ಭೀಕರ ರಸ್ತೆ ಅಪಘಾತ; 9 ಮಂದಿ ಸ್ಥಳದಲ್ಲೇ ದುರ್ಮರಣ

ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಸಿಂದಗಿ ತಾಲೂಕಿನ ಚಿಕ್ಕ ಸಿಂದಗಿ ಬಳಿಯ ಮಧುವನ ಡಾಬಾ ಹತ್ತಿರ ಈ ದುರ್ಘಟನೆ ಸಂಭವಿಸಿದೆ.

Last Updated : Mar 22, 2019, 11:11 AM IST
ಭೀಕರ ರಸ್ತೆ ಅಪಘಾತ; 9 ಮಂದಿ ಸ್ಥಳದಲ್ಲೇ ದುರ್ಮರಣ title=

ವಿಜಯಪುರ: ಟ್ಯಾಂಕರ್ ಮತ್ತು ಕ್ರೂಸರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ. 

ಇಲ್ಲಿನ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಸಿಂದಗಿ ತಾಲೂಕಿನ ಚಿಕ್ಕ ಸಿಂದಗಿ ಬಳಿಯ ಮಧುವನ ಡಾಬಾ ಹತ್ತಿರ ಈ ದುರ್ಘಟನೆ ಸಂಭವಿಸಿದ್ದು, ಕ್ರೂಸರ್ ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ. 

ಮೃತರನ್ನು ಸಾಗರ್(25), ಚಾಂದಬಾಶಾ(24), ಅಜೀಮ್(26), ಅಂಬರೀಶ್(28), ಶಕೀರ್ ಕೆ.ಕೆ(25), ಗುರು(32), ಶ್ರೀನಾಥ(30), ಯುನೂಸ್(27) ಹಾಗೂ ಮಂಗಸೂಬ್( 27) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 6 ಜನರಿಗೆ ಗಂಭೀರ ಗಾಯಗಳಾಗಿವೆ. 

ಗೊವಾಪ್ರವಾಸ ಮುಗಿಸಿಕೊಂಡು ಹಿಂತಿರುಗುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದ್ದು, ಮೃತರನ್ನು ಕಲಬುರ್ಗಿ ಜಿಲ್ಲೆ ಚಿತ್ತಾಪುರ ಪಟ್ಟಣದವರು ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸಿಂದಗಿ ಹಾಗೂ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಈ ಹಿಂದೆಯೂ ಸಹ ಇದೇ ಸ್ಥಳದಲ್ಲಿ ಹಲವು ಬಾರಿ ಅಪಘಾತಗಳು ಸಂಭವಿಸಿದ್ದವು ಎನ್ನಲಾಗಿದೆ.
 

Trending News