಂತಾ ಕಾಫಿನಾಡು ಚಿಕ್ಕಮಗಳೂರಿನ ಕಡೆ ಟ್ರಿಪ್ ಪ್ಲ್ಯಾನ್ ಮಾಡಿದ್ರೆ ಇಂದೇ ಕ್ಯಾನ್ಸಲ್ ಮಾಡಿಬಿಡಿ.


COMMERCIAL BREAK
SCROLL TO CONTINUE READING

ಕಾಫಿನಾಡಿಗೆ ಟೂರ್ ಮಾಡುವ ಪ್ರವಾಸಿಗರಿಗೆ ಚಿಕ್ಕಮಗಳೂರು ಜಿಲ್ಲಾಡಳಿತ ಮಹತ್ವದ ಮಾಹಿತಿ ನೀಡಿದೆ. ಬರೋಬ್ಬರಿ 6 ದಿನಗಳ ಕಾಲ ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಸೇರಿದಂತೆ ಎಲ್ಲವೂ ಬಂದ್ ಆಗಲಿವೆ.


ಇದನ್ನೂ ಓದಿಹಳೆಯ ಪಿಂಚಣಿ ಯೋಜನೆ ಬಗ್ಗೆ ಹೊಸ ಅಪ್ಡೇಟ್ ! ಕೇಂದ್ರ ಸರ್ಕಾರ ನೀಡಿದ ಮಾಹಿತಿ ಇದು !


ಡಿಸೆಂಬರ್ 22 ರಿಂದ 27ರವರೆಗೆ 6 ದಿನಗಳ ಕಾಲ ಗಿರಿ ಭಾಗಕ್ಕೆ ಟೂರಿಸ್ಟ್ ಬ್ಯಾನ್ ಮಾಡಲಾಗಿದೆ. ಡಿ.24, 25, 26ರಂದು ಕಾಫಿನಾಡ ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ನಡೆಯಲಿದೆ. ಡಿ.26ರಂದು 20ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಲಿದ್ದಾದೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಪ್ರವಾಸಕ್ಕೆ ನಿರ್ಬಂಧ ಜಿಲ್ಲಾಡಳಿತ ಹೇರಿದೆ.


ಗಿರಿ ಭಾಗದಲ್ಲಿ ಹೊಸವರ್ಷಾಚರಣೆ ಮತ್ತು ಕ್ರಿಸ್‍ಮಸ್ ಸೆಲೆಬ್ರೇಷನ್ ಮಾಡುವುದಕ್ಕೆ ಸಾಧ್ಯವಿಲ್ಲ. 6 ದಿನಗಳ ಕಾಲ ಚಂದ್ರದ್ರೋಣ ಪರ್ವತಗಳ ಸಾಲಿನ ಪ್ರವಾಸಿ ತಾಣಗಳಿಗೆ ಟೂರಿಸ್ಟ್ ಬ್ಯಾನ್ ಮಾಡಲಾಗಿದೆ. ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾದಲ್ಲಿ ಡಿ.17ರಿಂದ 26ರವರೆಗೆ ದತ್ತಜಯಂತಿ ಸಂಭ್ರಮ ನಡೆಯಲಿದೆ. ಹೀಗಾಗಿ ಟೂರಿಸ್ಟ್ ಗಾಡಿ, ಮಾಲಾಧಾರಿಗಳ ಗಾಡಿಯಿಂದ ಟ್ರಾಫಿಕ್ ಜಾಮ್ ಸಮಸ್ಯೆ ಆಗಬಾರದೆಂದು ನಿರ್ಬಂಧ ಹೇರಲಾಗಿದೆ.


ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಪ್ರಮುಖ ಸುದ್ದಿ! ಕೇಂದ್ರ ಸರ್ಕಾರ ಜಾರಿಗೊಳಿಸಿದೆ ಈ ಆದೇಶ !


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.